Homeಕರ್ನಾಟಕಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ...

ಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ ಹೊಡೆಯಲಾಗಿದೆ ಎಂದ ಹೈಕೋರ್ಟ್‌

- Advertisement -
- Advertisement -

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕಂಚಿನ ಪರಶುರಾಮ ಪ್ರತಿಮೆಗೆ ಬದಲಾಗಿ ಹಿತ್ತಾಳೆ, ತಾಮ್ರ ಮತ್ತು ಸತು ಬಳಸಿ ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌, ಜನರ ಹಣವನ್ನು ಲೂಟಿ ಮಾಡಲಾಗಿದೆ ಎಂದು ಕಿಡಿಕಾರಿದೆ.

ಬೆಂಗಳೂರಿನ ಸರ್. ಎಂ ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಯಾಗಿರುವ ಕಲಾವಿದ ಕೃಷ್ಣ ನಾಯಕ್‌ ಅವರು ತಮ್ಮ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ಖಚಿತಪಡಿಸಿರು ಪೀಠ, “ನಿಮಗೆ ಕೊಟ್ಟಿರುವುದು ನಿರ್ಮಿತಿ ಕೇಂದ್ರ ಅಥವಾ ದೂರುದಾರರಿಗೆ ಸೇರಿದ ದುಡ್ಡಲ್ಲ, ಅದು ಜನರ ದುಡ್ಡು. ನೀವು ಜನರ ಹಣದಲ್ಲಿ ಆಟವಾಡಲಾಗದು” ಎಂದು ಖಾರವಾಗಿ ನುಡಿದಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

“ಪ್ರತಿಮೆಗೆ ಕಂಚು ಬಳಸುವ ಬದಲು ಹಿತ್ತಾಳೆ ಮತ್ತು ಸತುವನ್ನೇಕೆ ಬಳಸಲಾಗಿದೆ? ಪ್ರತಿಮೆ ಹೆಸರಿನಲ್ಲಿ ಕಳಪೆ ಕಾಮಗಾರಿ ನಡೆಸಿ ಸಾರ್ವಜನಿಕರ ಹಣವನ್ನು ಲೂಟಿ ಮಾಡಲಾಗಿದೆ. 1.83 ಕೋಟಿ ರೂಪಾಯಿ ಪೈಕಿ ಈಗಾಗಲೇ ನಿಮಗೆ 1.20 ಕೋಟಿ ರೂಪಾಯಿ ಪಾವತಿಯಾಗಿದೆ. ಇದು ಸಾರ್ವಜನಿಕರ ಹಣ. ಎಲ್ಲವೂ ದಾಖಲೆಯಲ್ಲಿರುವುದರಿಂದ ಯಾವುದೇ ಸೂಚನೆ ಪಡೆಯುವ ಅಗತ್ಯವೇ ಇಲ್ಲ. ಜನರ ಹಣದ ಜೊತೆ ಆಟ ಆಡುವವರನ್ನು ಬಿಡಲಾಗದು. ಪುಣ್ಯಕ್ಕೆ ಪ್ರತಿಮೆ ಮಾರನೇಯ ದಿನ ಕುಸಿದಿಲ್ಲ. ಅದು ಬೀಳುವ ಮುಂಚೆಯೇ ತೆರವು ಮಾಡಲಾಗಿದೆ” ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಅರ್ಜಿದಾರರ ವಿರುದ್ಧ ಮೌಖಿಕವಾಗಿ ಕಿಡಿಕಾರಿದ್ದಾರೆ

“35 ಅಡಿ ಎತ್ತರದ ಪ್ರತಿಮೆಯ ಭಾರವನ್ನು ಹಿತ್ತಾಳೆ ಮತ್ತು ಸತು ತಾಳುತ್ತದೆಯೇ? ಪ್ರತಿಮೆಗೆ ಕಂಚನ್ನೇ ಬಳಸಬೇಕು ಎಂದು ಹೇಳಿರುವುದಕ್ಕೆ ನಿಖರ ಕಾರಣವಿದೆ. ಹಿತ್ತಾಳೆ ಮತ್ತು ಸತು ಬಳಸಿ ಪ್ರತಿಮೆ ನಿರ್ಮಿಸಲು 1.20 ಕೋಟಿ ರೂಪಾಯಿ ಏಕೆ ಪಡೆದಿರಿ? ಕಂಚು ಬಳಕೆ ಮಾಡದಿರುವುದು ಕ್ರಿಮಿನಲ್‌ ಅಪರಾಧ. ನಿರ್ಮಿತಿ ಕೇಂದ್ರದ ಬಗ್ಗೆ ಚೆನ್ನಾಗಿ ತಿಳಿದಿದೆ. ಅದರ ಬಗ್ಗೆ ಕಡಿಮೆ ಮಾತನಾಡಿದಷ್ಟು ಒಳ್ಳೆಯದು” ಎಂದು ಹೈಕೋರ್ಟ್ ಚಾಟಿ ಬೀಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ “ಪರಶುರಾಮ ಪ್ರತಿಮೆ ತಲೆಯ ಭಾಗ ಭಾರ ತಾಳಲಾರದ್ದರಿಂದ ಅದರ ಜೋಡಣೆ ಬದಲಿಸಲಾಗಿದೆ. ಕಂಚಿನಲ್ಲಿ ಪ್ರತಿಮೆ ನಿರ್ಮಿಸಬೇಕು ಎಂದು ಹೇಳಿದ್ದು, ನಾವು ತಾಮ್ರ, ಸತು ಮತ್ತು ಹಿತ್ತಾಳೆಯನ್ನು ಬಳಕೆ ಮಾಡಿದ್ದೇವೆ. ಸತು ಮತ್ತು ಹಿತ್ತಾಳೆಯು ಕಂಚಿಗೆ ಸಮನಾಗುತ್ತದೆ” ಎಂದು ಸಮಜಾಯಿಷಿ ನೀಡಿದ್ದಾರೆ.

