Homeಮುಖಪುಟಪರೇಶ್ ರಾವಲ್‌ರ 'ದಿ ತಾಜ್ ಸ್ಟೋರಿ' ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

- Advertisement -
- Advertisement -

ನಟ ಪರೇಶ್ ರಾವಲ್ ಅವರ ಮುಂದಿನ ಚಿತ್ರ ‘ದಿ ತಾಜ್ ಸ್ಟೋರಿ’ಯ ಮೋಷನ್ ಪೋಸ್ಟರ್ ವಿವಾದದ ಕಿಡಿ ಹೊತ್ತಿಸಿದೆ. ತಾಜ್‌ ಮಹಲ್‌ನ ಗುಮ್ಮಟ ತೆಗೆಯುತ್ತಿರುವಂತೆ ಹಾಗೂ ಅಲ್ಲಿಂದ ಶಿವನ ಪ್ರತಿಮೆ ಹೊರಹೊಮ್ಮುತ್ತಿರುವಂತೆ ಪೋಸ್ಟರ್‌ನಲ್ಲಿ ತೋರಿಸಲಾಗಿದೆ.

ಪರೇಶ್ ರಾವಲ್ ಸೋಮವಾರ (ಸೆ.29) ಸಾಮಾಜಿಕ ಜಾಲತಾಣಗಳಲ್ಲಿ ಮೋಷನ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಐದು ದಿನಗಳ ಹಿಂದೆ ಇದೇ ರೀತಿಯ ಮತ್ತೊಂದು ಮೋಷನ್ ಪೋಸ್ಟರ್ ಹಂಚಿಕೊಂಡಿದ್ದರು. ಅದರಲ್ಲಿ ತಾಜ್‌ಮಹಲನ್ನು ಕಟಕಟೆಯಲ್ಲಿ ನಿಲ್ಲಿಸಿ ‘ತಾಜ್ ಮಹಲ್ ಅನ್ನು ಷಜಹಾನ್ ಕಟ್ಟಿಸಿದ್ರಾ?’ ಎಂದು ಪ್ರಶ್ನಿಸಲಾಗಿದೆ.

‘ದಿ ತಾಜ್ ಸ್ಟೋರಿ’ ಮತ್ತೊಂದು ಪ್ರೊಪಗಂಡ ಚಿತ್ರವೇ? ಎಂಬ ಪ್ರಶ್ನೆ ಮೂಡಿದೆ. ಚಿತ್ರದ ಪೋಸ್ಟರ್‌ಗಳು ಅದನ್ನು ಪುಷ್ಠೀಕರಿಸುತ್ತಿವೆ.

ಕೆಲ ವರ್ಷಗಳಿಂದ ಸಂಘಪರಿವಾರ, ಹಿಂದುತ್ವವಾದಿಗಳು ತಾಜ್‌ ಮಹಲ್‌ ಅನ್ನು ‘ತೇಜೋಮಹಲ್’ ಶಿವಮಂದಿರ ಎಂದು ಪ್ರತಿಪಾದಿಸಿಕೊಂಡು ಬರುತ್ತಿದ್ದಾರೆ. ಮಂದಿರ ಕೆಡವಿ ತಾಜ್‌ ಮಹಲ್ ನಿರ್ಮಿಸಲಾಗಿದೆ ಎಂಬ ಎಂದಿನ ವಾದವನ್ನು ಮುಂದಿಡುತ್ತಿದ್ದಾರೆ. ಆದರೆ, ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ, ಪಾರಂಪರಿಕ ತಾಣ ತಾಜ್‌ಮಹಲ್‌ ಮೇಲಿನ ಈ ಆರೋಪಗಳು ಇದುವರೆಗೆ ರುಜುವಾತಾಗಿಲ್ಲ. ತಾಜ್‌ ಮಹಲ್ ಸಂರಕ್ಷಿತ ಸ್ಮಾರಕವಾಗಿದೆ.

ಇದೀಗ ‘ದಿ ತಾಜ್‌ ಸ್ಟೋರಿ’ ಚಿತ್ರ ಸಂಘ ಪರಿವಾರದ ಪ್ರೊಪಗಂಡವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಕಳೆದ ಕೆಲ ವರ್ಷಗಳಿಂದ ‘ದಿ ಕಾಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ದಿ ಬೆಂಗಾಲ್ ಫೈಲ್ಸ್‌’ನಂತಹ ಪ್ರೊಪಗಂಡ ಚಿತ್ರಗಳು ದೇಶದಲ್ಲಿ ಬಂದಿವೆ. ಅವುಗಳ ