Homeಅಂತರಾಷ್ಟ್ರೀಯತಂದೆಯ ಕೊಲೆಗಾರರನ್ನು ಕ್ಷಮಿಸುತ್ತಿದ್ದೇವೆ: ಪತ್ರಕರ್ತ ಜಮಾಲ್ ಖಶೋಗ್ಗಿ ಪುತ್ರರು

ತಂದೆಯ ಕೊಲೆಗಾರರನ್ನು ಕ್ಷಮಿಸುತ್ತಿದ್ದೇವೆ: ಪತ್ರಕರ್ತ ಜಮಾಲ್ ಖಶೋಗ್ಗಿ ಪುತ್ರರು

- Advertisement -
- Advertisement -

ಎರಡು ವರ್ಷದ ಹಿಂದೆ ಕೊಲೆಯಾದ ಸೌದಿ ಪತ್ರಕರ್ತ ಜಮಾಲ್ ಖಶೋಗ್ಗಿ ಅವರ ಪುತ್ರರು ತಮ್ಮ ತಂದೆಯ ಕೊಲೆಗಾರರನ್ನು “ಕ್ಷಮಿಸುತ್ತೇವೆ” ಎಂದು ಹೇಳಿದ್ದಾರೆ.

“ಹುತಾತ್ಮರಾದ ಜಮಾಲ್ ಖಶೋಗ್ಗಿ ಅವರ ಪುತ್ರರಾದ ನಾವು ನಮ್ಮ ತಂದೆಯನ್ನು ಕೊಂದವರನ್ನು ಕ್ಷಮಿಸಿದ್ದೇವೆ ಎಂದು ಘೋಷಿಸುತ್ತಿದ್ದೇವೆ” ಎಂದು ಅವರ ಮಗ ಸಲಾಹ್ ಖಶೋಗಿ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಖಶೋಗ್ಗಿಯವರ ಮಗ ಸಲಾಹ್ ಅವರ ಘೋಷನೆಯ ಕಾನೂನುಬದ್ಧ ಪ್ರಕಟಣೆಗಳು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.

ರಾಜಮನೆತನದ ಒಳಗಿನವರಾಗಿದ್ದ ಇವರು ನಂತರ ಕಟು ಟೀಕಾಕಾರರಾಗಿದ್ದರು. ಇವರನ್ನು ಅಕ್ಟೋಬರ್ 2, 2018 ರಂದು ಇಸ್ತಾಂಬುಲ್‌ನ ಸೌದಿ ಅರೇಬಿಯಾದ ದೂತವಾಸದಲ್ಲಿ ಕೊಲೆಗೀಡಾಗಿದ್ದರು. ಈ ಪ್ರಕರಣವು ಅಂತರರಾಷ್ಟ್ರೀಯ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಕಾರ್ಯಾಚರಣೆಯಲ್ಲಿ ರಿಯಾದ್‌ನಿಂದ ಕಳುಹಿಸಲ್ಪಟ್ಟ 15 ಏಜೆಂಟರು ಇದ್ದರೆಂದು ಎಂದು ಟರ್ಕಿ ತಿಳಿಸಿತ್ತು. ಅವರ ದೇಹದ ಅವಶೇಷಗಳು ಕೂಡಾ ಪತ್ತೆಯಾಗಿಲ್ಲ.

ಪ್ರಕರಣದಲ್ಲಿ ದೋಷಾರೋಪಣೆ ಸಲ್ಲಿಸಿದ 11 ವ್ಯಕ್ತಿಗಳಲ್ಲಿ, ಐವರಿಗೆ ಮರಣದಂಡನೆ ಶಿಕ್ಷೆ, ಮೂವರಿಗೆ ಒಟ್ಟು 24 ವರ್ಷಗಳು ಮತ್ತು ಇತರರನ್ನು ಖುಲಾಸೆಗೊಳಿಸಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಡಿಸೆಂಬರ್‌ನಲ್ಲಿ ತಿಳಿಸಿದ್ದಾರೆ.

ನ್ಯಾಯಾಂಗ ವ್ಯವಸ್ಥೆಯಲ್ಲಿ ತನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಸಲಾಹ್ ಈ ಹಿಂದೆ ಹೇಳಿದ್ದು, ಈ ಪ್ರಕರಣವನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವುದಾಗಿ ಅವರು ಹೇಳಿದ್ದರು.

ಸಲಾಹ್ ಸೇರಿದಂತೆ ಖಶೋಗ್ಗಿ ಮಕ್ಕಳು ಬಹು ಮಿಲಿಯನ್ ಡಾಲರ್ ಮನೆಗಳನ್ನು ಪಡೆದಿದ್ದಾರೆ ಮತ್ತು ಅಧಿಕಾರಿಗಳು ಅವರಿಗೆ ತಿಂಗಳಿಗೆ ಸಾವಿರಾರು ಡಾಲರ್ಗಳನ್ನು ಪಾವತಿಸುತ್ತಿದ್ದಾರೆ ವಾಷಿಂಗ್ಟನ್ ಪೋಸ್ಟ್ ಏಪ್ರಿಲ್‌ನಲ್ಲಿ ವರದಿ ಮಾಡಿತ್ತು.

ಆದರೆ ಈ ವರದಿಯನ್ನು ಸಲಾಹ್ ಅಲ್ಲಗೆಳೆದಿದ್ದಾರೆ. ಸೌದಿ ಸರ್ಕಾರದೊಂದಿಗೆ ಹಣಕಾಸಿನ ಒಪ್ಪಂದದ ಬಗ್ಗೆ ಚರ್ಚಿಸುವುದನ್ನು ನಿರಾಕರಿಸಿದರು.

ಸಿಐಎ ಮತ್ತು ಅಮೆರಿಕಾ ವಿಶೇಷ ರಾಯಭಾರಿ, ಈ ಕೊಲೆಯಲ್ಲಿ ಸೌದಿ ಆಡಳಿತಗಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ನೇರ ಕೈವಾಡವಿದೆ ಎಂದು ಸೂಚಿಸಿದ್ದರು ಆದರೆ ಸೌದಿ ಇದನ್ನು ನಿರಾಕರಿಸಿದೆ.


ಓದಿ: ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಹಿನ್ನಲೆಯೇನು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...