Homeಕರ್ನಾಟಕ’ನಮ್ಮ ಮಕ್ಕಳನ್ನು ಕೂಡಾ ಇದೇ ರೀತಿ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದೆ’

’ನಮ್ಮ ಮಕ್ಕಳನ್ನು ಕೂಡಾ ಇದೇ ರೀತಿ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದೆ’

ದಿಶಾ ರವಿ ಬಂಧನ ಖಂಡಿಸಿ, ಮಕ್ಕಳ ಸ್ವಾತಂತ್ಯ್ರ, ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಸರ್ಕಾರಕ್ಕೆ ಪತ್ರ ಬರೆದ ಪೋಷಕರು

- Advertisement -
- Advertisement -

ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಟೂಲ್ಕಿಟ್ ಪ್ರಕರಣದಲ್ಲಿ ದಿಶಾ ರವಿಯನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಯುವಜನರು ಮತ್ತು ಮಕ್ಕಳನ್ನು ಹೊಂದಿರುವ ಪೋಷಕರು ಖಂಡಿಸಿದ್ದು, ಮಕ್ಕಳ ಸ್ವಾತಂತ್ಯ್ರ, ಸುರಕ್ಷತೆಯ ಬಗ್ಗೆ ಖಚಿತ ಪಡಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, “ದೆಹಲಿ ಪೊಲೀಸರು ದಿಶಾ ಅವರನ್ನು ಮನೆಯಿಂದ ಬಂಧಿಸಿ ದೆಹಲಿಗೆ ಕರೆದೊಯ್ದರು. ಅವರನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿಲ್ಲ ಮತ್ತು ತಮ್ಮ ವಕೀಲರನ್ನು ಸಂಪರ್ಕಿಸಲು ಸಹ ಅವಕಾಶ ಮಾಡಿಕೊಡಲಿಲ್ಲ. ಸಾಂವಿಧಾನಿಕ ಮತ್ತು ಕ್ರಿಮಿನಲ್‌ ಕಾನೂನಿನಲ್ಲಿ ಸ್ಥಾಪಿಸಲಾದ ಕಾರ್ಯವಿಧಾನಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ಬಂಧನವನ್ನು ನಡೆಸಲಾಗಿದೆ. ಭಾನುವಾರ ಮಧ್ಯಾಹ್ನ ದೆಹಲಿಯ ಮ್ಯಾಜಿಸ್ಟ್ರೇಟ್‌ ಎದುರು ಹಾಜರಾಗುವವರೆಗೂ ದಿಶಾ ಕುಟುಂಬಕ್ಕೆ ಅವರು ಇರುವ ಸ್ಥಳದ ಬಗ್ಗೆ ಯಾವುದೆ ಮಾಹಿತಿ ನೀಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

“ಅವರು ಮಾಡಿರುವ ಅಪರಾಧವೆಂದರೆ, ರೈತರ ಪ್ರತಿಭಟನೆಯ ಬಗ್ಗೆ ಒಂದು ಟೂಲ್‌ ಕಿಟ್‌ ತನ್ನ ಸಾಮಾಜಿಕ ಮಾಧ್ಯಮಗಳ‌ ಮೂಲಕ ಹಂಚಿದ್ದು, ಅದರಲ್ಲಿ ಸ್ವಲ್ಪ ತಿದ್ದುಪಡಿ ಮಾಡಿದ್ದು. ಈ ‘ಟೂಲ್ಕಿಟ್‌’ – ದೇಶದ್ರೋಹದ ಪಿತೂರಿಯ ಭಾಗವಾಗಿದೆ ಎಂದು ಪೊಲೀಸರು ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಇದು ಕೆಲವು ಲೇಖಕನಗಳು, ಸಾಮಾಜಿಕ ಮಾಧ್ಯಮಗಳು ಮತ್ತು ರೈತರ ಪ್ರತಿಭಟನೆಯ ಮಾಹಿತಿಯನ್ನು ಒಂದು ಕಡೆ ಸಂಗ್ರಹ ಮಾಡುವ ಒಂದು ಡಾಕ್ಯುಮೆಂಟ್‌. ಈ ವಿಷಯದ ಬಗ್ಗೆ ಕಲಿಯಲು ಬಯಸುವ ಯಾರಿಗಾದರು ಸುಲಭವಾಗಿ ಮಾಹಿತಿ ಹಂಚಲು ಒಂದು ಗೈಡ್‌ ಅಷ್ಟೆ” ಎಂದ ಪತ್ರದಲ್ಲಿ ಪೋಷಕರು ಸರ್ಕಾರಕ್ಕೆ ತಿಳಿಸಿದ್ದಾರೆ.

