Homeಮುಖಪುಟಸಿಬಿಐ ಆರೋಪಪಟ್ಟಿ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಲಯಾರ್ ಬಾಲಕಿಯರ ಪೋಷಕರು

ಸಿಬಿಐ ಆರೋಪಪಟ್ಟಿ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಲಯಾರ್ ಬಾಲಕಿಯರ ಪೋಷಕರು

- Advertisement -
- Advertisement -

ಕೇಂದ್ರ ತನಿಖಾ ದಳ (ಸಿಬಿಐ) ತಮ್ಮ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ, ವಲಯಾರ್‌ನಲ್ಲಿ ಮೃತಪಟ್ಟ ಬಾಲಕಿಯರ ಪೋಷಕರು ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಬಾಲಕಿಯರ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆಯೂ ಅವರು ನ್ಯಾಯಾಲಯವನ್ನು ಕೋರಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ಕೋರಿ ನ್ಯಾಯಾಲಯ ಸಿಬಿಐಗೆ ನೋಟಿಸ್ ನೀಡಿದೆ.

ಸಿಬಿಐ ನಡೆಸಿದ ಹೆಚ್ಚಿನ ತನಿಖೆಯಲ್ಲಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಪಕ್ಷಪಾತದ ಮತ್ತು ಕೇವಲ ಬಾಹ್ಯ ಪರಿಗಣನೆಯ ತನಿಖೆ ನಡೆಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಸಿಬಿಐಗೆ ಸ್ಪಷ್ಟತೆಯಿಲ್ಲ ಎಂದು ಹೇಳಿದ್ದಾರೆ.

ಆರೋಪಿಗಳಾದ ಪ್ರದೀಪ್, ಮಧು ಅಲಿಯಾಸ್ ಕುಟ್ಟಿ ಮಧು ಮತ್ತು ಶಂಕಿತ ಜಾನ್ ಪ್ರವೀಣ್ ಅವರ ಅನುಮಾನಾಸ್ಪದ ಸಾವಿನ ಬಗ್ಗೆಯೂ ಯಾವುದೇ ತನಿಖೆ ನಡೆದಿಲ್ಲ ಎಂದು ಪೋಷಕರು ಹೇಳಿದ್ದಾರೆ.

ಜಾನ್ ಪ್ರವೀಣ್ ಅವರ ಮರಣೋತ್ತರ ಪರೀಕ್ಷೆಯಲ್ಲಿ ದೇಹದ ಪ್ರಮುಖ ಭಾಗಗಳಲ್ಲಿ ಗಂಭೀರವಾದ ಗಾಯಗಳು ಕಂಡುಬಂದಿವೆ, ಅದರಲ್ಲಿ ಛೇದಿತ ಗಾಯಗಳೂ ಸೇರಿವೆ ಎಂದಿದ್ದಾರೆ.

ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ, ತಾರ್ಕಿಕ ಆಧಾರದ ಮೇಲೆ ಅಲ್ಲ. ಕೆಲವು ಸಾಕ್ಷಿಗಳ ಹೇಳಿಕೆಗಳು ವಿಶ್ವಾಸಾರ್ಹತೆ ಇಲ್ಲದ ಕಾರಣ, ತನಿಖಾಧಿಕಾರಿಯು ಅರ್ಜಿದಾರೇ ಅಪರಾಧಗಳು ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಅರ್ಜಿದಾರರು ಮತ್ತು ಆರೋಪಿಗಳ ನಡುವೆ ಸಂಬಂಧ ಕಲ್ಪಿಸಲಾಗಿದೆ. ಸಿಬಿಐ ಈ ಘೋರ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಿ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ತನಿಖೆ ವೇಳೆ ಕೆಲವೊಂದು ಅಂಶಗಳನ್ನು ಉಲ್ಲೇಖಿಸಿದೆ ಎಂದು ಹೇಳಿದ್ದಾರೆ.

ಏನಿದು ವಲಯಾರ್ ಸಹೋದರಿಯರ ಸಾವು?

ಕೇರಳದ ಪಾಲಕ್ಕಾಡ್ ಜಿಲ್ಲೆಯ ವಲಯಾರ್ ಪ್ರದೇಶದ 13 ಮತ್ತು 9 ವರ್ಷದ ಇಬ್ಬರು ಆದಿವಾಸಿ ಸಹೋದರಿಯರ ಅನುಮಾನಾಸ್ಪದ ಸಾವು ಪ್ರಕರಣವನ್ನು ‘ವಲಯಾರ್ ಸಹೋದರಿಯರ ಸಾವು’ ಎಂದು ಹೇಳಲಾಗುತ್ತದೆ.

