Homeಮುಖಪುಟಕ್ಯಾನ್ಸರ್ ಗುಣವಾಗುತ್ತೆಂದು ಗಂಗಾ ನದಿಯಲ್ಲಿ ಮುಳುಗಿಸಿದ ಪೋಷಕರು: 5 ವರ್ಷದ ಬಾಲಕ ಸಾವು

ಕ್ಯಾನ್ಸರ್ ಗುಣವಾಗುತ್ತೆಂದು ಗಂಗಾ ನದಿಯಲ್ಲಿ ಮುಳುಗಿಸಿದ ಪೋಷಕರು: 5 ವರ್ಷದ ಬಾಲಕ ಸಾವು

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ಪೋಷಕರ ಮೌಢ್ಯಕ್ಕೆ ಐದು ವರ್ಷದ ಮಗುವೊಂದು ಬಲಿಯಾಗಿದೆ. ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಗುವನ್ನು ಗಂಗಾ ನದಿಯಲ್ಲಿ ಮುಳುಗಿಸಿದರೆ ರೋಗ ಗುಣವಾಗುತ್ತದೆ ಎಂದು ನಂಬಿದ ಪೋಷಕರು ಮಗುವನ್ನು ನದಿಯಲ್ಲಿ ಮುಳುಗಿಸಿದ್ದು, ಮೃತಪಟ್ಟಿದೆ.

ದೆಹಲಿಯ ನಿವಾಸಿಯಾದ ಬಾಲಕನಿಗೆ ಕ್ಯಾನ್ಸರ್‌ ರೋಗ ಉಲ್ಬಣಗೊಂಡಿತ್ತು. ವೈದ್ಯರು ಮಗು ಬದುಕುವ ಸಾಧ್ಯತೆ ಇಲ್ಲ ಎಂದಿದ್ದರು. ಈ ನಡುವೆ ಗಂಗೆಯಲ್ಲಿ ಮುಳುಗಿಸಿದರೆ ರೋಗ ಗುಣವಾಗುತ್ತದೆ ಎಂದು ಯಾರದ್ದೋ ಮೌಢ್ಯದ ಮಾತು ನಂಬಿ ಪೋಷಕರು ಹರಿದ್ವಾರಕ್ಕೆ ತೆರಳಿದ್ದರು. ಅಲ್ಲಿ ಮಗುವನ್ನು ಗಂಗಾ ನದಿಯಲ್ಲಿ ಮುಳುಗಿಸಿ ಹತ್ಯೆಗೈದಿದ್ದಾರೆ. ಮಗುವಿನ ಜೊತೆ ಪೋಷಕರು ಮತ್ತು ಇನ್ನೊಬ್ಬ ಮಹಿಳೆ ಇದ್ದರು. ಆಕೆ ಮಗುವಿನ ಚಿಕ್ಕಮ್ಮ ಎನ್ನಲಾಗಿದೆ.

ಪೋಷಕರು ಮತ್ತು ಚಿಕ್ಕಮ್ಮ ಎನ್ನಲಾದ ಮಹಿಳೆ ಹರಿದ್ವಾರದ ಹರ್ ಕಿ ಪೌರಿ ಘಾಟ್‌ನಲ್ಲಿ ಮಗುವನ್ನು ಗಂಗಾ ನದಿಯಲ್ಲಿ ತುಂಬಾ ಹೊತ್ತು ಮುಳುಗಿಸಿ ಹಿಡಿದಿರುವುದನ್ನು ಕಂಡು ಅಲ್ಲಿದ್ದ ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಗುವನ್ನು ಮೇಲೆತ್ತುವಂತೆ ಹೇಳಿದ್ದಾರೆ. ಆದರೆ, ಚಿಕ್ಕಮ್ಮ ಎನ್ನಲಾದ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಾಳೆ. ಕೊನೆಗೆ ವ್ಯಕ್ತಿಯೊಬ್ಬರು ಮಗುವನ್ನು ಮೇಲೆತ್ತಿದ್ದಾರೆ. ಈ ವೇಳೆ ಆ ಮಹಿಳೆ ಅಡ್ಡಿಪಡಿಸಿದ್ದಾಳೆ. ಆದರೂ, ಸುತ್ತಮುತ್ತಲಿದ್ದವರು ಮಗುವನ್ನು ನೀರಿನಿಂದ ಮೇಲೆತ್ತಿದ್ದಾರೆ. ಅಷ್ಟೊತ್ತಿಗೆ ಮಗು ಸಂಪೂರ್ಣ ಬಳಲಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ. ಈ ಕುರಿತ ವಿಡಿಯೋ ಲಭ್ಯವಾಗಿದೆ.

ಮತ್ತೊಂದು ವಿಡಿಯೋದಲ್ಲಿ ಮಗುವಿನ ಮೃತದೇಹದ ಮುಂದೆ ಕುಳಿತ ಮಹಿಳೆ ದೇಹಕ್ಕೆ ದೇವರು ಬಂದಂತೆ ಆಡುತ್ತಿರುವುದು ನೋಡಬಹುದು. ಈಕೆ ಇನ್ನೂ ಮಗು ಬದುಕಿ ಬರುತ್ತದೆ ಎಂಬ ಭರವಸೆಯಲ್ಲಿದ್ದಾರೆ ಎಂದು ಎನ್‌ಡಿವಿ ವರದಿ ಮಾಡಿದೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ದೆಹಲಿಯ ಬಾಲಕನನ್ನು ರೋಗ ಗುಣವಾಗುತ್ತದೆ ಎಂಬ ನಂಬಿಕೆಯಲ್ಲಿ ಇಲ್ಲಿಗೆ ತಂದು ಗಂಗೆಯಲ್ಲಿ ಮುಳುಗಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಾವು ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಹರಿದ್ವಾರ ನಗರ ಪೊಲೀಸ್ ಠಾಣೆಯ ಮುಖ್ಯಸ್ಥ ಸ್ವತಂತ್ರ ಕುಮಾರ್ ತಿಳಿಸಿದ್ದಾರೆ.

ಬಾಲಕನ ಪೋಷಕರು ಮತ್ತು ಆತನ ಚಿಕ್ಕಮ್ಮನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...