Homeಕರ್ನಾಟಕ’ನಮ್ಮ ಮಕ್ಕಳನ್ನು ಕೂಡಾ ಇದೇ ರೀತಿ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದೆ’

’ನಮ್ಮ ಮಕ್ಕಳನ್ನು ಕೂಡಾ ಇದೇ ರೀತಿ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದೆ’

ದಿಶಾ ರವಿ ಬಂಧನ ಖಂಡಿಸಿ, ಮಕ್ಕಳ ಸ್ವಾತಂತ್ಯ್ರ, ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಸರ್ಕಾರಕ್ಕೆ ಪತ್ರ ಬರೆದ ಪೋಷಕರು

- Advertisement -
- Advertisement -

ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಟೂಲ್ಕಿಟ್ ಪ್ರಕರಣದಲ್ಲಿ ದಿಶಾ ರವಿಯನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಯುವಜನರು ಮತ್ತು ಮಕ್ಕಳನ್ನು ಹೊಂದಿರುವ ಪೋಷಕರು ಖಂಡಿಸಿದ್ದು, ಮಕ್ಕಳ ಸ್ವಾತಂತ್ಯ್ರ, ಸುರಕ್ಷತೆಯ ಬಗ್ಗೆ ಖಚಿತ ಪಡಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, “ದೆಹಲಿ ಪೊಲೀಸರು ದಿಶಾ ಅವರನ್ನು ಮನೆಯಿಂದ ಬಂಧಿಸಿ ದೆಹಲಿಗೆ ಕರೆದೊಯ್ದರು. ಅವರನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿಲ್ಲ ಮತ್ತು ತಮ್ಮ ವಕೀಲರನ್ನು ಸಂಪರ್ಕಿಸಲು ಸಹ ಅವಕಾಶ ಮಾಡಿಕೊಡಲಿಲ್ಲ. ಸಾಂವಿಧಾನಿಕ ಮತ್ತು ಕ್ರಿಮಿನಲ್‌ ಕಾನೂನಿನಲ್ಲಿ ಸ್ಥಾಪಿಸಲಾದ ಕಾರ್ಯವಿಧಾನಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ಬಂಧನವನ್ನು ನಡೆಸಲಾಗಿದೆ. ಭಾನುವಾರ ಮಧ್ಯಾಹ್ನ ದೆಹಲಿಯ ಮ್ಯಾಜಿಸ್ಟ್ರೇಟ್‌ ಎದುರು ಹಾಜರಾಗುವವರೆಗೂ ದಿಶಾ ಕುಟುಂಬಕ್ಕೆ ಅವರು ಇರುವ ಸ್ಥಳದ ಬಗ್ಗೆ ಯಾವುದೆ ಮಾಹಿತಿ ನೀಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

“ಅವರು ಮಾಡಿರುವ ಅಪರಾಧವೆಂದರೆ, ರೈತರ ಪ್ರತಿಭಟನೆಯ ಬಗ್ಗೆ ಒಂದು ಟೂಲ್‌ ಕಿಟ್‌ ತನ್ನ ಸಾಮಾಜಿಕ ಮಾಧ್ಯಮಗಳ‌ ಮೂಲಕ ಹಂಚಿದ್ದು, ಅದರಲ್ಲಿ ಸ್ವಲ್ಪ ತಿದ್ದುಪಡಿ ಮಾಡಿದ್ದು. ಈ ‘ಟೂಲ್ಕಿಟ್‌’ – ದೇಶದ್ರೋಹದ ಪಿತೂರಿಯ ಭಾಗವಾಗಿದೆ ಎಂದು ಪೊಲೀಸರು ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಇದು ಕೆಲವು ಲೇಖಕನಗಳು, ಸಾಮಾಜಿಕ ಮಾಧ್ಯಮಗಳು ಮತ್ತು ರೈತರ ಪ್ರತಿಭಟನೆಯ ಮಾಹಿತಿಯನ್ನು ಒಂದು ಕಡೆ ಸಂಗ್ರಹ ಮಾಡುವ ಒಂದು ಡಾಕ್ಯುಮೆಂಟ್‌. ಈ ವಿಷಯದ ಬಗ್ಗೆ ಕಲಿಯಲು ಬಯಸುವ ಯಾರಿಗಾದರು ಸುಲಭವಾಗಿ ಮಾಹಿತಿ ಹಂಚಲು ಒಂದು ಗೈಡ್‌ ಅಷ್ಟೆ” ಎಂದ ಪತ್ರದಲ್ಲಿ ಪೋಷಕರು ಸರ್ಕಾರಕ್ಕೆ ತಿಳಿಸಿದ್ದಾರೆ.

