Homeಕರ್ನಾಟಕ’ನಮ್ಮ ಮಕ್ಕಳನ್ನು ಕೂಡಾ ಇದೇ ರೀತಿ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದೆ’

’ನಮ್ಮ ಮಕ್ಕಳನ್ನು ಕೂಡಾ ಇದೇ ರೀತಿ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದೆ’

ದಿಶಾ ರವಿ ಬಂಧನ ಖಂಡಿಸಿ, ಮಕ್ಕಳ ಸ್ವಾತಂತ್ಯ್ರ, ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಸರ್ಕಾರಕ್ಕೆ ಪತ್ರ ಬರೆದ ಪೋಷಕರು

- Advertisement -
- Advertisement -

ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಟೂಲ್ಕಿಟ್ ಪ್ರಕರಣದಲ್ಲಿ ದಿಶಾ ರವಿಯನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಯುವಜನರು ಮತ್ತು ಮಕ್ಕಳನ್ನು ಹೊಂದಿರುವ ಪೋಷಕರು ಖಂಡಿಸಿದ್ದು, ಮಕ್ಕಳ ಸ್ವಾತಂತ್ಯ್ರ, ಸುರಕ್ಷತೆಯ ಬಗ್ಗೆ ಖಚಿತ ಪಡಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, “ದೆಹಲಿ ಪೊಲೀಸರು ದಿಶಾ ಅವರನ್ನು ಮನೆಯಿಂದ ಬಂಧಿಸಿ ದೆಹಲಿಗೆ ಕರೆದೊಯ್ದರು. ಅವರನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿಲ್ಲ ಮತ್ತು ತಮ್ಮ ವಕೀಲರನ್ನು ಸಂಪರ್ಕಿಸಲು ಸಹ ಅವಕಾಶ ಮಾಡಿಕೊಡಲಿಲ್ಲ. ಸಾಂವಿಧಾನಿಕ ಮತ್ತು ಕ್ರಿಮಿನಲ್‌ ಕಾನೂನಿನಲ್ಲಿ ಸ್ಥಾಪಿಸಲಾದ ಕಾರ್ಯವಿಧಾನಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ಬಂಧನವನ್ನು ನಡೆಸಲಾಗಿದೆ. ಭಾನುವಾರ ಮಧ್ಯಾಹ್ನ ದೆಹಲಿಯ ಮ್ಯಾಜಿಸ್ಟ್ರೇಟ್‌ ಎದುರು ಹಾಜರಾಗುವವರೆಗೂ ದಿಶಾ ಕುಟುಂಬಕ್ಕೆ ಅವರು ಇರುವ ಸ್ಥಳದ ಬಗ್ಗೆ ಯಾವುದೆ ಮಾಹಿತಿ ನೀಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

“ಅವರು ಮಾಡಿರುವ ಅಪರಾಧವೆಂದರೆ, ರೈತರ ಪ್ರತಿಭಟನೆಯ ಬಗ್ಗೆ ಒಂದು ಟೂಲ್‌ ಕಿಟ್‌ ತನ್ನ ಸಾಮಾಜಿಕ ಮಾಧ್ಯಮಗಳ‌ ಮೂಲಕ ಹಂಚಿದ್ದು, ಅದರಲ್ಲಿ ಸ್ವಲ್ಪ ತಿದ್ದುಪಡಿ ಮಾಡಿದ್ದು. ಈ ‘ಟೂಲ್ಕಿಟ್‌’ – ದೇಶದ್ರೋಹದ ಪಿತೂರಿಯ ಭಾಗವಾಗಿದೆ ಎಂದು ಪೊಲೀಸರು ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಇದು ಕೆಲವು ಲೇಖಕನಗಳು, ಸಾಮಾಜಿಕ ಮಾಧ್ಯಮಗಳು ಮತ್ತು ರೈತರ ಪ್ರತಿಭಟನೆಯ ಮಾಹಿತಿಯನ್ನು ಒಂದು ಕಡೆ ಸಂಗ್ರಹ ಮಾಡುವ ಒಂದು ಡಾಕ್ಯುಮೆಂಟ್‌. ಈ ವಿಷಯದ ಬಗ್ಗೆ ಕಲಿಯಲು ಬಯಸುವ ಯಾರಿಗಾದರು ಸುಲಭವಾಗಿ ಮಾಹಿತಿ ಹಂಚಲು ಒಂದು ಗೈಡ್‌ ಅಷ್ಟೆ” ಎಂದ ಪತ್ರದಲ್ಲಿ ಪೋಷಕರು ಸರ್ಕಾರಕ್ಕೆ ತಿಳಿಸಿದ್ದಾರೆ.

“ಟೂಲ್ಕಿಟ್‌ ಅನ್ನು ಪರಿಶೀಲಿಸಿದ ವಕೀಲರು ಮತ್ತು ತಜ್ಞರು ಇದು ಅಹಿಂಸಾತ್ಮಕ ಪ್ರತಿಭಟನೆಯ ವಿವಿಧ ವಿಧಾನಗಳೆಂದು ಹೇಳಿದ್ದು, ಅದರಲ್ಲಿ ಕಾನೂನುಬಾಹಿರ ಏನೂ ಇಲ್ಲ ಎಂದಿದ್ದಾರೆ. ಹಾಗೆಯೇ ಟೂಲ್‌‌ಕಿಟ್‌ನಲ್ಲಿ ನಮೂದಿಸಿದ ‘ಟ್ವೀಟ್‌ ಬಿರುಗಾಳಿಗಳು’ (ಟ್ವಿಟ್ಟರ್‌ ಸ್ಟಾರ್ಮ್‌) ವೈವಿಧ್ಯಮಯ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತೊಡಗಿಸಿಕೊಳ್ಳುವ ಒಂದು ಸಾಮಾನ್ಯ ರೂಪವಾಗಿದೆ” ಎಂದು ಹೇಳಿದ್ದಾರೆ.

ಮಕ್ಕಳ, ಯುವಜನರ ಪೋಷಕರಾದ ನಾವು ಈ ಬಂಧನದಿಂದ ಆಘಾತಕ್ಕೊಳಗಾಗಿದ್ದೇವೆ ಎಂದಿರುವ ಪೋಷಕರು, ಸರ್ಕಾರ ಮತ್ತು ಸಾಮಾಜಿಕ ಚಳುವಳಿಗಳು ಬಳಸುವ ಸಾಮಾನ್ಯ ಸಾಧನವನ್ನು (ಟೂಲ್‌ ಕಿಟ್‌) ಅಪರಾಧೀಕರಿಸುವ ಈ ಪ್ರಕರಣದಲ್ಲಿ ಯುವಕರು ಮತ್ತು ಪೋಷಕರಲ್ಲಿ ಭೀತಿ ಉಂಟು ಮಾಡಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಮಹಾತ್ಮಾ ಗಾಂಧಿ ಮೊಮ್ಮಗಳ ಬೆಂಬಲ: ಅವರು ಹೇಳಿದ್ದೇನು?

“ಕಾನೂನು ಬಾಹಿರವಾಗಿ ದಿಶಾ ಅವರನ್ನು ಬಂಧಿಸಿಲಾಗಿ, ಬೇರೆ ನಗರಕ್ಕೆ ಕರೆದೊಯ್ಯಲಾಯಿತು ಮತ್ತು ಪೊಲೀಸ್‌ ಕಸ್ಟಡಿಯಲ್ಲಿ ಇರಿಸಲಾಯಿತು ಎಂದು ನಮಗೆ ಆಕ್ರೋಶ ಮತ್ತು ಆತಂಕವಿದೆ. ಅವರ ಬಂಧನದ ಬಗ್ಗೆ ಸಂವಹನ ನಡೆಸಲು ಯಾವುದೇ ಅವಕಾಶವನ್ನು ಅವರ ಕುಟುಂಬಕ್ಕೆ ನೀಡಲಾಗಿಲ್ಲ. ನಮ್ಮ ಮಕ್ಕಳನ್ನು ಸಹ ಇದೇ ರೀತಿಯಲ್ಲಿ, ಕಾನೂನು ಬಾಹಿರವಾಗಿ ಯಾರಾದರೂ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದ್ದು, ನ್ಯಾಯಕ್ಕಾಗಿ ಹೋರಾಡುತ್ತಿರುವ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಧ್ವನಿ ಎತ್ತಿರುವ ಹಲವು ಸಾಮಾಜಕ ಕಾರ್ಯಕರ್ತರನ್ನು ಸರ್ಕಾರ ಬಂಧಿಸಿದೆ’’ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೇ ಅಲ್ಲದೆ, ದಿಶಾರನ್ನು ಕೊಲೆ ಮಾಡಲು ಹರ್ಯಾಣದ ಮಂತ್ರಿಗಳೊಬ್ಬರು ಕರೆ ನೀಡಿರುವುದು ಮಾತ್ರವಲ್ಲದೆ, ಅವರನ್ನು ಭಯೋತ್ಪಾದರಿಗೆ ಹೋಲಿಸಿರುವುದು ನಮ್ಮಲ್ಲಿ ಗಾಬರಿ ಉಂಟು ಮಾಡಿದೆ ಎಂದು ಪೋಷಕರು ಹೇಳಿದ್ದಾರೆ.

