Homeಕರ್ನಾಟಕಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ...

ಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

14 ವರ್ಷದ ದಲಿತ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ  ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಲ್ಲಿ ನಡೆದಿದೆ.

ತಮ್ಮ ಮಾತಿನಂತೆ ಸಂಧಾನಕ್ಕೆ ಒಪ್ಪದೆ ದೂರು ನೀಡಿದರು ಎಂಬ ಕಾರಣಕ್ಕೆ ದಲಿತ ಕುಟುಂಬವನ್ನು ಬಹಿಷ್ಕರಿಸಿರುವ ಸವರ್ಣೀಯರು, ಗ್ರಾಮದ ಅಂಗಡಿಗಳಲ್ಲಿ ದಿನಸಿ ಸಾಮಗ್ರಿ ನೀಡದಂತೆ ಷರತ್ತು ವಿಧಿಸಿದ್ದಾರೆ. ಈ ಸಾಮಾಜಿಕ ಬಹಿಷ್ಕಾರದಿಂದಾಗಿ ಗ್ರಾಮದ ದಲಿತ ಸಮುದಾಯದ ಮಕ್ಕಳಿಗೆ ಅಗತ್ಯವಿರುವ ಪೆನ್ನು, ನೋಟುಬುಕ್ ಮತ್ತು ದೈನಂದಿನ ದಿನಸಿ ಸಾಮಗ್ರಿ ಸಿಗದೆ ಹಲವು ಕುಟುಂಬಗಳು ಪರದಾಡುತ್ತಿವೆ. ಗ್ರಾಮದಲ್ಲಿ ಕಡಿಮೆ ಸಂಖ್ಯೆಯಲ್ಲಿರುವ ದಲಿತರು, ಇದೀಗ ಸಾಮಾಜಿಕ ಬಹಿಷ್ಕಾರದಿಂದಾಗಿ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಬಹಿಷ್ಕಾರಕ್ಕೆ ಕಾರಣವೇನು?

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿ ಆಗಲು ಕಾರಣನಾಗಿದ್ದ ಯುವಕನ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲು ದೂರು ದಾಖಲಿಸಿದ್ದರು. ಆರೋಪಕ್ಕೆ ಸಂಬಂಧಿಸಿ ಸಂತ್ರಸ್ತೆ ಕುಟುಂಬಸ್ಥರು ಸಂಧಾನಕ್ಕೆ ಒಪ್ಪದೆ, ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದರಿಂದ ಕೋಪಗೊಂಡ ಗ್ರಾಮದ ಸವರ್ಣೀಯರು ಇಡೀ ಗ್ರಾಮದ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ಗ್ರಾಮದಲ್ಲಿ ದಲಿತರಿಗ್ಯಾರಿಗೂ ದಿನಸಿ ಹಾಗೂ ಮತ್ತಿತರೆ ದೈನಂದಿನ ಬಳಕೆ ವಸ್ತುಗಳನ್ನು ಮಾರಾಟ ಮಾಡದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ ಎನ್ನಲಾಗಿದೆ. ಉಪ್ಪು ಖರೀದಿಸಲು ಅಂಗಡಿಯೊಂದಕ್ಕೆ ತೆರಳಿದ್ದ ದಲಿತ ಮಹಿಳೆ ಮತ್ತು ಪೆನ್ನು ಖರೀದಿಸಲು ತೆರಳಿದ್ದ ಶಾಲಾ ಮಕ್ಕಳಿಗೆ ಅಂಗಡಿ ಮಾಲೀಕರು ಬಹಿಷ್ಕಾರ ಹಾಕಿರಯವ ವಿಚಾರವನ್ನು ಹೇಳಿದ್ದಾರೆ ಎನ್ನಲಾಗಿದೆ.

