Homeಮುಖಪುಟಕ್ಯಾನ್ಸರ್ ಗುಣವಾಗುತ್ತೆಂದು ಗಂಗಾ ನದಿಯಲ್ಲಿ ಮುಳುಗಿಸಿದ ಪೋಷಕರು: 5 ವರ್ಷದ ಬಾಲಕ ಸಾವು

ಕ್ಯಾನ್ಸರ್ ಗುಣವಾಗುತ್ತೆಂದು ಗಂಗಾ ನದಿಯಲ್ಲಿ ಮುಳುಗಿಸಿದ ಪೋಷಕರು: 5 ವರ್ಷದ ಬಾಲಕ ಸಾವು

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ಪೋಷಕರ ಮೌಢ್ಯಕ್ಕೆ ಐದು ವರ್ಷದ ಮಗುವೊಂದು ಬಲಿಯಾಗಿದೆ. ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಗುವನ್ನು ಗಂಗಾ ನದಿಯಲ್ಲಿ ಮುಳುಗಿಸಿದರೆ ರೋಗ ಗುಣವಾಗುತ್ತದೆ ಎಂದು ನಂಬಿದ ಪೋಷಕರು ಮಗುವನ್ನು ನದಿಯಲ್ಲಿ ಮುಳುಗಿಸಿದ್ದು, ಮೃತಪಟ್ಟಿದೆ.

ದೆಹಲಿಯ ನಿವಾಸಿಯಾದ ಬಾಲಕನಿಗೆ ಕ್ಯಾನ್ಸರ್‌ ರೋಗ ಉಲ್ಬಣಗೊಂಡಿತ್ತು. ವೈದ್ಯರು ಮಗು ಬದುಕುವ ಸಾಧ್ಯತೆ ಇಲ್ಲ ಎಂದಿದ್ದರು. ಈ ನಡುವೆ ಗಂಗೆಯಲ್ಲಿ ಮುಳುಗಿಸಿದರೆ ರೋಗ ಗುಣವಾಗುತ್ತದೆ ಎಂದು ಯಾರದ್ದೋ ಮೌಢ್ಯದ ಮಾತು ನಂಬಿ ಪೋಷಕರು ಹರಿದ್ವಾರಕ್ಕೆ ತೆರಳಿದ್ದರು. ಅಲ್ಲಿ ಮಗುವನ್ನು ಗಂಗಾ ನದಿಯಲ್ಲಿ ಮುಳುಗಿಸಿ ಹತ್ಯೆಗೈದಿದ್ದಾರೆ. ಮಗುವಿನ ಜೊತೆ ಪೋಷಕರು ಮತ್ತು ಇನ್ನೊಬ್ಬ ಮಹಿಳೆ ಇದ್ದರು. ಆಕೆ ಮಗುವಿನ ಚಿಕ್ಕಮ್ಮ ಎನ್ನಲಾಗಿದೆ.

ಪೋಷಕರು ಮತ್ತು ಚಿಕ್ಕಮ್ಮ ಎನ್ನಲಾದ ಮಹಿಳೆ ಹರಿದ್ವಾರದ ಹರ್ ಕಿ ಪೌರಿ ಘಾಟ್‌ನಲ್ಲಿ ಮಗುವನ್ನು ಗಂಗಾ ನದಿಯಲ್ಲಿ ತುಂಬಾ ಹೊತ್ತು ಮುಳುಗಿಸಿ ಹಿಡಿದಿರುವುದನ್ನು ಕಂಡು ಅಲ್ಲಿದ್ದ ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಗುವನ್ನು ಮೇಲೆತ್ತುವಂತೆ ಹೇಳಿದ್ದಾರೆ. ಆದರೆ, ಚಿಕ್ಕಮ್ಮ ಎನ್ನಲಾದ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಾಳೆ. ಕೊನೆಗೆ ವ್ಯಕ್ತಿಯೊಬ್ಬರು ಮಗುವನ್ನು ಮೇಲೆತ್ತಿದ್ದಾರೆ. ಈ ವೇಳೆ ಆ ಮಹಿಳೆ ಅಡ್ಡಿಪಡಿಸಿದ್ದಾಳೆ. ಆದರೂ, ಸುತ್ತಮುತ್ತಲಿದ್ದವರು ಮಗುವನ್ನು ನೀರಿನಿಂದ ಮೇಲೆತ್ತಿದ್ದಾರೆ. ಅಷ್ಟೊತ್ತಿಗೆ ಮಗು ಸಂಪೂರ್ಣ ಬಳಲಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ. ಈ ಕುರಿತ ವಿಡಿಯೋ ಲಭ್ಯವಾಗಿದೆ.

ಮತ್ತೊಂದು ವಿಡಿಯೋದಲ್ಲಿ ಮಗುವಿನ ಮೃತದೇಹದ ಮುಂದೆ ಕುಳಿತ ಮಹಿಳೆ ದೇಹಕ್ಕೆ ದೇವರು ಬಂದಂತೆ ಆಡುತ್ತಿರುವುದು ನೋಡಬಹುದು. ಈಕೆ ಇನ್ನೂ ಮಗು ಬದುಕಿ ಬರುತ್ತದೆ ಎಂಬ ಭರವಸೆಯಲ್ಲಿದ್ದಾರೆ ಎಂದು ಎನ್‌ಡಿವಿ ವರದಿ ಮಾಡಿದೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ದೆಹಲಿಯ ಬಾಲಕನನ್ನು ರೋಗ ಗುಣವಾಗುತ್ತದೆ ಎಂಬ ನಂಬಿಕೆಯಲ್ಲಿ ಇಲ್ಲಿಗೆ ತಂದು ಗಂಗೆಯಲ್ಲಿ ಮುಳುಗಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಾವು ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಹರಿದ್ವಾರ ನಗರ ಪೊಲೀಸ್ ಠಾಣೆಯ ಮುಖ್ಯಸ್ಥ ಸ್ವತಂತ್ರ ಕುಮಾರ್ ತಿಳಿಸಿದ್ದಾರೆ.

ಬಾಲಕನ ಪೋಷಕರು ಮತ್ತು ಆತನ ಚಿಕ್ಕಮ್ಮನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...