Homeಮುಖಪುಟಕ್ಯಾನ್ಸರ್ ಗುಣವಾಗುತ್ತೆಂದು ಗಂಗಾ ನದಿಯಲ್ಲಿ ಮುಳುಗಿಸಿದ ಪೋಷಕರು: 5 ವರ್ಷದ ಬಾಲಕ ಸಾವು

ಕ್ಯಾನ್ಸರ್ ಗುಣವಾಗುತ್ತೆಂದು ಗಂಗಾ ನದಿಯಲ್ಲಿ ಮುಳುಗಿಸಿದ ಪೋಷಕರು: 5 ವರ್ಷದ ಬಾಲಕ ಸಾವು

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ಪೋಷಕರ ಮೌಢ್ಯಕ್ಕೆ ಐದು ವರ್ಷದ ಮಗುವೊಂದು ಬಲಿಯಾಗಿದೆ. ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಗುವನ್ನು ಗಂಗಾ ನದಿಯಲ್ಲಿ ಮುಳುಗಿಸಿದರೆ ರೋಗ ಗುಣವಾಗುತ್ತದೆ ಎಂದು ನಂಬಿದ ಪೋಷಕರು ಮಗುವನ್ನು ನದಿಯಲ್ಲಿ ಮುಳುಗಿಸಿದ್ದು, ಮೃತಪಟ್ಟಿದೆ.

ದೆಹಲಿಯ ನಿವಾಸಿಯಾದ ಬಾಲಕನಿಗೆ ಕ್ಯಾನ್ಸರ್‌ ರೋಗ ಉಲ್ಬಣಗೊಂಡಿತ್ತು. ವೈದ್ಯರು ಮಗು ಬದುಕುವ ಸಾಧ್ಯತೆ ಇಲ್ಲ ಎಂದಿದ್ದರು. ಈ ನಡುವೆ ಗಂಗೆಯಲ್ಲಿ ಮುಳುಗಿಸಿದರೆ ರೋಗ ಗುಣವಾಗುತ್ತದೆ ಎಂದು ಯಾರದ್ದೋ ಮೌಢ್ಯದ ಮಾತು ನಂಬಿ ಪೋಷಕರು ಹರಿದ್ವಾರಕ್ಕೆ ತೆರಳಿದ್ದರು. ಅಲ್ಲಿ ಮಗುವನ್ನು ಗಂಗಾ ನದಿಯಲ್ಲಿ ಮುಳುಗಿಸಿ ಹತ್ಯೆಗೈದಿದ್ದಾರೆ. ಮಗುವಿನ ಜೊತೆ ಪೋಷಕರು ಮತ್ತು ಇನ್ನೊಬ್ಬ ಮಹಿಳೆ ಇದ್ದರು. ಆಕೆ ಮಗುವಿನ ಚಿಕ್ಕಮ್ಮ ಎನ್ನಲಾಗಿದೆ.

ಪೋಷಕರು ಮತ್ತು ಚಿಕ್ಕಮ್ಮ ಎನ್ನಲಾದ ಮಹಿಳೆ ಹರಿದ್ವಾರದ ಹರ್ ಕಿ ಪೌರಿ ಘಾಟ್‌ನಲ್ಲಿ ಮಗುವನ್ನು ಗಂಗಾ ನದಿಯಲ್ಲಿ ತುಂಬಾ ಹೊತ್ತು ಮುಳುಗಿಸಿ ಹಿಡಿದಿರುವುದನ್ನು ಕಂಡು ಅಲ್ಲಿದ್ದ ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಗುವನ್ನು ಮೇಲೆತ್ತುವಂತೆ ಹೇಳಿದ್ದಾರೆ. ಆದರೆ, ಚಿಕ್ಕಮ್ಮ ಎನ್ನಲಾದ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಾಳೆ. ಕೊನೆಗೆ ವ್ಯಕ್ತಿಯೊಬ್ಬರು ಮಗುವನ್ನು ಮೇಲೆತ್ತಿದ್ದಾರೆ. ಈ ವೇಳೆ ಆ ಮಹಿಳೆ ಅಡ್ಡಿಪಡಿಸಿದ್ದಾಳೆ. ಆದರೂ, ಸುತ್ತಮುತ್ತಲಿದ್ದವರು ಮಗುವನ್ನು ನೀರಿನಿಂದ ಮೇಲೆತ್ತಿದ್ದಾರೆ. ಅಷ್ಟೊತ್ತಿಗೆ ಮಗು ಸಂಪೂರ್ಣ ಬಳಲಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ. ಈ ಕುರಿತ ವಿಡಿಯೋ ಲಭ್ಯವಾಗಿದೆ.

ಮತ್ತೊಂದು ವಿಡಿಯೋದಲ್ಲಿ ಮಗುವಿನ ಮೃತದೇಹದ ಮುಂದೆ ಕುಳಿತ ಮಹಿಳೆ ದೇಹಕ್ಕೆ ದೇವರು ಬಂದಂತೆ ಆಡುತ್ತಿರುವುದು ನೋಡಬಹುದು. ಈಕೆ ಇನ್ನೂ ಮಗು ಬದುಕಿ ಬರುತ್ತದೆ ಎಂಬ ಭರವಸೆಯಲ್ಲಿದ್ದಾರೆ ಎಂದು ಎನ್‌ಡಿವಿ ವರದಿ ಮಾಡಿದೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ದೆಹಲಿಯ ಬಾಲಕನನ್ನು ರೋಗ ಗುಣವಾಗುತ್ತದೆ ಎಂಬ ನಂಬಿಕೆಯಲ್ಲಿ ಇಲ್ಲಿಗೆ ತಂದು ಗಂಗೆಯಲ್ಲಿ ಮುಳುಗಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಾವು ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಹರಿದ್ವಾರ ನಗರ ಪೊಲೀಸ್ ಠಾಣೆಯ ಮುಖ್ಯಸ್ಥ ಸ್ವತಂತ್ರ ಕುಮಾರ್ ತಿಳಿಸಿದ್ದಾರೆ.

ಬಾಲಕನ ಪೋಷಕರು ಮತ್ತು ಆತನ ಚಿಕ್ಕಮ್ಮನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...