Homeಕರ್ನಾಟಕಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ...

ಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

14 ವರ್ಷದ ದಲಿತ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ  ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಲ್ಲಿ ನಡೆದಿದೆ.

ತಮ್ಮ ಮಾತಿನಂತೆ ಸಂಧಾನಕ್ಕೆ ಒಪ್ಪದೆ ದೂರು ನೀಡಿದರು ಎಂಬ ಕಾರಣಕ್ಕೆ ದಲಿತ ಕುಟುಂಬವನ್ನು ಬಹಿಷ್ಕರಿಸಿರುವ ಸವರ್ಣೀಯರು, ಗ್ರಾಮದ ಅಂಗಡಿಗಳಲ್ಲಿ ದಿನಸಿ ಸಾಮಗ್ರಿ ನೀಡದಂತೆ ಷರತ್ತು ವಿಧಿಸಿದ್ದಾರೆ. ಈ ಸಾಮಾಜಿಕ ಬಹಿಷ್ಕಾರದಿಂದಾಗಿ ಗ್ರಾಮದ ದಲಿತ ಸಮುದಾಯದ ಮಕ್ಕಳಿಗೆ ಅಗತ್ಯವಿರುವ ಪೆನ್ನು, ನೋಟುಬುಕ್ ಮತ್ತು ದೈನಂದಿನ ದಿನಸಿ ಸಾಮಗ್ರಿ ಸಿಗದೆ ಹಲವು ಕುಟುಂಬಗಳು ಪರದಾಡುತ್ತಿವೆ. ಗ್ರಾಮದಲ್ಲಿ ಕಡಿಮೆ ಸಂಖ್ಯೆಯಲ್ಲಿರುವ ದಲಿತರು, ಇದೀಗ ಸಾಮಾಜಿಕ ಬಹಿಷ್ಕಾರದಿಂದಾಗಿ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಬಹಿಷ್ಕಾರಕ್ಕೆ ಕಾರಣವೇನು?

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿ ಆಗಲು ಕಾರಣನಾಗಿದ್ದ ಯುವಕನ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲು ದೂರು ದಾಖಲಿಸಿದ್ದರು. ಆರೋಪಕ್ಕೆ ಸಂಬಂಧಿಸಿ ಸಂತ್ರಸ್ತೆ ಕುಟುಂಬಸ್ಥರು ಸಂಧಾನಕ್ಕೆ ಒಪ್ಪದೆ, ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದರಿಂದ ಕೋಪಗೊಂಡ ಗ್ರಾಮದ ಸವರ್ಣೀಯರು ಇಡೀ ಗ್ರಾಮದ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ಗ್ರಾಮದಲ್ಲಿ ದಲಿತರಿಗ್ಯಾರಿಗೂ ದಿನಸಿ ಹಾಗೂ ಮತ್ತಿತರೆ ದೈನಂದಿನ ಬಳಕೆ ವಸ್ತುಗಳನ್ನು ಮಾರಾಟ ಮಾಡದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ ಎನ್ನಲಾಗಿದೆ. ಉಪ್ಪು ಖರೀದಿಸಲು ಅಂಗಡಿಯೊಂದಕ್ಕೆ ತೆರಳಿದ್ದ ದಲಿತ ಮಹಿಳೆ ಮತ್ತು ಪೆನ್ನು ಖರೀದಿಸಲು ತೆರಳಿದ್ದ ಶಾಲಾ ಮಕ್ಕಳಿಗೆ ಅಂಗಡಿ ಮಾಲೀಕರು ಬಹಿಷ್ಕಾರ ಹಾಕಿರಯವ ವಿಚಾರವನ್ನು ಹೇಳಿದ್ದಾರೆ ಎನ್ನಲಾಗಿದೆ.