“ಟೂಲ್ಕಿಟ್‌ ಅನ್ನು ಪರಿಶೀಲಿಸಿದ ವಕೀಲರು ಮತ್ತು ತಜ್ಞರು ಇದು ಅಹಿಂಸಾತ್ಮಕ ಪ್ರತಿಭಟನೆಯ ವಿವಿಧ ವಿಧಾನಗಳೆಂದು ಹೇಳಿದ್ದು, ಅದರಲ್ಲಿ ಕಾನೂನುಬಾಹಿರ ಏನೂ ಇಲ್ಲ ಎಂದಿದ್ದಾರೆ. ಹಾಗೆಯೇ ಟೂಲ್‌‌ಕಿಟ್‌ನಲ್ಲಿ ನಮೂದಿಸಿದ ‘ಟ್ವೀಟ್‌ ಬಿರುಗಾಳಿಗಳು’ (ಟ್ವಿಟ್ಟರ್‌ ಸ್ಟಾರ್ಮ್‌) ವೈವಿಧ್ಯಮಯ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತೊಡಗಿಸಿಕೊಳ್ಳುವ ಒಂದು ಸಾಮಾನ್ಯ ರೂಪವಾಗಿದೆ” ಎಂದು ಹೇಳಿದ್ದಾರೆ.

ಮಕ್ಕಳ, ಯುವಜನರ ಪೋಷಕರಾದ ನಾವು ಈ ಬಂಧನದಿಂದ ಆಘಾತಕ್ಕೊಳಗಾಗಿದ್ದೇವೆ ಎಂದಿರುವ ಪೋಷಕರು, ಸರ್ಕಾರ ಮತ್ತು ಸಾಮಾಜಿಕ ಚಳುವಳಿಗಳು ಬಳಸುವ ಸಾಮಾನ್ಯ ಸಾಧನವನ್ನು (ಟೂಲ್‌ ಕಿಟ್‌) ಅಪರಾಧೀಕರಿಸುವ ಈ ಪ್ರಕರಣದಲ್ಲಿ ಯುವಕರು ಮತ್ತು ಪೋಷಕರಲ್ಲಿ ಭೀತಿ ಉಂಟು ಮಾಡಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಮಹಾತ್ಮಾ ಗಾಂಧಿ ಮೊಮ್ಮಗಳ ಬೆಂಬಲ: ಅವರು ಹೇಳಿದ್ದೇನು?

“ಕಾನೂನು ಬಾಹಿರವಾಗಿ ದಿಶಾ ಅವರನ್ನು ಬಂಧಿಸಿಲಾಗಿ, ಬೇರೆ ನಗರಕ್ಕೆ ಕರೆದೊಯ್ಯಲಾಯಿತು ಮತ್ತು ಪೊಲೀಸ್‌ ಕಸ್ಟಡಿಯಲ್ಲಿ ಇರಿಸಲಾಯಿತು ಎಂದು ನಮಗೆ ಆಕ್ರೋಶ ಮತ್ತು ಆತಂಕವಿದೆ. ಅವರ ಬಂಧನದ ಬಗ್ಗೆ ಸಂವಹನ ನಡೆಸಲು ಯಾವುದೇ ಅವಕಾಶವನ್ನು ಅವರ ಕುಟುಂಬಕ್ಕೆ ನೀಡಲಾಗಿಲ್ಲ. ನಮ್ಮ ಮಕ್ಕಳನ್ನು ಸಹ ಇದೇ ರೀತಿಯಲ್ಲಿ, ಕಾನೂನು ಬಾಹಿರವಾಗಿ ಯಾರಾದರೂ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದ್ದು, ನ್ಯಾಯಕ್ಕಾಗಿ ಹೋರಾಡುತ್ತಿರುವ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಧ್ವನಿ ಎತ್ತಿರುವ ಹಲವು ಸಾಮಾಜಕ ಕಾರ್ಯಕರ್ತರನ್ನು ಸರ್ಕಾರ ಬಂಧಿಸಿದೆ’’ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೇ ಅಲ್ಲದೆ, ದಿಶಾರನ್ನು ಕೊಲೆ ಮಾಡಲು ಹರ್ಯಾಣದ ಮಂತ್ರಿಗಳೊಬ್ಬರು ಕರೆ ನೀಡಿರುವುದು ಮಾತ್ರವಲ್ಲದೆ, ಅವರನ್ನು ಭಯೋತ್ಪಾದರಿಗೆ ಹೋಲಿಸಿರುವುದು ನಮ್ಮಲ್ಲಿ ಗಾಬರಿ ಉಂಟು ಮಾಡಿದೆ ಎಂದು ಪೋಷಕರು ಹೇಳಿದ್ದಾರೆ.