“ಟೂಲ್ಕಿಟ್‌ ಅನ್ನು ಪರಿಶೀಲಿಸಿದ ವಕೀಲರು ಮತ್ತು ತಜ್ಞರು ಇದು ಅಹಿಂಸಾತ್ಮಕ ಪ್ರತಿಭಟನೆಯ ವಿವಿಧ ವಿಧಾನಗಳೆಂದು ಹೇಳಿದ್ದು, ಅದರಲ್ಲಿ ಕಾನೂನುಬಾಹಿರ ಏನೂ ಇಲ್ಲ ಎಂದಿದ್ದಾರೆ. ಹಾಗೆಯೇ ಟೂಲ್‌‌ಕಿಟ್‌ನಲ್ಲಿ ನಮೂದಿಸಿದ ‘ಟ್ವೀಟ್‌ ಬಿರುಗಾಳಿಗಳು’ (ಟ್ವಿಟ್ಟರ್‌ ಸ್ಟಾರ್ಮ್‌) ವೈವಿಧ್ಯಮಯ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತೊಡಗಿಸಿಕೊಳ್ಳುವ ಒಂದು ಸಾಮಾನ್ಯ ರೂಪವಾಗಿದೆ” ಎಂದು ಹೇಳಿದ್ದಾರೆ.

ಮಕ್ಕಳ, ಯುವಜನರ ಪೋಷಕರಾದ ನಾವು ಈ ಬಂಧನದಿಂದ ಆಘಾತಕ್ಕೊಳಗಾಗಿದ್ದೇವೆ ಎಂದಿರುವ ಪೋಷಕರು, ಸರ್ಕಾರ ಮತ್ತು ಸಾಮಾಜಿಕ ಚಳುವಳಿಗಳು ಬಳಸುವ ಸಾಮಾನ್ಯ ಸಾಧನವನ್ನು (ಟೂಲ್‌ ಕಿಟ್‌) ಅಪರಾಧೀಕರಿಸುವ ಈ ಪ್ರಕರಣದಲ್ಲಿ ಯುವಕರು ಮತ್ತು ಪೋಷಕರಲ್ಲಿ ಭೀತಿ ಉಂಟು ಮಾಡಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಮಹಾತ್ಮಾ ಗಾಂಧಿ ಮೊಮ್ಮಗಳ ಬೆಂಬಲ: ಅವರು ಹೇಳಿದ್ದೇನು?

“ಕಾನೂನು ಬಾಹಿರವಾಗಿ ದಿಶಾ ಅವರನ್ನು ಬಂಧಿಸಿಲಾಗಿ, ಬೇರೆ ನಗರಕ್ಕೆ ಕರೆದೊಯ್ಯಲಾಯಿತು ಮತ್ತು ಪೊಲೀಸ್‌ ಕಸ್ಟಡಿಯಲ್ಲಿ ಇರಿಸಲಾಯಿತು ಎಂದು ನಮಗೆ ಆಕ್ರೋಶ ಮತ್ತು ಆತಂಕವಿದೆ. ಅವರ ಬಂಧನದ ಬಗ್ಗೆ ಸಂವಹನ ನಡೆಸಲು ಯಾವುದೇ ಅವಕಾಶವನ್ನು ಅವರ ಕುಟುಂಬಕ್ಕೆ ನೀಡಲಾಗಿಲ್ಲ. ನಮ್ಮ ಮಕ್ಕಳನ್ನು ಸಹ ಇದೇ ರೀತಿಯಲ್ಲಿ, ಕಾನೂನು ಬಾಹಿರವಾಗಿ ಯಾರಾದರೂ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದ್ದು, ನ್ಯಾಯಕ್ಕಾಗಿ ಹೋರಾಡುತ್ತಿರುವ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಧ್ವನಿ ಎತ್ತಿರುವ ಹಲವು ಸಾಮಾಜಕ ಕಾರ್ಯಕರ್ತರನ್ನು ಸರ್ಕಾರ ಬಂಧಿಸಿದೆ’’ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೇ ಅಲ್ಲದೆ, ದಿಶಾರನ್ನು ಕೊಲೆ ಮಾಡಲು ಹರ್ಯಾಣದ ಮಂತ್ರಿಗಳೊಬ್ಬರು ಕರೆ ನೀಡಿರುವುದು ಮಾತ್ರವಲ್ಲದೆ, ಅವರನ್ನು ಭಯೋತ್ಪಾದರಿಗೆ ಹೋಲಿಸಿರುವುದು ನಮ್ಮಲ್ಲಿ ಗಾಬರಿ ಉಂಟು ಮಾಡಿದೆ ಎಂದು ಪೋಷಕರು ಹೇಳಿದ್ದಾರೆ.

