Homeಮುಖಪುಟ18 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ: ಕೇಂದ್ರದಿಂದ ಕರಡು...

18 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ: ಕೇಂದ್ರದಿಂದ ಕರಡು ನಿಯಮ

- Advertisement -
- Advertisement -

ನವದೆಹಲಿ: ಕೇಂದ್ರ ಸರ್ಕಾರದ ನೀತಿಯೂ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ ಎಂದು ತೀರ್ಮಾನಿಸಿದೆ.

ಈ ನೀತಿಗೆ ಕೇಂದ್ರ ಸರ್ಕಾರ 2023ರಲ್ಲೇ ಸಂಸತ್ತಿನ ಅನುಮೋದನೆ ಪಡೆದುಕೊಂಡು ಡಿಜಿಟಲ್‌ ಖಾಸಗಿ ಮಾಹಿತಿ ರಕ್ಷಣಾ ಕಾಯ್ದೆಗೆ ಕೆಲವೊಂದು ತಿದ್ದಪಡಿ ಮಾಡಿದೆ. ಅಲ್ಲದೇ ಹೊಸ ಕರಡು ವರದಿಯನ್ನು ಶುಕ್ರವಾರ(ಜ.4) ಬಿಡುಗಡೆ ಮಾಡಿದೆ.

ಇನ್ನು ಈ ಮಹತ್ವದ ನಿರ್ಧಾರದ ಬಗ್ಗೆ ಜನರು ಅಭಿಪ್ರಾಯಗಳನ್ನು ತಿಳಿಸಲು ಫೆಬ್ರವರಿ.18 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೀಗೆ ಸಂಗ್ರಹವಾಗುವ ಅಭಿಪ್ರಾಯಗಳನ್ನು ಆಧರಿಸಿದ ಬಳಿಕ ಅಂತಿಮ ವರದಿ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ನಂತರ ಈ ಕರಡು ವರದಿ ಅನ್ವಯ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರಯಬೇಕಾದರೆ ಪೋಷಕರ ಅನುಮತಿ ಕಡ್ಡಾಯವಾಗಿದೆ. ಅದರೊಂದಿಗೆ ಕಂಪೆನಿಗಳು ತಮ್ಮ ದಾಖಲೆಗಳನ್ನು ಅಳಿಸುವಂತೆ ಹಾಗೂ ದಾಖಲೆಗಳನ್ನು ಯಾಕೆ ಕಲೆ ಹಾಕುತ್ತಿದ್ದೀರಿ ಎಂದು ಮಾಹಿತಿ ಪಡೆಯುವ ಹಾಗೂ ಖಾಸಗಿ ಮಾಹಿತಿ ರಕ್ಷಣೆ ಮಾಡಿಕೊಳ್ಳುವ ಅಧಿಕಾರ ಬಳಕೆದಾರನಿಗೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಕರಡು ನಿಯಮದ ಪ್ರಕಾರ ಮಕ್ಕಳ ವೈಯಕ್ತಿಕ ದತ್ತಾಂಶ ದಾಖಲಿಸುವ ಮೊದಲು ಪೋಷಕರ ಒಪ್ಪಿಗೆ ಪಡೆಯಲಾಗಿದೆಯೇ ಎಂಬುದನ್ನು ಸಾಮಾಜಿಕ ಜಾಲತಾಣ ವೇದಿಕೆಗಳು ಖಚಿತಪಡಿಸಿಕ್ಳೊಬೇಕು ಎಂಬ ಷರತ್ತು ವಿಧಿಸಲಾಗಿದೆ. ಪೋಷಕರೆಂದು ಗುರುತಿಸಲಾದ ವ್ಯಕ್ತಿ ವಯಸ್ಕರೇ ಅಲ್ಲವೇ ಎಂಬುದನ್ನು ಪರಿಶೀಲಿಸಲು ಸೂಕ್ತ ವ್ಯವಸ್ಥೆ ರೂಪಿಸಿಕೊಳ್ಳಲು ಸೂಚಿಸಲಾಗಿದೆ.

ಮೆಟಾ, ಗೂಗಲ್ ಮುಂತಾದ ಬೃಹತ್‌ ಟೆಕ್‌ ಕಂಪನಿಗಳು ಕಾಯಿದೆಯಲ್ಲಿನ ಮಕ್ಕಳ ವ್ಯಾಖ್ಯಾನವನ್ನು ಬದಲಾಯಿಸಬೇಕು ಎಂದು ಬಯಸುತ್ತಿವೆ. ಮಕ್ಕಳ ವಯಸ್ಸನ್ನು 18 ವರ್ಷದ ಬದಲು 14 ವರ್ಷಕ್ಕೆ ಸೀಮಿತಗೊಳಿಸುವಂತೆ ಇವು ಬೇಡಿಕೆ ಇಟ್ಟಿವೆ.

ಪ್ರಸ್ತಾವಿತ ನಿಯಮಗಳು 2023ರ ಡಿಜಿಟಲ್ ವೈಯಕ್ತಿಕ ದತ್ತಾಂಶ ರಕ್ಷಣೆ ಕಾಯ್ದೆಯ ನಿಬಂಧನೆಗಳನ್ನು ಜಾರಿಗೊಳಿಸಲು ಪ್ರಮುಖವಾಗಿವೆ. ಕಾಯ್ದೆಯು ಆಗಸ್ಟ್ 2023ರಲ್ಲಿಯೇ ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದ್ದರೂ ಅದರ ಜಾರಿಗಾಗಿ ನಿಯಮಗಳನ್ನು ರೂಪಿಸಲಾಗುತ್ತಿದೆ.

2023ರ ಡೇಟಾ ಸಂರಕ್ಷಣೆ ಕಾಯ್ದೆಯು ವೈಯಕ್ತಿಕ ಗೋಪ್ಯತೆಯನ್ನು ಬಲಪಡಿಸುವುದಿಲ್ಲ ಮತ್ತು ವ್ಯಕ್ತಿಗಳ ಡೇಟಾಗಳನ್ನು ದುರ್ಬಳಕೆ  ಮಾಡಿಕೊಳ್ಳುವ ಸರಕಾರೇತರ ಸಂಸ್ಥೆಗಳ ಮೇಲೆ ಸಾಕಷ್ಟು ಹೊಣೆಗಾರಿಕೆಯನ್ನು ಹೊರಿಸುವುದಿಲ್ಲ ಎಂಬ ಕಳವಳಗಳನ್ನು ವಿಮರ್ಶಕರು ವ್ಯಕ್ತಪಡಿಸಿದ್ದಾರೆ.

ಕೊಡಗು: ಮಸೀದಿ ನಿರ್ಮಾಣಕ್ಕೆ ಹಿಂದೂ, ಕ್ರೈಸ್ತರ ನೆರವು; ವಿಶಿಷ್ಟ ಶೈಲಿಯ ಮಸೀದಿ ಉದ್ಘಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...