Homeಮುಖಪುಟಪ್ರೇಮವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಬೇಕು: ಗುಜರಾತ್‌ನ ಇಬ್ಬರು ಶಾಸಕರ ಒತ್ತಾಯ

ಪ್ರೇಮವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಬೇಕು: ಗುಜರಾತ್‌ನ ಇಬ್ಬರು ಶಾಸಕರ ಒತ್ತಾಯ

- Advertisement -
- Advertisement -

ವಯಸ್ಕ ಯುವಕ-ಯುವತಿ ಪ್ರೀತಿಸಿ ಮದುವೆಯಾಗುವಾಗ ಪೋಷಕರ ಒಪ್ಪಿಗೆಯನ್ನು ಪಡೆಯುವುದು ಕಡ್ಡಾಯಗೊಳಿಸಬೇಕು ಎಂದು ಗುಜರಾತ್‌ನ ಇಬ್ಬರು ಶಾಸಕರು ರಾಜ್ಯ ವಿಧಾನಸಭೆಯಲ್ಲಿ ಒತ್ತಾಯಿಸಿದ್ದಾರೆ ಎಂದು ದಿ ಹಿಂದೂ ಬುಧವಾರ ವರದಿ ಮಾಡಿದೆ.

ಮಾರ್ಚ್ 17ರಂದು ನಡೆದ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಶಾಸಕ ಫತೇಸಿನ್ಹ್ ಚೌಹಾಣ್ ಮತ್ತು ಕಾಂಗ್ರೆಸ್ ಶಾಸಕ ಜೆನಿಬೆನ್ ಠಾಕೂರ್ ಅವರು ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಚೌಹಾಣ್ ಮತ್ತು ಠಾಕೂರ್ ಅವರು, ”ಮದುವೆಗಳ ನೋಂದಣಿ ಕಾಯಿದೆ-2009, ತಿದ್ದುಪಡಿ ಕೋರಿದರು. ಈ ಸಂದರ್ಭಗಳಲ್ಲಿ ಪೋಷಕರ ಸಹಿ ಕಡ್ಡಾಯಗೊಳಿಸಬೇಕು. ಪುರುಷ ಅಥವಾ ಮಹಿಳೆ ವಾಸಿಸುವ ತಾಲೂಕಿನಲ್ಲಿಯೇ ಇಂತಹ ವಿವಾಹಗಳನ್ನು ನೋಂದಣಿ ಮಾಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

”ಪೋಷಕರ ಒಪ್ಪಿಗೆಯಿಲ್ಲದೆ ನಡೆಯುವ ವಿವಾಹಗಳಿಂದ ಅಪರಾಧದ ಪ್ರಮಾಣದ ಹೆಚ್ಚಳಕ್ಕೆ ಕಾರಣವಾಗುತ್ತವೆ…. ಅಂತಹ ಮದುವೆಗಳನ್ನು ಪೋಷಕರ ಒಪ್ಪಿಗೆಯೊಂದಿಗೆ ನೋಂದಾಯಿಸಿದರೆ, ಅಪರಾಧದ ಪ್ರಮಾಣವು 50% ಕ್ಕೆ ಇಳಿಯುತ್ತದೆ” ಎಂದು ಚೌಹಾಣ್ ಹೇಳಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ‘ಮೋದಿ ಉಪನಾಮ’ ಟೀಕೆ ಕೇಸ್‌ನಲ್ಲಿ ರಾಹುಲ್‌ಗೆ 2 ವರ್ಷ ಜೈಲು: ಬಿಜೆಪಿಯ ಪಿತೂರಿ ಎಂದ ಪ್ರತಿಪಕ್ಷಗಳು

”ಹುಡುಗ ಮತ್ತು ಹುಡುಗಿ ತಮ್ಮ ದಾಖಲೆಗಳನ್ನು ಮರೆಮಾಡಿ ಬೇರೆ ಜಿಲ್ಲೆಗಳಲ್ಲಿ ಮದುವೆಯಾಗುತ್ತಾರೆ. ಇದರಿಂದ ಮುಂದೆ ಆ ಹುಡುಗಿ ತಂದೆ ತಾಯಿಯಿಂದ ದೂರ ಉಳಿದು ಬಳಲುತ್ತಾಳೆ ಅಥವಾ ಪೋಷಕರು ಮಗಳು ಓಡಿಹೋಗಿದ್ದಾಳೆ ಎಂದು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದರು.

