Homeಕರ್ನಾಟಕಪೋಷಕ ಮಹಾಶಯರೇ, ನಿಮ್ಮ ಮಕ್ಕಳನ್ನು ಈ ವರ್ಷ ಶಾಲೆಗೆ ಕಳುಹಿಸದಿರಿ; ಹೀಗೊಂದು ಪತ್ರ

ಪೋಷಕ ಮಹಾಶಯರೇ, ನಿಮ್ಮ ಮಕ್ಕಳನ್ನು ಈ ವರ್ಷ ಶಾಲೆಗೆ ಕಳುಹಿಸದಿರಿ; ಹೀಗೊಂದು ಪತ್ರ

- Advertisement -
- Advertisement -

ಪೋಷಕ ಮಹಾಶಯರೇ,

ಜುಲೈ 15 ರಿಂದ ಶಾಲೆಗಳನ್ನು ತೆರೆಯಲು ಸರ್ಕಾರ ಆಲೋಚಿಸಿದೆ. ಇದು ಖಂಡಿತಾ ಅಪಾಯಕಾರಿ ನಡೆ. ಅದರಲ್ಲೂ ಎಲ್.ಕೆ.ಜಿ ಯಿಂದ ಏಳನೇ ತರಗತಿ ವರೆಗೆ ಶಾಲೆ ತೆಗೆಯುವುದು ಮಕ್ಕಳನ್ನು ನಾವೇ ಅಪಾಯಕ್ಕೆ ದೂಡಿದಂತೆ ಎಚ್ಚರ. ಸರಕಾರದ ಈ ನಿಲುವನ್ನು ಎಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು. ಮಕ್ಕಳ ವಿಷಯದಲ್ಲಿ ಶಿಕ್ಷಣ ಸಚಿವರು ತಮ್ಮ ಅವಿವೇಕ ಮತ್ತು ಹಠಮಾರಿತನವನ್ನು ತೋರಬಾರದು.

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಹೆಚ್ಚುತ್ತಲೇ ಇದೆ. ಮಕ್ಕಳು ಬೇಗ ಸೋಂಕಿಗೆ ಒಳಗಾಗುತ್ತಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಹೇಳಿದೆ.

ಹಾಗಿರುವಾಗಲೂ ಈಗ ಶಾಲೆಗಳ ಅಗತ್ಯವೇನಿದೆ? ಪ್ರಾಣವನ್ನು ಒತ್ತೆ ಇಟ್ಟು ಮಕ್ಕಳು ಶಾಲೆಯಲ್ಲಿ ಕಲಿಯಬೇಕಾದ ಜರೂರೇನಿದೆ?
ಪೋಷಕ ಸಮುದಾಯ ಈ ವಿಷಯದಲ್ಲಿ ತುಂಬಾ ತುಂಬಾ ಎಚ್ಚರಿಕೆ ವಹಿಸಬೇಕು.
ಕೆಲವರಿಗೆ ಸುರಕ್ಷಿತವಾಗಿ ನೋಡಿಕೊಳ್ಳುವ ಸಾಮರ್ಥ್ಯ ಇರಬಹುದು. ಅದಕ್ಕಾಗಿ ಅವರಿಗೆ ಶಾಲೆ ಬೇಕೆನಿಸಬಹುದು. ಆದರೆ ಕೇವಲ ತಮ್ಮ ಹಿತವನ್ನು ಮಾತ್ರ ನೋಡದೆ, ಎಲ್ಲಾ ವರ್ಗದ ಮಕ್ಕಳ ಬಗ್ಗೆಯೂ ಆಲೋಚಿಸಬೇಕು.

ಕೆಲವು ಪೋಷಕರಿಗೆ ತಮ್ಮ ಮಕ್ಕಳಿಗೆ ಏನಾದರೂ ಚಿಂತೆಯಿಲ್ಲ, ಒಟ್ಟಿನಲ್ಲಿ ಅವರು ಶಾಲೆಗೆ ಹೋಗಬೇಕು…ಎಂಬ ತಹತಹಿಕೆ
ಅದಕ್ಕೆ ತರಾತುರಿಯಲ್ಲಿ ದೌಡಾಯಿಸಿ ಫೀಸ್ ಕಟ್ಟುತ್ತಾರೆ! ಅದೂ ಅಲ್ಲದೆ ಬೇಗ ಶಾಲೆ ಶುರುಮಾಡಿ ಅಂತ ಇವರೇ ದುಂಬಾಲು ಬೀಳ್ತಾರೆ.
ಪೋಷಕ ಮಹಾಶಯರೇ ಮಕ್ಕಳು ಶಾಲೆಗೆ ಹೋಗೋದರಿಂದ ಎಷ್ಟು ಅಪಾಯವಿದೆ ಗೊತ್ತಾ?

ಆಟೋದಲ್ಲಿ ಕುರಿಗಳ ತರ ತುಂಬುತ್ತಾರೆ…ಯಾವ ಡಿಸ್ಟೆನ್ಸ್ ಮಾಡ್ತಾರೆ, ಮಕ್ಕಳನ್ನು ಕಟ್ಟಿ ಹಾಕಲಾಗುತ್ತಾ?
ಮಕ್ಕಳಿಗೆ ಪ್ರತಿ ಅರ್ಧ ಗಂಟೆಗೊಮ್ಮೆ ಸೋಪು ಹಾಕಿ ಕೈ ತೊಳೆಸೋದು, ಸ್ಯಾನಿಟೈಸರ್ ಬಳಸೋದು ಮಾಡಿಸೋಕಾಗ್ತದಾ?
ಒಬ್ಬರಿಂದ ಒಬ್ಬರನ್ನ ಮಕ್ಕಳು ಶಾಲೆಯಲ್ಲಿ ಮೈದಾನದಲ್ಲಿ ದೂರವಿಡುತ್ತಾರೆಯೇ?
ಎಲ್ಲಾ ಮಕ್ಕಳ ಆರೋಗ್ಯ ಒಂದೇ ತರ ಇರುತ್ತಾ?
ಮಕ್ಕಳು ಮನೆಗೆ ರೋಗ ತರುವುದಿಲ್ಲವೇ?
ಮಕ್ಕಳಿಗೆ ಖಾಯಿಲೆ ಅಂಟಿಕೊಂಡರೆ ಅವರೊಬ್ಬರನ್ನೇ ಹೇಗೆ ಕ್ವಾರಂಟೈನ್ ಮಾಡೋದು?
ಹಾಗೆ ಪೋಷಕರಿಂದ ಮಕ್ಕಳನ್ನು ಕ್ವಾರಂಟೈನ್ ಹಾಕಿ ಇರಲು ಸಾಧ್ಯವೇ???
ಇದೆಲ್ಲಾ ಕಾಮನ್ ಸೆನ್ಸ್ ಸರ್ಕಾರಕ್ಕೆ ಇರಬೇಕು.
ಹತ್ತು ವರ್ಷದ ಒಳಗಿನ ಮಕ್ಕಳಿಗೆ ಈ ವರ್ಷ ಶಾಲೆ ಇಲ್ಲದೇ ಹೋದರೆ ಏನಾಗುತ್ತೆ??


ಓದಿ: ಶಾಲೆಗಳು ಸಮಾಜ ಒಡೆಯುತ್ತಿವೆ: ಶಿಕ್ಷಣ ವ್ಯವಸ್ಥೆಯನ್ನು ತಲೆಕೆಳಗು ಮಾಡಬೇಕಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...