“ಕೆಲಸದ ಭಾಗವಾಗಿ 1.20 ಕೋಟಿ ರೂಪಾಯಿ ಸ್ವೀಕರಿಸಿದ್ದೇವೆ. ನಮ್ಮ ಕೆಲಸವನ್ನು ಪೂರ್ಣಗೊಳಿಸುತ್ತೇವೆ. ಆಮೇಲೆ ಅದನ್ನು ಪರಿಶೀಲಿಸಬಹುದು. ಪರಶುರಾಮ ಥೀಮ್‌ ಪಾರ್ಕ್‌ನಲ್ಲಿ ಪರಶುರಾಮ ಪ್ರತಿಮೆ ನಿರ್ಮಾಣವೂ ಒಂದಾಗಿತ್ತು. ಉದ್ಘಾಟನೆಯ ಹಿನ್ನೆಲೆಯಲ್ಲಿ ಬೇಗ ಮಾಡಿ ಮುಗಿಸಲಾಗಿತ್ತು. ಆನಂತರ ಜಿಲ್ಲಾಧಿಕಾರಿಯು ಅದನ್ನು ಪುನರ್‌ ನಿರ್ಮಾಣ ಮಾಡುವಂತೆ ಸೂಚಿಸಿದ್ದಾರೆ. ಈಗ ಸರ್ಕಾರ ಇಡೀ ಪ್ರಕರಣವನ್ನು ತನಿಖೆಗೆ ಒಪ್ಪಿಸಿದ್ದರಿಂದ ಅಲ್ಲಿಗೆ ತೆರಳಿ ಕೆಲಸ ಮಾಡಲಾಗುತ್ತಿಲ್ಲ. ಅವಕಾಶ ನೀಡಿದರೆ ಕಂಚಿನಲ್ಲೇ ಕಾಲಮಿತಿಯಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು” ಎಂದಿದ್ದಾರೆ.

“ದೂರುದಾರರು ರಾಜಕೀಯ ಪಕ್ಷದ ಪ್ರತಿನಿಧಿ. ಅವರು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸದೇ ಹೈಕೋರ್ಟ್‌ನ ವಿಭಾಗೀಯ ಪೀಠವು ವಜಾ ಮಾಡಿದೆ. ಹಿಂದಿನ ಸರ್ಕಾರ ಮತ್ತು ಮಾಜಿ ಸಚಿವರ ವರ್ಚಸ್ಸು ಹಾಳು ಮಾಡುವ ಉದ್ದೇಶದಿಂದ ಈ ಕೆಲಸ ಮಾಡಲಾಗುತ್ತಿದೆ. ದೂರುದಾರರು ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ವಿರುದ್ಧ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ. ಹಾಗಾಗಿ, ಈ ರೀತಿ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ, ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿ) ನೀಡಿರುವ ವರದಿಯ ಪ್ರಕಾರ ಅರ್ಜಿದಾರರು ಪರಶುರಾಮ ಪ್ರತಿಮೆಗೆ ಕಂಚು ಬಳಸಿಲ್ಲ. ಶೇ. 80ರಷ್ಟು ಹಿತ್ತಾಳೆ ಮತ್ತು ಶೇ.20ರಷ್ಟು ಸತು ಬಳಕೆ ಮಾಡಿದ್ದಾರೆ ಎಂದು ವರದಿ ನೀಡಿದೆ. ಆದರೆ, ನಿರ್ಮಿತಿ ಕೇಂದ್ರ ಮತ್ತು ಅರ್ಜಿದಾರರು ಕಂಚು ಬಳಕೆ ಮಾಡಿದೆ ಎಂದು ಹೇಳಿದೆ. ನಿರ್ಮಿತಿ ಕೇಂದ್ರ ಹೇಳುತ್ತಿರುವುದನ್ನು ನೋಡಿದರೆ ಇನ್ನಷ್ಟು ತನಿಖೆಯಾಗಬೇಕಿದೆ. ಜಿಲ್ಲಾಧಿಕಾರಿ ಪ್ರತಿಮೆ ತೆರವು ಮಾಡಿ ಎಂದು ಆದೇಶ ಮಾಡಿದ್ದಾರೆ. ಈ ಆದೇಶವನ್ನು ನಿರ್ಮಿತಿ ಕೇಂದ್ರವು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ತನಿಖೆ ಪ್ರಗತಿಯಲ್ಲಿರುವುದರಿಂದ ತೆರವು ಮಾಡುವಂತೆ ಆದೇಶಿಸಿದ್ದನ್ನು ತಡೆಯಿರಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ತನಿಖೆ ನಡೆಯಲಿ, ಅರ್ಜಿದಾರರಿಗೂ ಹಣ ತಲುಪಿದೆಯೋ ಗೊತ್ತಿಲ್ಲ. ಅವರ ಪಾತ್ರವೂ ಬಹಿರಂಗವಾಗಬೇಕಿದೆ. ಇದರಲ್ಲಿ ನಿಜವಾದ ಅಪರಾಧಿ ಯಾರು ಎಂಬುವುದು ತಿಳಿಯಬೇಕಿದೆ” ಎಂದಿದ್ದಾರೆ.

ಇದನ್ನೂ ಓದಿ : ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ : ‘ಕರಾಳ ದಿನ’ ಆಚರಣೆಗೆ ಕರವೇ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...