Homeಕರ್ನಾಟಕಪೋಷಕ ಮಹಾಶಯರೇ, ನಿಮ್ಮ ಮಕ್ಕಳನ್ನು ಈ ವರ್ಷ ಶಾಲೆಗೆ ಕಳುಹಿಸದಿರಿ; ಹೀಗೊಂದು ಪತ್ರ

ಪೋಷಕ ಮಹಾಶಯರೇ, ನಿಮ್ಮ ಮಕ್ಕಳನ್ನು ಈ ವರ್ಷ ಶಾಲೆಗೆ ಕಳುಹಿಸದಿರಿ; ಹೀಗೊಂದು ಪತ್ರ

- Advertisement -
- Advertisement -

ಪೋಷಕ ಮಹಾಶಯರೇ,

ಜುಲೈ 15 ರಿಂದ ಶಾಲೆಗಳನ್ನು ತೆರೆಯಲು ಸರ್ಕಾರ ಆಲೋಚಿಸಿದೆ. ಇದು ಖಂಡಿತಾ ಅಪಾಯಕಾರಿ ನಡೆ. ಅದರಲ್ಲೂ ಎಲ್.ಕೆ.ಜಿ ಯಿಂದ ಏಳನೇ ತರಗತಿ ವರೆಗೆ ಶಾಲೆ ತೆಗೆಯುವುದು ಮಕ್ಕಳನ್ನು ನಾವೇ ಅಪಾಯಕ್ಕೆ ದೂಡಿದಂತೆ ಎಚ್ಚರ. ಸರಕಾರದ ಈ ನಿಲುವನ್ನು ಎಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು. ಮಕ್ಕಳ ವಿಷಯದಲ್ಲಿ ಶಿಕ್ಷಣ ಸಚಿವರು ತಮ್ಮ ಅವಿವೇಕ ಮತ್ತು ಹಠಮಾರಿತನವನ್ನು ತೋರಬಾರದು.

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಹೆಚ್ಚುತ್ತಲೇ ಇದೆ. ಮಕ್ಕಳು ಬೇಗ ಸೋಂಕಿಗೆ ಒಳಗಾಗುತ್ತಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಹೇಳಿದೆ.

ಹಾಗಿರುವಾಗಲೂ ಈಗ ಶಾಲೆಗಳ ಅಗತ್ಯವೇನಿದೆ? ಪ್ರಾಣವನ್ನು ಒತ್ತೆ ಇಟ್ಟು ಮಕ್ಕಳು ಶಾಲೆಯಲ್ಲಿ ಕಲಿಯಬೇಕಾದ ಜರೂರೇನಿದೆ?
ಪೋಷಕ ಸಮುದಾಯ ಈ ವಿಷಯದಲ್ಲಿ ತುಂಬಾ ತುಂಬಾ ಎಚ್ಚರಿಕೆ ವಹಿಸಬೇಕು.
ಕೆಲವರಿಗೆ ಸುರಕ್ಷಿತವಾಗಿ ನೋಡಿಕೊಳ್ಳುವ ಸಾಮರ್ಥ್ಯ ಇರಬಹುದು. ಅದಕ್ಕಾಗಿ ಅವರಿಗೆ ಶಾಲೆ ಬೇಕೆನಿಸಬಹುದು. ಆದರೆ ಕೇವಲ ತಮ್ಮ ಹಿತವನ್ನು ಮಾತ್ರ ನೋಡದೆ, ಎಲ್ಲಾ ವರ್ಗದ ಮಕ್ಕಳ ಬಗ್ಗೆಯೂ ಆಲೋಚಿಸಬೇಕು.

ಕೆಲವು ಪೋಷಕರಿಗೆ ತಮ್ಮ ಮಕ್ಕಳಿಗೆ ಏನಾದರೂ ಚಿಂತೆಯಿಲ್ಲ, ಒಟ್ಟಿನಲ್ಲಿ ಅವರು ಶಾಲೆಗೆ ಹೋಗಬೇಕು…ಎಂಬ ತಹತಹಿಕೆ
ಅದಕ್ಕೆ ತರಾತುರಿಯಲ್ಲಿ ದೌಡಾಯಿಸಿ ಫೀಸ್ ಕಟ್ಟುತ್ತಾರೆ! ಅದೂ ಅಲ್ಲದೆ ಬೇಗ ಶಾಲೆ ಶುರುಮಾಡಿ ಅಂತ ಇವರೇ ದುಂಬಾಲು ಬೀಳ್ತಾರೆ.
ಪೋಷಕ ಮಹಾಶಯರೇ ಮಕ್ಕಳು ಶಾಲೆಗೆ ಹೋಗೋದರಿಂದ ಎಷ್ಟು ಅಪಾಯವಿದೆ ಗೊತ್ತಾ?

ಆಟೋದಲ್ಲಿ ಕುರಿಗಳ ತರ ತುಂಬುತ್ತಾರೆ…ಯಾವ ಡಿಸ್ಟೆನ್ಸ್ ಮಾಡ್ತಾರೆ, ಮಕ್ಕಳನ್ನು ಕಟ್ಟಿ ಹಾಕಲಾಗುತ್ತಾ?
ಮಕ್ಕಳಿಗೆ ಪ್ರತಿ ಅರ್ಧ ಗಂಟೆಗೊಮ್ಮೆ ಸೋಪು ಹಾಕಿ ಕೈ ತೊಳೆಸೋದು, ಸ್ಯಾನಿಟೈಸರ್ ಬಳಸೋದು ಮಾಡಿಸೋಕಾಗ್ತದಾ?
ಒಬ್ಬರಿಂದ ಒಬ್ಬರನ್ನ ಮಕ್ಕಳು ಶಾಲೆಯಲ್ಲಿ ಮೈದಾನದಲ್ಲಿ ದೂರವಿಡುತ್ತಾರೆಯೇ?
ಎಲ್ಲಾ ಮಕ್ಕಳ ಆರೋಗ್ಯ ಒಂದೇ ತರ ಇರುತ್ತಾ?
ಮಕ್ಕಳು ಮನೆಗೆ ರೋಗ ತರುವುದಿಲ್ಲವೇ?
ಮಕ್ಕಳಿಗೆ ಖಾಯಿಲೆ ಅಂಟಿಕೊಂಡರೆ ಅವರೊಬ್ಬರನ್ನೇ ಹೇಗೆ ಕ್ವಾರಂಟೈನ್ ಮಾಡೋದು?
ಹಾಗೆ ಪೋಷಕರಿಂದ ಮಕ್ಕಳನ್ನು ಕ್ವಾರಂಟೈನ್ ಹಾಕಿ ಇರಲು ಸಾಧ್ಯವೇ???
ಇದೆಲ್ಲಾ ಕಾಮನ್ ಸೆನ್ಸ್ ಸರ್ಕಾರಕ್ಕೆ ಇರಬೇಕು.
ಹತ್ತು ವರ್ಷದ ಒಳಗಿನ ಮಕ್ಕಳಿಗೆ ಈ ವರ್ಷ ಶಾಲೆ ಇಲ್ಲದೇ ಹೋದರೆ ಏನಾಗುತ್ತೆ??


ಓದಿ: ಶಾಲೆಗಳು ಸಮಾಜ ಒಡೆಯುತ್ತಿವೆ: ಶಿಕ್ಷಣ ವ್ಯವಸ್ಥೆಯನ್ನು ತಲೆಕೆಳಗು ಮಾಡಬೇಕಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...