ಇಂಥ ಬಹಿಷ್ಕಾರ ಕುರಿತ ಧ್ವನಿಮುದ್ರಿಕೆ (ಆಡಿಯೋ ರೆಕಾರ್ಡಿಂಗ್) ಇದೀಗ ವೈರಲ್‌ ಆಗಿದ್ದು, ಅದರಲ್ಲಿ ಯಾವುದೇ ತರಹದ ವಸ್ತುಗಳು ನೀಡಬಾರದು ಎಂದು ತಮಗೆ ಗ್ರಾಮದ ಪ್ರಮುಖರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆಂದು ಅಂಗಡಿಯವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಶಾಲೆಗೆ ಹೊರಟಿರುವ ಮಕ್ಕಳಿಗಾದರೂ ಪೆನ್ನು ಪೆನ್ಸಿಲ್‌ ಆದರೂ ನೀಡಿ ಎಂದು ಯುವಕ ಕೇಳಿಕೊಂಡರೂ ಕೊಡಲೊಪ್ಪದ ಅಂಗಡಿ ಮಾಲೀಕರು, ಪೆನ್ನು, ಪುಸಕ್ತವಷ್ಟೇ ಅಲ್ಲ, ನಿಮ್ಮ ಮಂದಿಗೆ (ದಲಿತರು) ಯಾವುದನ್ನೂ ಕೊಡಬಾರದು ಎಂದು ಆಜ್ಞೆಯಾಗಿದೆ ಎಂದು ತಿಳಿಸುತ್ತಾರೆ. ಈ ಸಾಮಾಜಿಕ ಕ್ರೌರ್ಯದಿಂದಾಗಿ ಬೆರಳಣಿಕೆಯಷ್ಟಿರುವ ಬಪ್ಪರಗಾ ಗ್ರಾಮದ ದಲಿತ ವರ್ಗದಲ್ಲಿ ಆತಂಕ ಮನೆ ಮಾಡಿದೆ.

ಘಟನೆ ಹಿನ್ನಲೆ:

ಬಪ್ಪರಗಾ ಗ್ರಾಮದ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿದ್ದ ಪ್ರಬಲ ಜಾತಿ ಯುವಕನೊಬ್ಬ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಆಕೆ 5 ತಿಂಗಳ ಗರ್ಭಿಣಿಯಾಗಿದ್ದು, ಮದುವೆಗೆ ನಿರಾಕರಿಸಿದ್ದ. ಈ ಸಂಬಂಧ ಒಂದು ತಿಂಗಳ ಹಿಂದೆ ನಾರಾಯಣಪುರ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಬಾಲಕಿ ತಾಯಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ತಮ್ಮೆದುರು ಸಂಧಾನಕ್ಕೆ ಬರುವ ಬದಲು ನೇರವಾಗಿ ಠಾಣೆಗೆ ತೆರಳಿ ದೂರು ದಾಖಲಿಸಿದ್ದಕ್ಕೆ ಆಕ್ರೋಶಗೊಂಡ ಸವರ್ಣೀಯರು, ಇಡೀ ದಲಿತ ಸಮುದಾಯಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಾಗಿದೆ.

ಪರಿಶಿಷ್ಟ ಸಮುದಾಯದ ಜನರ ಜೊತೆಗೆ ಯಾವುದೇ ರೀತಿಯ ವ್ಯವಹಾರ ಮಾಡದಂತೆ ಎಲ್ಲ ಅಂಗಡಿಗಳಿಗೆ ತಾಕೀತು ಮಾಡಿ, ನಮಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ದಿನಸಿ ಪದಾರ್ಥವಷ್ಟೇ ಅಲ್ಲ, ಶಾಲಾ ಮಕ್ಕಳಿಗೆ ಪೆನ್ನು, ನೋಟ್‌ಬುಕ್ ಸೇರಿದಂತೆ ಯಾವುದೇ ಸಾಮಗ್ರಿಗಳನ್ನೂ ಮಾರಾಟ ಮಾಡುತ್ತಿಲ್ಲ ಎಂದು ಬಪ್ಪರಗಿ ಗ್ರಾಮದ ದಲಿತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ; ಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...