Homeಮುಖಪುಟ18 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ: ಕೇಂದ್ರದಿಂದ ಕರಡು...

18 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ: ಕೇಂದ್ರದಿಂದ ಕರಡು ನಿಯಮ

- Advertisement -
- Advertisement -

ನವದೆಹಲಿ: ಕೇಂದ್ರ ಸರ್ಕಾರದ ನೀತಿಯೂ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ ಎಂದು ತೀರ್ಮಾನಿಸಿದೆ.

ಈ ನೀತಿಗೆ ಕೇಂದ್ರ ಸರ್ಕಾರ 2023ರಲ್ಲೇ ಸಂಸತ್ತಿನ ಅನುಮೋದನೆ ಪಡೆದುಕೊಂಡು ಡಿಜಿಟಲ್‌ ಖಾಸಗಿ ಮಾಹಿತಿ ರಕ್ಷಣಾ ಕಾಯ್ದೆಗೆ ಕೆಲವೊಂದು ತಿದ್ದಪಡಿ ಮಾಡಿದೆ. ಅಲ್ಲದೇ ಹೊಸ ಕರಡು ವರದಿಯನ್ನು ಶುಕ್ರವಾರ(ಜ.4) ಬಿಡುಗಡೆ ಮಾಡಿದೆ.

ಇನ್ನು ಈ ಮಹತ್ವದ ನಿರ್ಧಾರದ ಬಗ್ಗೆ ಜನರು ಅಭಿಪ್ರಾಯಗಳನ್ನು ತಿಳಿಸಲು ಫೆಬ್ರವರಿ.18 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೀಗೆ ಸಂಗ್ರಹವಾಗುವ ಅಭಿಪ್ರಾಯಗಳನ್ನು ಆಧರಿಸಿದ ಬಳಿಕ ಅಂತಿಮ ವರದಿ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ನಂತರ ಈ ಕರಡು ವರದಿ ಅನ್ವಯ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರಯಬೇಕಾದರೆ ಪೋಷಕರ ಅನುಮತಿ ಕಡ್ಡಾಯವಾಗಿದೆ. ಅದರೊಂದಿಗೆ ಕಂಪೆನಿಗಳು ತಮ್ಮ ದಾಖಲೆಗಳನ್ನು ಅಳಿಸುವಂತೆ ಹಾಗೂ ದಾಖಲೆಗಳನ್ನು ಯಾಕೆ ಕಲೆ ಹಾಕುತ್ತಿದ್ದೀರಿ ಎಂದು ಮಾಹಿತಿ ಪಡೆಯುವ ಹಾಗೂ ಖಾಸಗಿ ಮಾಹಿತಿ ರಕ್ಷಣೆ ಮಾಡಿಕೊಳ್ಳುವ ಅಧಿಕಾರ ಬಳಕೆದಾರನಿಗೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಕರಡು ನಿಯಮದ ಪ್ರಕಾರ ಮಕ್ಕಳ ವೈಯಕ್ತಿಕ ದತ್ತಾಂಶ ದಾಖಲಿಸುವ ಮೊದಲು ಪೋಷಕರ ಒಪ್ಪಿಗೆ ಪಡೆಯಲಾಗಿದೆಯೇ ಎಂಬುದನ್ನು ಸಾಮಾಜಿಕ ಜಾಲತಾಣ ವೇದಿಕೆಗಳು ಖಚಿತಪಡಿಸಿಕ್ಳೊಬೇಕು ಎಂಬ ಷರತ್ತು ವಿಧಿಸಲಾಗಿದೆ. ಪೋಷಕರೆಂದು ಗುರುತಿಸಲಾದ ವ್ಯಕ್ತಿ ವಯಸ್ಕರೇ ಅಲ್ಲವೇ ಎಂಬುದನ್ನು ಪರಿಶೀಲಿಸಲು ಸೂಕ್ತ ವ್ಯವಸ್ಥೆ ರೂಪಿಸಿಕೊಳ್ಳಲು ಸೂಚಿಸಲಾಗಿದೆ.

ಮೆಟಾ, ಗೂಗಲ್ ಮುಂತಾದ ಬೃಹತ್‌ ಟೆಕ್‌ ಕಂಪನಿಗಳು ಕಾಯಿದೆಯಲ್ಲಿನ ಮಕ್ಕಳ ವ್ಯಾಖ್ಯಾನವನ್ನು ಬದಲಾಯಿಸಬೇಕು ಎಂದು ಬಯಸುತ್ತಿವೆ. ಮಕ್ಕಳ ವಯಸ್ಸನ್ನು 18 ವರ್ಷದ ಬದಲು 14 ವರ್ಷಕ್ಕೆ ಸೀಮಿತಗೊಳಿಸುವಂತೆ ಇವು ಬೇಡಿಕೆ ಇಟ್ಟಿವೆ.

ಪ್ರಸ್ತಾವಿತ ನಿಯಮಗಳು 2023ರ ಡಿಜಿಟಲ್ ವೈಯಕ್ತಿಕ ದತ್ತಾಂಶ ರಕ್ಷಣೆ ಕಾಯ್ದೆಯ ನಿಬಂಧನೆಗಳನ್ನು ಜಾರಿಗೊಳಿಸಲು ಪ್ರಮುಖವಾಗಿವೆ. ಕಾಯ್ದೆಯು ಆಗಸ್ಟ್ 2023ರಲ್ಲಿಯೇ ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದ್ದರೂ ಅದರ ಜಾರಿಗಾಗಿ ನಿಯಮಗಳನ್ನು ರೂಪಿಸಲಾಗುತ್ತಿದೆ.

2023ರ ಡೇಟಾ ಸಂರಕ್ಷಣೆ ಕಾಯ್ದೆಯು ವೈಯಕ್ತಿಕ ಗೋಪ್ಯತೆಯನ್ನು ಬಲಪಡಿಸುವುದಿಲ್ಲ ಮತ್ತು ವ್ಯಕ್ತಿಗಳ ಡೇಟಾಗಳನ್ನು ದುರ್ಬಳಕೆ  ಮಾಡಿಕೊಳ್ಳುವ ಸರಕಾರೇತರ ಸಂಸ್ಥೆಗಳ ಮೇಲೆ ಸಾಕಷ್ಟು ಹೊಣೆಗಾರಿಕೆಯನ್ನು ಹೊರಿಸುವುದಿಲ್ಲ ಎಂಬ ಕಳವಳಗಳನ್ನು ವಿಮರ್ಶಕರು ವ್ಯಕ್ತಪಡಿಸಿದ್ದಾರೆ.

ಕೊಡಗು: ಮಸೀದಿ ನಿರ್ಮಾಣಕ್ಕೆ ಹಿಂದೂ, ಕ್ರೈಸ್ತರ ನೆರವು; ವಿಶಿಷ್ಟ ಶೈಲಿಯ ಮಸೀದಿ ಉದ್ಘಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...