Homeಕರ್ನಾಟಕಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಆರೋಪ: ಸಿಐಡಿ ತನಿಖೆಗೆ ಸಿಎಂ ಆದೇಶ

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಆರೋಪ: ಸಿಐಡಿ ತನಿಖೆಗೆ ಸಿಎಂ ಆದೇಶ

- Advertisement -
- Advertisement -

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಥೀಮ್ ಪಾರ್ಕ್‌ ಕಾಮಗಾರಿ ಕಳಪೆಯಾಗಿದೆ ಮತ್ತು ಅವ್ಯವಹಾರ ನಡೆದಿದೆ ಎಂಬ ಆರೋಪದ ಕುರಿತು ಉನ್ನತ ಮಟ್ಟದ ತನಿಖೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ ಹೆಬ್ಬಾಳ್ಕರ್ ಅವರು ಶಿಫಾರಸ್ಸು ಮಾಡಿದ್ದರು. ಇದಕ್ಕೆ ಒಪ್ಪಿಗೆ ಸೂಚಿಸಿರುವ ಸಿಎಂ ಸಿದ್ದರಾಮಯ್ಯ, ತನಿಖೆಯನ್ನು ಸಿಐಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿ ಕಳಪೆಯಾಗಿದೆ ಮತ್ತು ಅವ್ಯವಹಾರದಿಂದ ಕೂಡಿದೆ. ಇದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು. ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಖುದ್ದು ಸಚಿವೆ ಲಕ್ಷಿ ಹೆಬ್ಬಾಳ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.

ಜನವರಿ 27, 2023ರಂದು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾರ್ಕಳದ ತಾಲೂಕಿನ ಬೈಲೂರಿನ ಉಮಿಕುಂಜ ಬೆಟ್ಟದ ಮೇಲೆ ನಿರ್ಮಾಣವಾಗಿರುವ ಪರಶುರಾಮ ಥೀಂ ಪಾರ್ಕ್​ಅನ್ನು ಉದ್ಘಾಟನೆ ಮಾಡಿದ್ದರು.

ಬೊಮ್ಮಾಯಿ ಸರ್ಕಾರದಲ್ಲಿ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಸುನಿಲ್ ಕುಮಾರ್ ಅವರ ಬಹಳ ಮಹತ್ವಕಾಂಕ್ಷೆಯ ಯೋಜನೆ ಇದಾಗಿತ್ತು. ಥೀಮ್ ಪಾರ್ಕ್ ಉದ್ಘಾಟನೆಯನ್ನು ಬಹಳ ಅದ್ದೂರಿಯಾಗಿ ನೆರವೇರಿಸಿದ್ದ ಸುನಿಲ್ ಕುಮಾರ್ ಈ ಕುರಿತು ಹೆಮ್ಮೆ ಪಟ್ಟಿದ್ದರು.

ಬಳಿಕ, ಥೀಮ್ ಪಾರ್ಕ್‌ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿತ್ತು. ಕಾಂಗ್ರೆಸ್‌ ಸರ್ಕಾರ ರಚನೆಯಾದ ಬಳಿಕ ಕಾಮಗಾರಿ ಕುರಿತು ತನಿಖೆ ಮಾಡುವಂತೆ ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗಿತ್ತು. ಥೀಮ್ ಪಾರ್ಕ್‌ನಲ್ಲಿರುವ ಪರಶುರಾಮ ಪ್ರತಿಮೆ ನಿಜವಾದ ಕಂಚಿನದ್ದು ಅಲ್ಲ, ಅದು ನಕಲಿ ಎಂಬ ಆರೋಪಗಳು ಕೇಳಿ ಬಂದಿತ್ತು. ಈ ನಡುವೆ ಅಕ್ಟೋಬರ್‌ 15, 2023ರಂದು ಥೀಮ್‌ ಪಾರ್ಕ್‌ನ ಪರಶುರಾಮ ಪ್ರತಿಮೆ ಏಕಾಏಕಿ ನಾಪತ್ತೆಯಾಗಿತ್ತು.Parashuram statue goes missing from theme park in Karkala | Parashuram park  karkala: ಭಾರೀ ವಿವಾದಕ್ಕೀಡಾಗಿದ್ದ ಪರಶುರಾಮನ ಮೂರ್ತಿ ದಿಢೀರ್ ನಾಪತ್ತೆ ; ಕಾರ್ಕಳ ಥೀಮ್  ಪಾರ್ಕ್ ಸಾರ್ವಜನಿಕರ ...

ಕಾರ್ಕಳ ಪರಶುರಾಮ ಮೂರ್ತಿ ಮಾಯ, ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು - News Kannada  (ನ್ಯೂಸ್ ಕನ್ನಡ)

ಆ ಸಂದರ್ಭದಲ್ಲಿ ಶಾಸಕ ಸುನಿಲ್ ಕುಮಾರ್ ಸೇರಿದಂತೆ ಬಿಜೆಪಿಗರು, ದುರಸ್ಥಿಗಾಗಿ ಕಂಚಿನ ಪ್ರತಿಮೆಯನ್ನು ತೆರವು ಮಾಡಲಾಗಿದೆ. ಅದು ನಿಜವಾದ ಕಂಚಿನ ಪ್ರತಿಮೆ ಎಂದು ಸಮರ್ಥಿಸಿಕೊಂಡಿದ್ದರು. ಬಳಿಕ ಚರ್ಚೆಗಳು ತಣ್ಣಗಾಗಿತ್ತು. ಇದೀಗ ಸಿಎಂ ಥೀಮ್ ಪಾರ್ಕ್‌ ಕಾಮಗಾರಿಯ ಕುರಿತು ಸಿಒಡಿ ತನಿಖೆಗೆ ಆದೇಶಿಸಿದ್ದಾರೆ.

ಇದನ್ನೂ ಓದಿ : ಬೆಳ್ತಂಗಡಿ ಸೌಜನ್ಯಾ ಪ್ರಕರಣ: ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೊಟೀಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...