Homeಮುಖಪುಟಸಿಬಿಐ ಆರೋಪಪಟ್ಟಿ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಲಯಾರ್ ಬಾಲಕಿಯರ ಪೋಷಕರು

ಸಿಬಿಐ ಆರೋಪಪಟ್ಟಿ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಲಯಾರ್ ಬಾಲಕಿಯರ ಪೋಷಕರು

- Advertisement -
- Advertisement -

ಕೇಂದ್ರ ತನಿಖಾ ದಳ (ಸಿಬಿಐ) ತಮ್ಮ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ, ವಲಯಾರ್‌ನಲ್ಲಿ ಮೃತಪಟ್ಟ ಬಾಲಕಿಯರ ಪೋಷಕರು ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಬಾಲಕಿಯರ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆಯೂ ಅವರು ನ್ಯಾಯಾಲಯವನ್ನು ಕೋರಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ಕೋರಿ ನ್ಯಾಯಾಲಯ ಸಿಬಿಐಗೆ ನೋಟಿಸ್ ನೀಡಿದೆ.

ಸಿಬಿಐ ನಡೆಸಿದ ಹೆಚ್ಚಿನ ತನಿಖೆಯಲ್ಲಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಪಕ್ಷಪಾತದ ಮತ್ತು ಕೇವಲ ಬಾಹ್ಯ ಪರಿಗಣನೆಯ ತನಿಖೆ ನಡೆಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಸಿಬಿಐಗೆ ಸ್ಪಷ್ಟತೆಯಿಲ್ಲ ಎಂದು ಹೇಳಿದ್ದಾರೆ.

ಆರೋಪಿಗಳಾದ ಪ್ರದೀಪ್, ಮಧು ಅಲಿಯಾಸ್ ಕುಟ್ಟಿ ಮಧು ಮತ್ತು ಶಂಕಿತ ಜಾನ್ ಪ್ರವೀಣ್ ಅವರ ಅನುಮಾನಾಸ್ಪದ ಸಾವಿನ ಬಗ್ಗೆಯೂ ಯಾವುದೇ ತನಿಖೆ ನಡೆದಿಲ್ಲ ಎಂದು ಪೋಷಕರು ಹೇಳಿದ್ದಾರೆ.

ಜಾನ್ ಪ್ರವೀಣ್ ಅವರ ಮರಣೋತ್ತರ ಪರೀಕ್ಷೆಯಲ್ಲಿ ದೇಹದ ಪ್ರಮುಖ ಭಾಗಗಳಲ್ಲಿ ಗಂಭೀರವಾದ ಗಾಯಗಳು ಕಂಡುಬಂದಿವೆ, ಅದರಲ್ಲಿ ಛೇದಿತ ಗಾಯಗಳೂ ಸೇರಿವೆ ಎಂದಿದ್ದಾರೆ.

ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ, ತಾರ್ಕಿಕ ಆಧಾರದ ಮೇಲೆ ಅಲ್ಲ. ಕೆಲವು ಸಾಕ್ಷಿಗಳ ಹೇಳಿಕೆಗಳು ವಿಶ್ವಾಸಾರ್ಹತೆ ಇಲ್ಲದ ಕಾರಣ, ತನಿಖಾಧಿಕಾರಿಯು ಅರ್ಜಿದಾರೇ ಅಪರಾಧಗಳು ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಅರ್ಜಿದಾರರು ಮತ್ತು ಆರೋಪಿಗಳ ನಡುವೆ ಸಂಬಂಧ ಕಲ್ಪಿಸಲಾಗಿದೆ. ಸಿಬಿಐ ಈ ಘೋರ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಿ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ತನಿಖೆ ವೇಳೆ ಕೆಲವೊಂದು ಅಂಶಗಳನ್ನು ಉಲ್ಲೇಖಿಸಿದೆ ಎಂದು ಹೇಳಿದ್ದಾರೆ.

ಏನಿದು ವಲಯಾರ್ ಸಹೋದರಿಯರ ಸಾವು?

ಕೇರಳದ ಪಾಲಕ್ಕಾಡ್ ಜಿಲ್ಲೆಯ ವಲಯಾರ್ ಪ್ರದೇಶದ 13 ಮತ್ತು 9 ವರ್ಷದ ಇಬ್ಬರು ಆದಿವಾಸಿ ಸಹೋದರಿಯರ ಅನುಮಾನಾಸ್ಪದ ಸಾವು ಪ್ರಕರಣವನ್ನು ‘ವಲಯಾರ್ ಸಹೋದರಿಯರ ಸಾವು’ ಎಂದು ಹೇಳಲಾಗುತ್ತದೆ.