ಈ ಪ್ರಕರಣದಲ್ಲಿ 13 ವರ್ಷದ ಬಾಲಕಿ ಜನವರಿ 13, 2017 ರಂದು ಆಕೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಇದಾಗಿ ಎರಡು ತಿಂಗಳ ಬಳಿಕ, ಅಂದರೆ ಮಾರ್ಚ್ 14ರಂದು 9 ವರ್ಷದ ಆಕೆಯ ತಂಗಿ ಕೂಡ ಅದೇ ಜಾಗದಲ್ಲಿ, ಅದೇ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

ಶವಪರೀಕ್ಷೆಯ ವರದಿಗಳು ಇಬ್ಬರೂ ಹುಡುಗಿಯರು ಸಾಯುವ ಮುನ್ನ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ದೃಢಪಡಿಸಿತ್ತು. ಈ ವಿಷಯ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು ಮತ್ತು ಬಾಲಕಿಯರಿಗೆ ನ್ಯಾಯಕ್ಕಾಗಿ ವ್ಯಾಪಕ ಪ್ರತಿಭಟನೆಗಳು ನಡೆದಿತ್ತು.

ಆರಂಭದಲ್ಲಿ, ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸಿ, ದೀರ್ಘಕಾಲದ ಲೈಂಗಿಕ ದೌರ್ಜನ್ಯವನ್ನು ಸಹಿಸಿಕೊಂಡ ನಂತರ ಹುಡುಗಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದರು.

ಒಬ್ಬ ಬಾಲಾಪರಾಧಿ ಸೇರಿದಂತೆ ಐವರ ಮೇಲೆ ಮೇಲೆ ಭಾರತೀಯ ದಂಡ ಸಂಹಿತೆ (ಐಪಿಸಿ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊರಿಸಿದ್ದರು.

ಆದಾಗ್ಯೂ, 2019 ರಲ್ಲಿ, ಪಾಲಕ್ಕಾಡ್‌ನ ವಿಶೇಷ ಪೋಕ್ಸೊ ನ್ಯಾಯಾಲಯವು ಸಾಕಷ್ಟು ಸಾಕ್ಷ್ಯಗಳು ಇಲ್ಲ ಎಂದು ಉಲ್ಲೇಖಿಸಿ, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದು ಸಾರ್ವಜನಿಕರಲ್ಲಿ ಮತ್ತೆ ಆಕ್ರೋಶ ಭುಗಿಲೇಳುವಂತೆ ಮಾಡಿತ್ತು.

ಸಾರ್ವಜನಿಕರ ಆಕ್ರೋಶ, ಸಂತ್ರಸ್ತ ಬಾಲಕಿಯರ ತಾಯಿ ಮತ್ತು ಕೇರಳ ಸರ್ಕಾರದ ಮೇಲ್ಮನವಿಗಳ ಕಾರಣ, ಕೇರಳ ಹೈಕೋರ್ಟ್ ಪ್ರಕರಣದಲ್ಲಿ ಮಧ್ಯಪ್ರವೇಶಿಸಿತ್ತು. ಜನವರಿ 2021ರಲ್ಲಿ, ಪ್ರಕರಣದ ಮರುವಿಚಾರಣೆಗೆ ಆದೇಶಿಸಿತ್ತು. ನಂತರ ಮಾರ್ಚ್ 2021ರಲ್ಲಿ, ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಯನ್ನು ವಹಿಸಿಕೊಳ್ಳುವಂತೆ ನಿರ್ದೇಶಿಸಿತ್ತು.

ಸಿಬಿಐನ ಆರಂಭಿಕ ತನಿಖೆಯು ಪೊಲೀಸರು ಹೇಳಿದ್ದನ್ನೇ ಹೇಳಿತ್ತು. ಡಿಸೆಂಬರ್ 2021ರಲ್ಲಿ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ಹುಡುಗಿಯರು ದೀರ್ಘಕಾಲದ ಲೈಂಗಿಕ ದೌರ್ಜನ್ಯ ಎದುರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿತ್ತು. ಆದಾಗ್ಯೂ, ಸಂತ್ರಸ್ತರ ತಾಯಿ ಇದನ್ನು ಪ್ರಶ್ನಿಸಿದ್ದರು. ಕೊಲೆ ಆರೋಪ ಮಾಡಿದ್ದರು. ಆಗಸ್ಟ್ 2022ರಲ್ಲಿ, ಪಾಲಕ್ಕಾಡ್ ಪೋಕ್ಸೊ ನ್ಯಾಯಾಲಯ ಸಿಬಿಐನ ಆರೋಪಪಟ್ಟಿಯನ್ನು ತಿರಸ್ಕರಿಸಿ, ಮರುತನಿಖೆಗೆ ಆದೇಶಿಸಿತ್ತು.

