Homeಕರ್ನಾಟಕಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ...

ಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

14 ವರ್ಷದ ದಲಿತ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ  ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಲ್ಲಿ ನಡೆದಿದೆ.

ತಮ್ಮ ಮಾತಿನಂತೆ ಸಂಧಾನಕ್ಕೆ ಒಪ್ಪದೆ ದೂರು ನೀಡಿದರು ಎಂಬ ಕಾರಣಕ್ಕೆ ದಲಿತ ಕುಟುಂಬವನ್ನು ಬಹಿಷ್ಕರಿಸಿರುವ ಸವರ್ಣೀಯರು, ಗ್ರಾಮದ ಅಂಗಡಿಗಳಲ್ಲಿ ದಿನಸಿ ಸಾಮಗ್ರಿ ನೀಡದಂತೆ ಷರತ್ತು ವಿಧಿಸಿದ್ದಾರೆ. ಈ ಸಾಮಾಜಿಕ ಬಹಿಷ್ಕಾರದಿಂದಾಗಿ ಗ್ರಾಮದ ದಲಿತ ಸಮುದಾಯದ ಮಕ್ಕಳಿಗೆ ಅಗತ್ಯವಿರುವ ಪೆನ್ನು, ನೋಟುಬುಕ್ ಮತ್ತು ದೈನಂದಿನ ದಿನಸಿ ಸಾಮಗ್ರಿ ಸಿಗದೆ ಹಲವು ಕುಟುಂಬಗಳು ಪರದಾಡುತ್ತಿವೆ. ಗ್ರಾಮದಲ್ಲಿ ಕಡಿಮೆ ಸಂಖ್ಯೆಯಲ್ಲಿರುವ ದಲಿತರು, ಇದೀಗ ಸಾಮಾಜಿಕ ಬಹಿಷ್ಕಾರದಿಂದಾಗಿ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಬಹಿಷ್ಕಾರಕ್ಕೆ ಕಾರಣವೇನು?

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿ ಆಗಲು ಕಾರಣನಾಗಿದ್ದ ಯುವಕನ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲು ದೂರು ದಾಖಲಿಸಿದ್ದರು. ಆರೋಪಕ್ಕೆ ಸಂಬಂಧಿಸಿ ಸಂತ್ರಸ್ತೆ ಕುಟುಂಬಸ್ಥರು ಸಂಧಾನಕ್ಕೆ ಒಪ್ಪದೆ, ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದರಿಂದ ಕೋಪಗೊಂಡ ಗ್ರಾಮದ ಸವರ್ಣೀಯರು ಇಡೀ ಗ್ರಾಮದ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ಗ್ರಾಮದಲ್ಲಿ ದಲಿತರಿಗ್ಯಾರಿಗೂ ದಿನಸಿ ಹಾಗೂ ಮತ್ತಿತರೆ ದೈನಂದಿನ ಬಳಕೆ ವಸ್ತುಗಳನ್ನು ಮಾರಾಟ ಮಾಡದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ ಎನ್ನಲಾಗಿದೆ. ಉಪ್ಪು ಖರೀದಿಸಲು ಅಂಗಡಿಯೊಂದಕ್ಕೆ ತೆರಳಿದ್ದ ದಲಿತ ಮಹಿಳೆ ಮತ್ತು ಪೆನ್ನು ಖರೀದಿಸಲು ತೆರಳಿದ್ದ ಶಾಲಾ ಮಕ್ಕಳಿಗೆ ಅಂಗಡಿ ಮಾಲೀಕರು ಬಹಿಷ್ಕಾರ ಹಾಕಿರಯವ ವಿಚಾರವನ್ನು ಹೇಳಿದ್ದಾರೆ ಎನ್ನಲಾಗಿದೆ.

