Homeಅಂತರಾಷ್ಟ್ರೀಯತಂದೆಯ ಕೊಲೆಗಾರರನ್ನು ಕ್ಷಮಿಸುತ್ತಿದ್ದೇವೆ: ಪತ್ರಕರ್ತ ಜಮಾಲ್ ಖಶೋಗ್ಗಿ ಪುತ್ರರು

ತಂದೆಯ ಕೊಲೆಗಾರರನ್ನು ಕ್ಷಮಿಸುತ್ತಿದ್ದೇವೆ: ಪತ್ರಕರ್ತ ಜಮಾಲ್ ಖಶೋಗ್ಗಿ ಪುತ್ರರು

- Advertisement -
- Advertisement -

ಎರಡು ವರ್ಷದ ಹಿಂದೆ ಕೊಲೆಯಾದ ಸೌದಿ ಪತ್ರಕರ್ತ ಜಮಾಲ್ ಖಶೋಗ್ಗಿ ಅವರ ಪುತ್ರರು ತಮ್ಮ ತಂದೆಯ ಕೊಲೆಗಾರರನ್ನು “ಕ್ಷಮಿಸುತ್ತೇವೆ” ಎಂದು ಹೇಳಿದ್ದಾರೆ.

“ಹುತಾತ್ಮರಾದ ಜಮಾಲ್ ಖಶೋಗ್ಗಿ ಅವರ ಪುತ್ರರಾದ ನಾವು ನಮ್ಮ ತಂದೆಯನ್ನು ಕೊಂದವರನ್ನು ಕ್ಷಮಿಸಿದ್ದೇವೆ ಎಂದು ಘೋಷಿಸುತ್ತಿದ್ದೇವೆ” ಎಂದು ಅವರ ಮಗ ಸಲಾಹ್ ಖಶೋಗಿ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಖಶೋಗ್ಗಿಯವರ ಮಗ ಸಲಾಹ್ ಅವರ ಘೋಷನೆಯ ಕಾನೂನುಬದ್ಧ ಪ್ರಕಟಣೆಗಳು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.

ರಾಜಮನೆತನದ ಒಳಗಿನವರಾಗಿದ್ದ ಇವರು ನಂತರ ಕಟು ಟೀಕಾಕಾರರಾಗಿದ್ದರು. ಇವರನ್ನು ಅಕ್ಟೋಬರ್ 2, 2018 ರಂದು ಇಸ್ತಾಂಬುಲ್‌ನ ಸೌದಿ ಅರೇಬಿಯಾದ ದೂತವಾಸದಲ್ಲಿ ಕೊಲೆಗೀಡಾಗಿದ್ದರು. ಈ ಪ್ರಕರಣವು ಅಂತರರಾಷ್ಟ್ರೀಯ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಕಾರ್ಯಾಚರಣೆಯಲ್ಲಿ ರಿಯಾದ್‌ನಿಂದ ಕಳುಹಿಸಲ್ಪಟ್ಟ 15 ಏಜೆಂಟರು ಇದ್ದರೆಂದು ಎಂದು ಟರ್ಕಿ ತಿಳಿಸಿತ್ತು. ಅವರ ದೇಹದ ಅವಶೇಷಗಳು ಕೂಡಾ ಪತ್ತೆಯಾಗಿಲ್ಲ.

ಪ್ರಕರಣದಲ್ಲಿ ದೋಷಾರೋಪಣೆ ಸಲ್ಲಿಸಿದ 11 ವ್ಯಕ್ತಿಗಳಲ್ಲಿ, ಐವರಿಗೆ ಮರಣದಂಡನೆ ಶಿಕ್ಷೆ, ಮೂವರಿಗೆ ಒಟ್ಟು 24 ವರ್ಷಗಳು ಮತ್ತು ಇತರರನ್ನು ಖುಲಾಸೆಗೊಳಿಸಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಡಿಸೆಂಬರ್‌ನಲ್ಲಿ ತಿಳಿಸಿದ್ದಾರೆ.

ನ್ಯಾಯಾಂಗ ವ್ಯವಸ್ಥೆಯಲ್ಲಿ ತನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಸಲಾಹ್ ಈ ಹಿಂದೆ ಹೇಳಿದ್ದು, ಈ ಪ್ರಕರಣವನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವುದಾಗಿ ಅವರು ಹೇಳಿದ್ದರು.

ಸಲಾಹ್ ಸೇರಿದಂತೆ ಖಶೋಗ್ಗಿ ಮಕ್ಕಳು ಬಹು ಮಿಲಿಯನ್ ಡಾಲರ್ ಮನೆಗಳನ್ನು ಪಡೆದಿದ್ದಾರೆ ಮತ್ತು ಅಧಿಕಾರಿಗಳು ಅವರಿಗೆ ತಿಂಗಳಿಗೆ ಸಾವಿರಾರು ಡಾಲರ್ಗಳನ್ನು ಪಾವತಿಸುತ್ತಿದ್ದಾರೆ ವಾಷಿಂಗ್ಟನ್ ಪೋಸ್ಟ್ ಏಪ್ರಿಲ್‌ನಲ್ಲಿ ವರದಿ ಮಾಡಿತ್ತು.

ಆದರೆ ಈ ವರದಿಯನ್ನು ಸಲಾಹ್ ಅಲ್ಲಗೆಳೆದಿದ್ದಾರೆ. ಸೌದಿ ಸರ್ಕಾರದೊಂದಿಗೆ ಹಣಕಾಸಿನ ಒಪ್ಪಂದದ ಬಗ್ಗೆ ಚರ್ಚಿಸುವುದನ್ನು ನಿರಾಕರಿಸಿದರು.

ಸಿಐಎ ಮತ್ತು ಅಮೆರಿಕಾ ವಿಶೇಷ ರಾಯಭಾರಿ, ಈ ಕೊಲೆಯಲ್ಲಿ ಸೌದಿ ಆಡಳಿತಗಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ನೇರ ಕೈವಾಡವಿದೆ ಎಂದು ಸೂಚಿಸಿದ್ದರು ಆದರೆ ಸೌದಿ ಇದನ್ನು ನಿರಾಕರಿಸಿದೆ.


ಓದಿ: ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಹಿನ್ನಲೆಯೇನು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...