”ತಂದೆ ತಾಯಿ ತಮ್ಮ ವೃತ್ತಿಯ ಕಾರಣಕ್ಕೆ ಕೆಲಸದಲ್ಲೇ ಕಾರ್ಯನಿರತರಾಗಿತ್ತಾರೆ ಹಾಗಾಗಿ ಪೋಷಕರು ತಮ್ಮ ಹೆಣ್ಣುಮಕ್ಕಳ ಕಡೆಗೆ ಹೆಚ್ಚಿನ ಗಮನಹರಿಸಲು ಸಾಧ್ಯವಾಗಿರುವುದಿಲ್ಲ. ಈ ವೇಳೆ ಸಮಾಜ ವಿರೋಧಿಗಳು ಇದರ ಲಾಭವನ್ನು ಪಡೆದುಕೊಳ್ಳುತ್ತಾರೆ, ಮತ್ತೆ ಹುಡುಗಿಯರೊಂದಿಗೆ ಓಡಿಹೋಗುತ್ತಾರೆ” ಎಂದು ಹೇಳಿದರು.

ಈ ವೇಳೆ ಠಾಕೂರ್ ಮಾತನಾಡಿ, ”ಪೋಷಕರ ಒಪ್ಪಿಗೆಯಿಲ್ಲದೆ ನಡೆಯುವ ಪ್ರೇಮ ವಿವಾಹಗಳನ್ನು ವಿರೋಧಿಸಬೇಕು” ಎಂದರು.

“ನಾವು ಹುಡುಗಿ ಮತ್ತು ಹುಡುಗನ ನಡುವಿನ ‘ಪ್ರೇಮ’ ವಿವಾಹಗಳನ್ನು ವಿರೋಧಿಸುವುದಿಲ್ಲ, ಆದರೆ ಪೋಷಕರ ಒಪ್ಪಿಗೆಯನ್ನು ಪಡೆಯದ ಮದುವೆಗೆ ನಾವು ವಿರೋಧಿಸುತ್ತೇವೆ” ಎಂದು ಅವರು ಹೇಳಿದರೆಂದು ದಿ ಹಿಂದೂ ವರದಿ ಮಾಡಿದೆ.

”ಮಹಿಳೆಯ ಕುಟುಂಬ ವಾಸಿಸುವ ತಾಲೂಕಿನಲ್ಲಿ ಇಂತಹ ವಿವಾಹಗಳನ್ನು ನೋಂದಾಯಿಸಬೇಕು ಮತ್ತು ಮದುವೆಗಳಿಗೆ ಸ್ಥಳೀಯ ಸಾಕ್ಷಿಗಳು ಇರಬೇಕು” ಎಂದು ಠಾಕೂರ್ ಒತ್ತಾಯಿಸಿದರು.

ಕಳೆದ ವರ್ಷ, ರಾಜ್ಯದ ಪ್ರಭಾವಿ ಪಾಟಿದಾರ್ ಸಮುದಾಯದ ಸದಸ್ಯರು, ”ತಮ್ಮ ಸಮುದಾಯದ ಮಹಿಳೆ ಪ್ರೇಮವಿವಾಹವಾಗಬೇಕಾದರೆ, ಅವರು ತಮ್ಮ ಮದುವೆಯನ್ನು ನೋಂದಾಯಿಸಲು ಕನಿಷ್ಠ ಒಬ್ಬ ಪೋಷಕರ ಸಹಿ ಕಡ್ಡಾಯವಾಗಿರಬೇಕು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Love marriage means after mutual consent of the lovers it will take place. If consents of parents required means independence of lovers in jeopardy.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...