ಇಂಥ ಬಹಿಷ್ಕಾರ ಕುರಿತ ಧ್ವನಿಮುದ್ರಿಕೆ (ಆಡಿಯೋ ರೆಕಾರ್ಡಿಂಗ್) ಇದೀಗ ವೈರಲ್‌ ಆಗಿದ್ದು, ಅದರಲ್ಲಿ ಯಾವುದೇ ತರಹದ ವಸ್ತುಗಳು ನೀಡಬಾರದು ಎಂದು ತಮಗೆ ಗ್ರಾಮದ ಪ್ರಮುಖರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆಂದು ಅಂಗಡಿಯವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಶಾಲೆಗೆ ಹೊರಟಿರುವ ಮಕ್ಕಳಿಗಾದರೂ ಪೆನ್ನು ಪೆನ್ಸಿಲ್‌ ಆದರೂ ನೀಡಿ ಎಂದು ಯುವಕ ಕೇಳಿಕೊಂಡರೂ ಕೊಡಲೊಪ್ಪದ ಅಂಗಡಿ ಮಾಲೀಕರು, ಪೆನ್ನು, ಪುಸಕ್ತವಷ್ಟೇ ಅಲ್ಲ, ನಿಮ್ಮ ಮಂದಿಗೆ (ದಲಿತರು) ಯಾವುದನ್ನೂ ಕೊಡಬಾರದು ಎಂದು ಆಜ್ಞೆಯಾಗಿದೆ ಎಂದು ತಿಳಿಸುತ್ತಾರೆ. ಈ ಸಾಮಾಜಿಕ ಕ್ರೌರ್ಯದಿಂದಾಗಿ ಬೆರಳಣಿಕೆಯಷ್ಟಿರುವ ಬಪ್ಪರಗಾ ಗ್ರಾಮದ ದಲಿತ ವರ್ಗದಲ್ಲಿ ಆತಂಕ ಮನೆ ಮಾಡಿದೆ.

ಘಟನೆ ಹಿನ್ನಲೆ:

ಬಪ್ಪರಗಾ ಗ್ರಾಮದ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿದ್ದ ಪ್ರಬಲ ಜಾತಿ ಯುವಕನೊಬ್ಬ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಆಕೆ 5 ತಿಂಗಳ ಗರ್ಭಿಣಿಯಾಗಿದ್ದು, ಮದುವೆಗೆ ನಿರಾಕರಿಸಿದ್ದ. ಈ ಸಂಬಂಧ ಒಂದು ತಿಂಗಳ ಹಿಂದೆ ನಾರಾಯಣಪುರ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಬಾಲಕಿ ತಾಯಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ತಮ್ಮೆದುರು ಸಂಧಾನಕ್ಕೆ ಬರುವ ಬದಲು ನೇರವಾಗಿ ಠಾಣೆಗೆ ತೆರಳಿ ದೂರು ದಾಖಲಿಸಿದ್ದಕ್ಕೆ ಆಕ್ರೋಶಗೊಂಡ ಸವರ್ಣೀಯರು, ಇಡೀ ದಲಿತ ಸಮುದಾಯಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಾಗಿದೆ.

ಪರಿಶಿಷ್ಟ ಸಮುದಾಯದ ಜನರ ಜೊತೆಗೆ ಯಾವುದೇ ರೀತಿಯ ವ್ಯವಹಾರ ಮಾಡದಂತೆ ಎಲ್ಲ ಅಂಗಡಿಗಳಿಗೆ ತಾಕೀತು ಮಾಡಿ, ನಮಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ದಿನಸಿ ಪದಾರ್ಥವಷ್ಟೇ ಅಲ್ಲ, ಶಾಲಾ ಮಕ್ಕಳಿಗೆ ಪೆನ್ನು, ನೋಟ್‌ಬುಕ್ ಸೇರಿದಂತೆ ಯಾವುದೇ ಸಾಮಗ್ರಿಗಳನ್ನೂ ಮಾರಾಟ ಮಾಡುತ್ತಿಲ್ಲ ಎಂದು ಬಪ್ಪರಗಿ ಗ್ರಾಮದ ದಲಿತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ; ಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...