Homeಅಂತರಾಷ್ಟ್ರೀಯತಂದೆಯ ಕೊಲೆಗಾರರನ್ನು ಕ್ಷಮಿಸುತ್ತಿದ್ದೇವೆ: ಪತ್ರಕರ್ತ ಜಮಾಲ್ ಖಶೋಗ್ಗಿ ಪುತ್ರರು

ತಂದೆಯ ಕೊಲೆಗಾರರನ್ನು ಕ್ಷಮಿಸುತ್ತಿದ್ದೇವೆ: ಪತ್ರಕರ್ತ ಜಮಾಲ್ ಖಶೋಗ್ಗಿ ಪುತ್ರರು

- Advertisement -
- Advertisement -

ಎರಡು ವರ್ಷದ ಹಿಂದೆ ಕೊಲೆಯಾದ ಸೌದಿ ಪತ್ರಕರ್ತ ಜಮಾಲ್ ಖಶೋಗ್ಗಿ ಅವರ ಪುತ್ರರು ತಮ್ಮ ತಂದೆಯ ಕೊಲೆಗಾರರನ್ನು “ಕ್ಷಮಿಸುತ್ತೇವೆ” ಎಂದು ಹೇಳಿದ್ದಾರೆ.

“ಹುತಾತ್ಮರಾದ ಜಮಾಲ್ ಖಶೋಗ್ಗಿ ಅವರ ಪುತ್ರರಾದ ನಾವು ನಮ್ಮ ತಂದೆಯನ್ನು ಕೊಂದವರನ್ನು ಕ್ಷಮಿಸಿದ್ದೇವೆ ಎಂದು ಘೋಷಿಸುತ್ತಿದ್ದೇವೆ” ಎಂದು ಅವರ ಮಗ ಸಲಾಹ್ ಖಶೋಗಿ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಖಶೋಗ್ಗಿಯವರ ಮಗ ಸಲಾಹ್ ಅವರ ಘೋಷನೆಯ ಕಾನೂನುಬದ್ಧ ಪ್ರಕಟಣೆಗಳು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.

ರಾಜಮನೆತನದ ಒಳಗಿನವರಾಗಿದ್ದ ಇವರು ನಂತರ ಕಟು ಟೀಕಾಕಾರರಾಗಿದ್ದರು. ಇವರನ್ನು ಅಕ್ಟೋಬರ್ 2, 2018 ರಂದು ಇಸ್ತಾಂಬುಲ್‌ನ ಸೌದಿ ಅರೇಬಿಯಾದ ದೂತವಾಸದಲ್ಲಿ ಕೊಲೆಗೀಡಾಗಿದ್ದರು. ಈ ಪ್ರಕರಣವು ಅಂತರರಾಷ್ಟ್ರೀಯ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಕಾರ್ಯಾಚರಣೆಯಲ್ಲಿ ರಿಯಾದ್‌ನಿಂದ ಕಳುಹಿಸಲ್ಪಟ್ಟ 15 ಏಜೆಂಟರು ಇದ್ದರೆಂದು ಎಂದು ಟರ್ಕಿ ತಿಳಿಸಿತ್ತು. ಅವರ ದೇಹದ ಅವಶೇಷಗಳು ಕೂಡಾ ಪತ್ತೆಯಾಗಿಲ್ಲ.

ಪ್ರಕರಣದಲ್ಲಿ ದೋಷಾರೋಪಣೆ ಸಲ್ಲಿಸಿದ 11 ವ್ಯಕ್ತಿಗಳಲ್ಲಿ, ಐವರಿಗೆ ಮರಣದಂಡನೆ ಶಿಕ್ಷೆ, ಮೂವರಿಗೆ ಒಟ್ಟು 24 ವರ್ಷಗಳು ಮತ್ತು ಇತರರನ್ನು ಖುಲಾಸೆಗೊಳಿಸಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಡಿಸೆಂಬರ್‌ನಲ್ಲಿ ತಿಳಿಸಿದ್ದಾರೆ.

ನ್ಯಾಯಾಂಗ ವ್ಯವಸ್ಥೆಯಲ್ಲಿ ತನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಸಲಾಹ್ ಈ ಹಿಂದೆ ಹೇಳಿದ್ದು, ಈ ಪ್ರಕರಣವನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವುದಾಗಿ ಅವರು ಹೇಳಿದ್ದರು.

ಸಲಾಹ್ ಸೇರಿದಂತೆ ಖಶೋಗ್ಗಿ ಮಕ್ಕಳು ಬಹು ಮಿಲಿಯನ್ ಡಾಲರ್ ಮನೆಗಳನ್ನು ಪಡೆದಿದ್ದಾರೆ ಮತ್ತು ಅಧಿಕಾರಿಗಳು ಅವರಿಗೆ ತಿಂಗಳಿಗೆ ಸಾವಿರಾರು ಡಾಲರ್ಗಳನ್ನು ಪಾವತಿಸುತ್ತಿದ್ದಾರೆ ವಾಷಿಂಗ್ಟನ್ ಪೋಸ್ಟ್ ಏಪ್ರಿಲ್‌ನಲ್ಲಿ ವರದಿ ಮಾಡಿತ್ತು.

ಆದರೆ ಈ ವರದಿಯನ್ನು ಸಲಾಹ್ ಅಲ್ಲಗೆಳೆದಿದ್ದಾರೆ. ಸೌದಿ ಸರ್ಕಾರದೊಂದಿಗೆ ಹಣಕಾಸಿನ ಒಪ್ಪಂದದ ಬಗ್ಗೆ ಚರ್ಚಿಸುವುದನ್ನು ನಿರಾಕರಿಸಿದರು.

ಸಿಐಎ ಮತ್ತು ಅಮೆರಿಕಾ ವಿಶೇಷ ರಾಯಭಾರಿ, ಈ ಕೊಲೆಯಲ್ಲಿ ಸೌದಿ ಆಡಳಿತಗಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ನೇರ ಕೈವಾಡವಿದೆ ಎಂದು ಸೂಚಿಸಿದ್ದರು ಆದರೆ ಸೌದಿ ಇದನ್ನು ನಿರಾಕರಿಸಿದೆ.


ಓದಿ: ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಹಿನ್ನಲೆಯೇನು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...