ಇಂಥ ಬಹಿಷ್ಕಾರ ಕುರಿತ ಧ್ವನಿಮುದ್ರಿಕೆ (ಆಡಿಯೋ ರೆಕಾರ್ಡಿಂಗ್) ಇದೀಗ ವೈರಲ್‌ ಆಗಿದ್ದು, ಅದರಲ್ಲಿ ಯಾವುದೇ ತರಹದ ವಸ್ತುಗಳು ನೀಡಬಾರದು ಎಂದು ತಮಗೆ ಗ್ರಾಮದ ಪ್ರಮುಖರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆಂದು ಅಂಗಡಿಯವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಶಾಲೆಗೆ ಹೊರಟಿರುವ ಮಕ್ಕಳಿಗಾದರೂ ಪೆನ್ನು ಪೆನ್ಸಿಲ್‌ ಆದರೂ ನೀಡಿ ಎಂದು ಯುವಕ ಕೇಳಿಕೊಂಡರೂ ಕೊಡಲೊಪ್ಪದ ಅಂಗಡಿ ಮಾಲೀಕರು, ಪೆನ್ನು, ಪುಸಕ್ತವಷ್ಟೇ ಅಲ್ಲ, ನಿಮ್ಮ ಮಂದಿಗೆ (ದಲಿತರು) ಯಾವುದನ್ನೂ ಕೊಡಬಾರದು ಎಂದು ಆಜ್ಞೆಯಾಗಿದೆ ಎಂದು ತಿಳಿಸುತ್ತಾರೆ. ಈ ಸಾಮಾಜಿಕ ಕ್ರೌರ್ಯದಿಂದಾಗಿ ಬೆರಳಣಿಕೆಯಷ್ಟಿರುವ ಬಪ್ಪರಗಾ ಗ್ರಾಮದ ದಲಿತ ವರ್ಗದಲ್ಲಿ ಆತಂಕ ಮನೆ ಮಾಡಿದೆ.

ಘಟನೆ ಹಿನ್ನಲೆ:

ಬಪ್ಪರಗಾ ಗ್ರಾಮದ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿದ್ದ ಪ್ರಬಲ ಜಾತಿ ಯುವಕನೊಬ್ಬ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಆಕೆ 5 ತಿಂಗಳ ಗರ್ಭಿಣಿಯಾಗಿದ್ದು, ಮದುವೆಗೆ ನಿರಾಕರಿಸಿದ್ದ. ಈ ಸಂಬಂಧ ಒಂದು ತಿಂಗಳ ಹಿಂದೆ ನಾರಾಯಣಪುರ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಬಾಲಕಿ ತಾಯಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ತಮ್ಮೆದುರು ಸಂಧಾನಕ್ಕೆ ಬರುವ ಬದಲು ನೇರವಾಗಿ ಠಾಣೆಗೆ ತೆರಳಿ ದೂರು ದಾಖಲಿಸಿದ್ದಕ್ಕೆ ಆಕ್ರೋಶಗೊಂಡ ಸವರ್ಣೀಯರು, ಇಡೀ ದಲಿತ ಸಮುದಾಯಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಾಗಿದೆ.

ಪರಿಶಿಷ್ಟ ಸಮುದಾಯದ ಜನರ ಜೊತೆಗೆ ಯಾವುದೇ ರೀತಿಯ ವ್ಯವಹಾರ ಮಾಡದಂತೆ ಎಲ್ಲ ಅಂಗಡಿಗಳಿಗೆ ತಾಕೀತು ಮಾಡಿ, ನಮಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ದಿನಸಿ ಪದಾರ್ಥವಷ್ಟೇ ಅಲ್ಲ, ಶಾಲಾ ಮಕ್ಕಳಿಗೆ ಪೆನ್ನು, ನೋಟ್‌ಬುಕ್ ಸೇರಿದಂತೆ ಯಾವುದೇ ಸಾಮಗ್ರಿಗಳನ್ನೂ ಮಾರಾಟ ಮಾಡುತ್ತಿಲ್ಲ ಎಂದು ಬಪ್ಪರಗಿ ಗ್ರಾಮದ ದಲಿತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ; ಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...