ಪ್ರಕರಣದ ಪ್ರಸ್ತುತ ಸ್ಥಿತಿ (ಮಾರ್ಚ್ 25, 2025 ರಂತೆ) 

ಜನವರಿ 2025 : ಸಿಬಿಐ ಪೂರಕ ಆರೋಪಪಟ್ಟಿ ಸಲ್ಲಿಸಿತ್ತು. ಗಮನಾರ್ಹವಾಗಿ ಬಾಲಕಿಯರ ಪೋಷಕರನ್ನೇ ಆರೋಪಿಗಳೆಂದು ಹೆಸರಿಸಿತ್ತು. ಅವರ ಮೇಲೆ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಮತ್ತು ಲೈಂಗಿಕ ದೌರ್ಜನ್ಯಗಳನ್ನು ಮರೆಮಾಚಿದ ಆರೋಪ ಹೊರಿಸಿ ಎರ್ನಾಕುಲಂನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು. ನಂತರ ಸಿಬಿಐ ಕೋರಿಕೆಯ ಮೇರೆಗೆ ಪ್ರಕರಣವನ್ನು 2024ರಲ್ಲಿ ಪಾಲಕ್ಕಾಡ್ ಪೋಕ್ಸೊ ನ್ಯಾಯಾಲಯದಿಂದ ವರ್ಗಾಯಿಸಲಾಯಿತು.

ಫೆಬ್ರವರಿ 2025 : ಸಿಬಿಐನ ಹಿಂದಿನ ತನಿಖಾ ವರದಿಯು ಬಾಲಕಿಯರ ಸಾವು ಆತ್ಮಹತ್ಯೆ ಎಂಬುವುದನ್ನು ಸಮರ್ಥಿಸಿಕೊಂಡಿತ್ತು. ಬಾಲಕಿಯರ ಶವ ದೊರೆತ ಸ್ಥಳದ ಪರಿಶೀಲನೆ ಮತ್ತು ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಕೊಲೆ ಆರೋಪ ತಳ್ಳಿಹಾಕಿತ್ತು. ವೈದ್ಯಕೀಯ ಮಂಡಳಿ ಮತ್ತು ವಿಧಿವಿಜ್ಞಾನ ತಜ್ಞರು ಇದನ್ನು ಬೆಂಬಲಿಸಿದ್ದರು. ಆದಾಗ್ಯೂ, ಈ ವರದಿಯನ್ನು ಬಾಲಕಿಯ ಪೋಷಕರು ಮತ್ತು ಹೋರಾಟಗಾರರು ವಿರೋಧಿಸಿದ್ದಾರೆ.

ಪ್ರಸ್ತುತ ಪ್ರಕರಣವು ಎರ್ನಾಕುಲಂನ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಪೋಷಕರನ್ನು ಆರೋಪಿಗಳಾಗಿ ಹೆಸರಿಸಿರುವುದು ಪ್ರಕರಣದ ಸಂಕೀರ್ಣತೆಯನ್ನು ಹೆಚ್ಚಿಸಿದೆ ಮತ್ತು 2022ರಲ್ಲಿ ಆದೇಶಿಸಲಾದ ಮರುತನಿಖೆ ಇನ್ನೂ ಪ್ರಗತಿಯಲ್ಲಿದೆ.

ಸಂತ್ರಸ್ತರ ತಾಯಿ ಸೇರಿದಂತೆ ನ್ಯಾಯಕ್ಕಾಗಿ ಹೋರಾಡುತ್ತಿರುವ ‘ವಲಯಾರ್ ನೀದಿ ಸಮರ ಸಮಿದಿ’ 2019 ಮತ್ತು 2023 ರ ನಡುವೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವ್ಯಕ್ತಿಗಳ (ಇಬ್ಬರು ಆರೋಪಿಗಳು ಮತ್ತು ಒಬ್ಬ ಶಂಕಿತ) ಅನುಮಾನಾಸ್ಪದ ಸಾವುಗಳನ್ನು ಗಮನದಲ್ಲಿಟ್ಟುಕೊಂಡು, ಸಮಗ್ರ ತನಿಖೆಗೆ ಒತ್ತಾಯಿಸುತ್ತಲೇ ಇದೆ. ಇವರೆಲ್ಲರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.

ಇಂದಿನವರೆಗೆ, ಅಂದರೆ ಮಾರ್ಚ್ 25, 2025ರವರೆಗೂ ಈ ಪ್ರಕರಣ ಇತ್ಯರ್ಥವಾಗದೆ ಉಳಿದಿದೆ. ಸಿಬಿಐನ ಮರುತನಿಖೆ ಮುಂದುವರೆದಿದ್ದು, ನ್ಯಾಯಾಲಯ ಇನ್ನೂ ಅಂತಿಮ ತೀರ್ಪು ನೀಡಿಲ್ಲ. ವ್ಯವಸ್ಥಿತ ವೈಫಲ್ಯಗಳು ಮತ್ತು ಮುಚ್ಚಿಹಾಕುವಿಕೆಯ ಆರೋಪಗಳ ನಡುವೆಯೂ, ಪ್ರಕರಣದ ಸತ್ಯ ಬಹಿರಂಗವಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಜನರು ಆಗ್ರಹಿಸುತ್ತಲೇ ಇದ್ದಾರೆ.

‘ಭೂ ಜಿಹಾದ್’ ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...