ಸಾಮಾಜಿಕವಾಗಿ ಧ್ವನಿ ಎತ್ತಿರುವ ಹಲವು ಯುವತಿಯರನ್ನು ಬಂಧಿಸಿರುವುದನ್ನು ಖಂಡಿಸುರುವ ಪತ್ರವು, “ಮಕ್ಕಳ ಸಂಪೂರ್ಣ ಅಭಿವೃದ್ಧಿಗೆ ಅವರ ಹಲವು ವಿಭಿನ್ನ ದೃಷ್ಟಿಕೋನಗಳನ್ನು ಸ್ವಾಗತಿಸಬೇಕು, ಅದರ ಬಗ್ಗೆ ಆತ್ಮಾವಲೋಕನ ಮಾಡಬೇಕು. ಮಕ್ಕಳನ್ನು ಬರೀ ಅವರ ವಿಧ್ಯಾಭ್ಯಾಸದ ಮೇಲೆ ಅಸಕ್ತಿ ತೋರಿಸಬೇಕೆಂದು ಒತ್ತಾಯಿಸುವ ಮನೋಭಾವ ಅಪಾಯಕಾರಿಯಾಗಿದೆ. ಇದರಿಂದ ಸಮ್ಮಮಕ್ಕಳು ಕೇವಲ ಪುಸ್ತಕದ ಬದನೆಕಾಯಿಗಲಾಗುವ, ಕೂಪದ ಮಂಡೂಕಗಳಾಗುವ ಸಾಧ್ಯತೆಗಳೇ ಹೆಚ್ಚು” ಎಂದು ಪತ್ರವು ಹೇಳಿದೆ.

ಇದನ್ನೂ ಓದಿ: ’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

ಯುವಜನರ ಮಾತನ್ನು, ಅವರ ಅಭಿಪ್ರಾಯ-ಅನಿಸಿಕೆಗಳನ್ನು ಅಪರಾಧೀಕರಿಸುವುದರಿಂದ, ಅವರ ಭವಿಷ್ಯವನ್ನು ಅವರಿಂದ ಕದ್ದಂತಾಗುತ್ತದೆ. ನಮ್ಮ ಮಕ್ಕಳನ್ನು ರಕ್ಷಿಸುವದರಲ್ಲಿ ನಮಗೆ ಸಹಾಯ ಮಾಡಬೇಕಾದ ನಮ್ಮ ಸರ್ಕಾರ ಮತ್ತು ನಮ್ಮ ಕಾನೂನು ವ್ಯವಸ್ಥೆಯು ಅವರನ್ನು ಮಾರಣಾಂತಿಕ ಅಪಾಯಕ್ಕೆ ಸಿಲುಕಿಸಿವೆ ಎಂದಿರುವ ಪೋಷಕರು, ಮೂರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.

  1. ಯುವ ವಯಸ್ಕರ ಕಾನೂನಾತ್ಮಕ ಅಭಿವ್ಯಕ್ತಿ ಹಕ್ಕನ್ನು ಹತ್ತಿಕ್ಕುವ ಈ ಅಸಂಬದ್ಧ ತನಿಖೆಯನ್ನು ದಿಲ್ಲಿ ಪೊಲೀಸ್‌ ಕೈಬಿಟ್ಟು ದಿಶಾ ರವಿ ಅವರನ್ನು ಬಿಡುಗಡೆ ಮಾಡಬೇಕು.
  2. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಮತ್ತು ರಾಜದ್ರೋಹ (ಸೆಡಿಶನ್‌) ಕಾನೂನನ್ನು ಸಂಸತ್ತು ರದ್ದುಪಡಿಸಬೇಕು
  3. ಕರ್ನಾಟಕ ಸರ್ಕಾರವು ಈ ವಿಷಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ದಿಲ್ಲಿ ಪೊಲೀಸ್‌‌ನ ಈ ಕಾರ್ಯಾಚರಣೆ ಸಾಂವಿಧಾನಿಕ ಮತ್ತು ಕ್ರಿಮಿನಲ್‌ ಕಾನೂನಿನಲ್ಲಿ ಸ್ಥಾಪಿಸಲಾದ ಕಾರ್ಯ ವಿಧಾನಗಳು ಬದ್ಧವಾಗಿತ್ತೆ ಎಂದು ಖಚಿತಪಡಿಸಬೇಕು, ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...