Homeಮುಖಪುಟಪ್ರೇಮವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಬೇಕು: ಗುಜರಾತ್‌ನ ಇಬ್ಬರು ಶಾಸಕರ ಒತ್ತಾಯ

ಪ್ರೇಮವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಬೇಕು: ಗುಜರಾತ್‌ನ ಇಬ್ಬರು ಶಾಸಕರ ಒತ್ತಾಯ

- Advertisement -
- Advertisement -

ವಯಸ್ಕ ಯುವಕ-ಯುವತಿ ಪ್ರೀತಿಸಿ ಮದುವೆಯಾಗುವಾಗ ಪೋಷಕರ ಒಪ್ಪಿಗೆಯನ್ನು ಪಡೆಯುವುದು ಕಡ್ಡಾಯಗೊಳಿಸಬೇಕು ಎಂದು ಗುಜರಾತ್‌ನ ಇಬ್ಬರು ಶಾಸಕರು ರಾಜ್ಯ ವಿಧಾನಸಭೆಯಲ್ಲಿ ಒತ್ತಾಯಿಸಿದ್ದಾರೆ ಎಂದು ದಿ ಹಿಂದೂ ಬುಧವಾರ ವರದಿ ಮಾಡಿದೆ.

ಮಾರ್ಚ್ 17ರಂದು ನಡೆದ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಶಾಸಕ ಫತೇಸಿನ್ಹ್ ಚೌಹಾಣ್ ಮತ್ತು ಕಾಂಗ್ರೆಸ್ ಶಾಸಕ ಜೆನಿಬೆನ್ ಠಾಕೂರ್ ಅವರು ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಚೌಹಾಣ್ ಮತ್ತು ಠಾಕೂರ್ ಅವರು, ”ಮದುವೆಗಳ ನೋಂದಣಿ ಕಾಯಿದೆ-2009, ತಿದ್ದುಪಡಿ ಕೋರಿದರು. ಈ ಸಂದರ್ಭಗಳಲ್ಲಿ ಪೋಷಕರ ಸಹಿ ಕಡ್ಡಾಯಗೊಳಿಸಬೇಕು. ಪುರುಷ ಅಥವಾ ಮಹಿಳೆ ವಾಸಿಸುವ ತಾಲೂಕಿನಲ್ಲಿಯೇ ಇಂತಹ ವಿವಾಹಗಳನ್ನು ನೋಂದಣಿ ಮಾಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

”ಪೋಷಕರ ಒಪ್ಪಿಗೆಯಿಲ್ಲದೆ ನಡೆಯುವ ವಿವಾಹಗಳಿಂದ ಅಪರಾಧದ ಪ್ರಮಾಣದ ಹೆಚ್ಚಳಕ್ಕೆ ಕಾರಣವಾಗುತ್ತವೆ…. ಅಂತಹ ಮದುವೆಗಳನ್ನು ಪೋಷಕರ ಒಪ್ಪಿಗೆಯೊಂದಿಗೆ ನೋಂದಾಯಿಸಿದರೆ, ಅಪರಾಧದ ಪ್ರಮಾಣವು 50% ಕ್ಕೆ ಇಳಿಯುತ್ತದೆ” ಎಂದು ಚೌಹಾಣ್ ಹೇಳಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ‘ಮೋದಿ ಉಪನಾಮ’ ಟೀಕೆ ಕೇಸ್‌ನಲ್ಲಿ ರಾಹುಲ್‌ಗೆ 2 ವರ್ಷ ಜೈಲು: ಬಿಜೆಪಿಯ ಪಿತೂರಿ ಎಂದ ಪ್ರತಿಪಕ್ಷಗಳು

”ಹುಡುಗ ಮತ್ತು ಹುಡುಗಿ ತಮ್ಮ ದಾಖಲೆಗಳನ್ನು ಮರೆಮಾಡಿ ಬೇರೆ ಜಿಲ್ಲೆಗಳಲ್ಲಿ ಮದುವೆಯಾಗುತ್ತಾರೆ. ಇದರಿಂದ ಮುಂದೆ ಆ ಹುಡುಗಿ ತಂದೆ ತಾಯಿಯಿಂದ ದೂರ ಉಳಿದು ಬಳಲುತ್ತಾಳೆ ಅಥವಾ ಪೋಷಕರು ಮಗಳು ಓಡಿಹೋಗಿದ್ದಾಳೆ ಎಂದು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದರು.