ಸಾಮಾಜಿಕವಾಗಿ ಧ್ವನಿ ಎತ್ತಿರುವ ಹಲವು ಯುವತಿಯರನ್ನು ಬಂಧಿಸಿರುವುದನ್ನು ಖಂಡಿಸುರುವ ಪತ್ರವು, “ಮಕ್ಕಳ ಸಂಪೂರ್ಣ ಅಭಿವೃದ್ಧಿಗೆ ಅವರ ಹಲವು ವಿಭಿನ್ನ ದೃಷ್ಟಿಕೋನಗಳನ್ನು ಸ್ವಾಗತಿಸಬೇಕು, ಅದರ ಬಗ್ಗೆ ಆತ್ಮಾವಲೋಕನ ಮಾಡಬೇಕು. ಮಕ್ಕಳನ್ನು ಬರೀ ಅವರ ವಿಧ್ಯಾಭ್ಯಾಸದ ಮೇಲೆ ಅಸಕ್ತಿ ತೋರಿಸಬೇಕೆಂದು ಒತ್ತಾಯಿಸುವ ಮನೋಭಾವ ಅಪಾಯಕಾರಿಯಾಗಿದೆ. ಇದರಿಂದ ಸಮ್ಮಮಕ್ಕಳು ಕೇವಲ ಪುಸ್ತಕದ ಬದನೆಕಾಯಿಗಲಾಗುವ, ಕೂಪದ ಮಂಡೂಕಗಳಾಗುವ ಸಾಧ್ಯತೆಗಳೇ ಹೆಚ್ಚು” ಎಂದು ಪತ್ರವು ಹೇಳಿದೆ.

ಇದನ್ನೂ ಓದಿ: ’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

ಯುವಜನರ ಮಾತನ್ನು, ಅವರ ಅಭಿಪ್ರಾಯ-ಅನಿಸಿಕೆಗಳನ್ನು ಅಪರಾಧೀಕರಿಸುವುದರಿಂದ, ಅವರ ಭವಿಷ್ಯವನ್ನು ಅವರಿಂದ ಕದ್ದಂತಾಗುತ್ತದೆ. ನಮ್ಮ ಮಕ್ಕಳನ್ನು ರಕ್ಷಿಸುವದರಲ್ಲಿ ನಮಗೆ ಸಹಾಯ ಮಾಡಬೇಕಾದ ನಮ್ಮ ಸರ್ಕಾರ ಮತ್ತು ನಮ್ಮ ಕಾನೂನು ವ್ಯವಸ್ಥೆಯು ಅವರನ್ನು ಮಾರಣಾಂತಿಕ ಅಪಾಯಕ್ಕೆ ಸಿಲುಕಿಸಿವೆ ಎಂದಿರುವ ಪೋಷಕರು, ಮೂರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.

  1. ಯುವ ವಯಸ್ಕರ ಕಾನೂನಾತ್ಮಕ ಅಭಿವ್ಯಕ್ತಿ ಹಕ್ಕನ್ನು ಹತ್ತಿಕ್ಕುವ ಈ ಅಸಂಬದ್ಧ ತನಿಖೆಯನ್ನು ದಿಲ್ಲಿ ಪೊಲೀಸ್‌ ಕೈಬಿಟ್ಟು ದಿಶಾ ರವಿ ಅವರನ್ನು ಬಿಡುಗಡೆ ಮಾಡಬೇಕು.
  2. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಮತ್ತು ರಾಜದ್ರೋಹ (ಸೆಡಿಶನ್‌) ಕಾನೂನನ್ನು ಸಂಸತ್ತು ರದ್ದುಪಡಿಸಬೇಕು
  3. ಕರ್ನಾಟಕ ಸರ್ಕಾರವು ಈ ವಿಷಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ದಿಲ್ಲಿ ಪೊಲೀಸ್‌‌ನ ಈ ಕಾರ್ಯಾಚರಣೆ ಸಾಂವಿಧಾನಿಕ ಮತ್ತು ಕ್ರಿಮಿನಲ್‌ ಕಾನೂನಿನಲ್ಲಿ ಸ್ಥಾಪಿಸಲಾದ ಕಾರ್ಯ ವಿಧಾನಗಳು ಬದ್ಧವಾಗಿತ್ತೆ ಎಂದು ಖಚಿತಪಡಿಸಬೇಕು, ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...