ಈ ಪ್ರಕರಣದಲ್ಲಿ 13 ವರ್ಷದ ಬಾಲಕಿ ಜನವರಿ 13, 2017 ರಂದು ಆಕೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಇದಾಗಿ ಎರಡು ತಿಂಗಳ ಬಳಿಕ, ಅಂದರೆ ಮಾರ್ಚ್ 14ರಂದು 9 ವರ್ಷದ ಆಕೆಯ ತಂಗಿ ಕೂಡ ಅದೇ ಜಾಗದಲ್ಲಿ, ಅದೇ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

ಶವಪರೀಕ್ಷೆಯ ವರದಿಗಳು ಇಬ್ಬರೂ ಹುಡುಗಿಯರು ಸಾಯುವ ಮುನ್ನ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ದೃಢಪಡಿಸಿತ್ತು. ಈ ವಿಷಯ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು ಮತ್ತು ಬಾಲಕಿಯರಿಗೆ ನ್ಯಾಯಕ್ಕಾಗಿ ವ್ಯಾಪಕ ಪ್ರತಿಭಟನೆಗಳು ನಡೆದಿತ್ತು.

ಆರಂಭದಲ್ಲಿ, ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸಿ, ದೀರ್ಘಕಾಲದ ಲೈಂಗಿಕ ದೌರ್ಜನ್ಯವನ್ನು ಸಹಿಸಿಕೊಂಡ ನಂತರ ಹುಡುಗಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದರು.

ಒಬ್ಬ ಬಾಲಾಪರಾಧಿ ಸೇರಿದಂತೆ ಐವರ ಮೇಲೆ ಮೇಲೆ ಭಾರತೀಯ ದಂಡ ಸಂಹಿತೆ (ಐಪಿಸಿ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊರಿಸಿದ್ದರು.

ಆದಾಗ್ಯೂ, 2019 ರಲ್ಲಿ, ಪಾಲಕ್ಕಾಡ್‌ನ ವಿಶೇಷ ಪೋಕ್ಸೊ ನ್ಯಾಯಾಲಯವು ಸಾಕಷ್ಟು ಸಾಕ್ಷ್ಯಗಳು ಇಲ್ಲ ಎಂದು ಉಲ್ಲೇಖಿಸಿ, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದು ಸಾರ್ವಜನಿಕರಲ್ಲಿ ಮತ್ತೆ ಆಕ್ರೋಶ ಭುಗಿಲೇಳುವಂತೆ ಮಾಡಿತ್ತು.

ಸಾರ್ವಜನಿಕರ ಆಕ್ರೋಶ, ಸಂತ್ರಸ್ತ ಬಾಲಕಿಯರ ತಾಯಿ ಮತ್ತು ಕೇರಳ ಸರ್ಕಾರದ ಮೇಲ್ಮನವಿಗಳ ಕಾರಣ, ಕೇರಳ ಹೈಕೋರ್ಟ್ ಪ್ರಕರಣದಲ್ಲಿ ಮಧ್ಯಪ್ರವೇಶಿಸಿತ್ತು. ಜನವರಿ 2021ರಲ್ಲಿ, ಪ್ರಕರಣದ ಮರುವಿಚಾರಣೆಗೆ ಆದೇಶಿಸಿತ್ತು. ನಂತರ ಮಾರ್ಚ್ 2021ರಲ್ಲಿ, ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಯನ್ನು ವಹಿಸಿಕೊಳ್ಳುವಂತೆ ನಿರ್ದೇಶಿಸಿತ್ತು.

ಸಿಬಿಐನ ಆರಂಭಿಕ ತನಿಖೆಯು ಪೊಲೀಸರು ಹೇಳಿದ್ದನ್ನೇ ಹೇಳಿತ್ತು. ಡಿಸೆಂಬರ್ 2021ರಲ್ಲಿ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ಹುಡುಗಿಯರು ದೀರ್ಘಕಾಲದ ಲೈಂಗಿಕ ದೌರ್ಜನ್ಯ ಎದುರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿತ್ತು. ಆದಾಗ್ಯೂ, ಸಂತ್ರಸ್ತರ ತಾಯಿ ಇದನ್ನು ಪ್ರಶ್ನಿಸಿದ್ದರು. ಕೊಲೆ ಆರೋಪ ಮಾಡಿದ್ದರು. ಆಗಸ್ಟ್ 2022ರಲ್ಲಿ, ಪಾಲಕ್ಕಾಡ್ ಪೋಕ್ಸೊ ನ್ಯಾಯಾಲಯ ಸಿಬಿಐನ ಆರೋಪಪಟ್ಟಿಯನ್ನು ತಿರಸ್ಕರಿಸಿ, ಮರುತನಿಖೆಗೆ ಆದೇಶಿಸಿತ್ತು.