ಸಾಮಾಜಿಕವಾಗಿ ಧ್ವನಿ ಎತ್ತಿರುವ ಹಲವು ಯುವತಿಯರನ್ನು ಬಂಧಿಸಿರುವುದನ್ನು ಖಂಡಿಸುರುವ ಪತ್ರವು, “ಮಕ್ಕಳ ಸಂಪೂರ್ಣ ಅಭಿವೃದ್ಧಿಗೆ ಅವರ ಹಲವು ವಿಭಿನ್ನ ದೃಷ್ಟಿಕೋನಗಳನ್ನು ಸ್ವಾಗತಿಸಬೇಕು, ಅದರ ಬಗ್ಗೆ ಆತ್ಮಾವಲೋಕನ ಮಾಡಬೇಕು. ಮಕ್ಕಳನ್ನು ಬರೀ ಅವರ ವಿಧ್ಯಾಭ್ಯಾಸದ ಮೇಲೆ ಅಸಕ್ತಿ ತೋರಿಸಬೇಕೆಂದು ಒತ್ತಾಯಿಸುವ ಮನೋಭಾವ ಅಪಾಯಕಾರಿಯಾಗಿದೆ. ಇದರಿಂದ ಸಮ್ಮಮಕ್ಕಳು ಕೇವಲ ಪುಸ್ತಕದ ಬದನೆಕಾಯಿಗಲಾಗುವ, ಕೂಪದ ಮಂಡೂಕಗಳಾಗುವ ಸಾಧ್ಯತೆಗಳೇ ಹೆಚ್ಚು” ಎಂದು ಪತ್ರವು ಹೇಳಿದೆ.

ಇದನ್ನೂ ಓದಿ: ’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

ಯುವಜನರ ಮಾತನ್ನು, ಅವರ ಅಭಿಪ್ರಾಯ-ಅನಿಸಿಕೆಗಳನ್ನು ಅಪರಾಧೀಕರಿಸುವುದರಿಂದ, ಅವರ ಭವಿಷ್ಯವನ್ನು ಅವರಿಂದ ಕದ್ದಂತಾಗುತ್ತದೆ. ನಮ್ಮ ಮಕ್ಕಳನ್ನು ರಕ್ಷಿಸುವದರಲ್ಲಿ ನಮಗೆ ಸಹಾಯ ಮಾಡಬೇಕಾದ ನಮ್ಮ ಸರ್ಕಾರ ಮತ್ತು ನಮ್ಮ ಕಾನೂನು ವ್ಯವಸ್ಥೆಯು ಅವರನ್ನು ಮಾರಣಾಂತಿಕ ಅಪಾಯಕ್ಕೆ ಸಿಲುಕಿಸಿವೆ ಎಂದಿರುವ ಪೋಷಕರು, ಮೂರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.

  1. ಯುವ ವಯಸ್ಕರ ಕಾನೂನಾತ್ಮಕ ಅಭಿವ್ಯಕ್ತಿ ಹಕ್ಕನ್ನು ಹತ್ತಿಕ್ಕುವ ಈ ಅಸಂಬದ್ಧ ತನಿಖೆಯನ್ನು ದಿಲ್ಲಿ ಪೊಲೀಸ್‌ ಕೈಬಿಟ್ಟು ದಿಶಾ ರವಿ ಅವರನ್ನು ಬಿಡುಗಡೆ ಮಾಡಬೇಕು.
  2. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಮತ್ತು ರಾಜದ್ರೋಹ (ಸೆಡಿಶನ್‌) ಕಾನೂನನ್ನು ಸಂಸತ್ತು ರದ್ದುಪಡಿಸಬೇಕು
  3. ಕರ್ನಾಟಕ ಸರ್ಕಾರವು ಈ ವಿಷಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ದಿಲ್ಲಿ ಪೊಲೀಸ್‌‌ನ ಈ ಕಾರ್ಯಾಚರಣೆ ಸಾಂವಿಧಾನಿಕ ಮತ್ತು ಕ್ರಿಮಿನಲ್‌ ಕಾನೂನಿನಲ್ಲಿ ಸ್ಥಾಪಿಸಲಾದ ಕಾರ್ಯ ವಿಧಾನಗಳು ಬದ್ಧವಾಗಿತ್ತೆ ಎಂದು ಖಚಿತಪಡಿಸಬೇಕು, ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...