”ತಂದೆ ತಾಯಿ ತಮ್ಮ ವೃತ್ತಿಯ ಕಾರಣಕ್ಕೆ ಕೆಲಸದಲ್ಲೇ ಕಾರ್ಯನಿರತರಾಗಿತ್ತಾರೆ ಹಾಗಾಗಿ ಪೋಷಕರು ತಮ್ಮ ಹೆಣ್ಣುಮಕ್ಕಳ ಕಡೆಗೆ ಹೆಚ್ಚಿನ ಗಮನಹರಿಸಲು ಸಾಧ್ಯವಾಗಿರುವುದಿಲ್ಲ. ಈ ವೇಳೆ ಸಮಾಜ ವಿರೋಧಿಗಳು ಇದರ ಲಾಭವನ್ನು ಪಡೆದುಕೊಳ್ಳುತ್ತಾರೆ, ಮತ್ತೆ ಹುಡುಗಿಯರೊಂದಿಗೆ ಓಡಿಹೋಗುತ್ತಾರೆ” ಎಂದು ಹೇಳಿದರು.

ಈ ವೇಳೆ ಠಾಕೂರ್ ಮಾತನಾಡಿ, ”ಪೋಷಕರ ಒಪ್ಪಿಗೆಯಿಲ್ಲದೆ ನಡೆಯುವ ಪ್ರೇಮ ವಿವಾಹಗಳನ್ನು ವಿರೋಧಿಸಬೇಕು” ಎಂದರು.

“ನಾವು ಹುಡುಗಿ ಮತ್ತು ಹುಡುಗನ ನಡುವಿನ ‘ಪ್ರೇಮ’ ವಿವಾಹಗಳನ್ನು ವಿರೋಧಿಸುವುದಿಲ್ಲ, ಆದರೆ ಪೋಷಕರ ಒಪ್ಪಿಗೆಯನ್ನು ಪಡೆಯದ ಮದುವೆಗೆ ನಾವು ವಿರೋಧಿಸುತ್ತೇವೆ” ಎಂದು ಅವರು ಹೇಳಿದರೆಂದು ದಿ ಹಿಂದೂ ವರದಿ ಮಾಡಿದೆ.

”ಮಹಿಳೆಯ ಕುಟುಂಬ ವಾಸಿಸುವ ತಾಲೂಕಿನಲ್ಲಿ ಇಂತಹ ವಿವಾಹಗಳನ್ನು ನೋಂದಾಯಿಸಬೇಕು ಮತ್ತು ಮದುವೆಗಳಿಗೆ ಸ್ಥಳೀಯ ಸಾಕ್ಷಿಗಳು ಇರಬೇಕು” ಎಂದು ಠಾಕೂರ್ ಒತ್ತಾಯಿಸಿದರು.

ಕಳೆದ ವರ್ಷ, ರಾಜ್ಯದ ಪ್ರಭಾವಿ ಪಾಟಿದಾರ್ ಸಮುದಾಯದ ಸದಸ್ಯರು, ”ತಮ್ಮ ಸಮುದಾಯದ ಮಹಿಳೆ ಪ್ರೇಮವಿವಾಹವಾಗಬೇಕಾದರೆ, ಅವರು ತಮ್ಮ ಮದುವೆಯನ್ನು ನೋಂದಾಯಿಸಲು ಕನಿಷ್ಠ ಒಬ್ಬ ಪೋಷಕರ ಸಹಿ ಕಡ್ಡಾಯವಾಗಿರಬೇಕು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Love marriage means after mutual consent of the lovers it will take place. If consents of parents required means independence of lovers in jeopardy.

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...