ಪ್ರಕರಣದ ಪ್ರಸ್ತುತ ಸ್ಥಿತಿ (ಮಾರ್ಚ್ 25, 2025 ರಂತೆ) 

ಜನವರಿ 2025 : ಸಿಬಿಐ ಪೂರಕ ಆರೋಪಪಟ್ಟಿ ಸಲ್ಲಿಸಿತ್ತು. ಗಮನಾರ್ಹವಾಗಿ ಬಾಲಕಿಯರ ಪೋಷಕರನ್ನೇ ಆರೋಪಿಗಳೆಂದು ಹೆಸರಿಸಿತ್ತು. ಅವರ ಮೇಲೆ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಮತ್ತು ಲೈಂಗಿಕ ದೌರ್ಜನ್ಯಗಳನ್ನು ಮರೆಮಾಚಿದ ಆರೋಪ ಹೊರಿಸಿ ಎರ್ನಾಕುಲಂನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು. ನಂತರ ಸಿಬಿಐ ಕೋರಿಕೆಯ ಮೇರೆಗೆ ಪ್ರಕರಣವನ್ನು 2024ರಲ್ಲಿ ಪಾಲಕ್ಕಾಡ್ ಪೋಕ್ಸೊ ನ್ಯಾಯಾಲಯದಿಂದ ವರ್ಗಾಯಿಸಲಾಯಿತು.

ಫೆಬ್ರವರಿ 2025 : ಸಿಬಿಐನ ಹಿಂದಿನ ತನಿಖಾ ವರದಿಯು ಬಾಲಕಿಯರ ಸಾವು ಆತ್ಮಹತ್ಯೆ ಎಂಬುವುದನ್ನು ಸಮರ್ಥಿಸಿಕೊಂಡಿತ್ತು. ಬಾಲಕಿಯರ ಶವ ದೊರೆತ ಸ್ಥಳದ ಪರಿಶೀಲನೆ ಮತ್ತು ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಕೊಲೆ ಆರೋಪ ತಳ್ಳಿಹಾಕಿತ್ತು. ವೈದ್ಯಕೀಯ ಮಂಡಳಿ ಮತ್ತು ವಿಧಿವಿಜ್ಞಾನ ತಜ್ಞರು ಇದನ್ನು ಬೆಂಬಲಿಸಿದ್ದರು. ಆದಾಗ್ಯೂ, ಈ ವರದಿಯನ್ನು ಬಾಲಕಿಯ ಪೋಷಕರು ಮತ್ತು ಹೋರಾಟಗಾರರು ವಿರೋಧಿಸಿದ್ದಾರೆ.

ಪ್ರಸ್ತುತ ಪ್ರಕರಣವು ಎರ್ನಾಕುಲಂನ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಪೋಷಕರನ್ನು ಆರೋಪಿಗಳಾಗಿ ಹೆಸರಿಸಿರುವುದು ಪ್ರಕರಣದ ಸಂಕೀರ್ಣತೆಯನ್ನು ಹೆಚ್ಚಿಸಿದೆ ಮತ್ತು 2022ರಲ್ಲಿ ಆದೇಶಿಸಲಾದ ಮರುತನಿಖೆ ಇನ್ನೂ ಪ್ರಗತಿಯಲ್ಲಿದೆ.

ಸಂತ್ರಸ್ತರ ತಾಯಿ ಸೇರಿದಂತೆ ನ್ಯಾಯಕ್ಕಾಗಿ ಹೋರಾಡುತ್ತಿರುವ ‘ವಲಯಾರ್ ನೀದಿ ಸಮರ ಸಮಿದಿ’ 2019 ಮತ್ತು 2023 ರ ನಡುವೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವ್ಯಕ್ತಿಗಳ (ಇಬ್ಬರು ಆರೋಪಿಗಳು ಮತ್ತು ಒಬ್ಬ ಶಂಕಿತ) ಅನುಮಾನಾಸ್ಪದ ಸಾವುಗಳನ್ನು ಗಮನದಲ್ಲಿಟ್ಟುಕೊಂಡು, ಸಮಗ್ರ ತನಿಖೆಗೆ ಒತ್ತಾಯಿಸುತ್ತಲೇ ಇದೆ. ಇವರೆಲ್ಲರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.

ಇಂದಿನವರೆಗೆ, ಅಂದರೆ ಮಾರ್ಚ್ 25, 2025ರವರೆಗೂ ಈ ಪ್ರಕರಣ ಇತ್ಯರ್ಥವಾಗದೆ ಉಳಿದಿದೆ. ಸಿಬಿಐನ ಮರುತನಿಖೆ ಮುಂದುವರೆದಿದ್ದು, ನ್ಯಾಯಾಲಯ ಇನ್ನೂ ಅಂತಿಮ ತೀರ್ಪು ನೀಡಿಲ್ಲ. ವ್ಯವಸ್ಥಿತ ವೈಫಲ್ಯಗಳು ಮತ್ತು ಮುಚ್ಚಿಹಾಕುವಿಕೆಯ ಆರೋಪಗಳ ನಡುವೆಯೂ, ಪ್ರಕರಣದ ಸತ್ಯ ಬಹಿರಂಗವಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಜನರು ಆಗ್ರಹಿಸುತ್ತಲೇ ಇದ್ದಾರೆ.

‘ಭೂ ಜಿಹಾದ್’ ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...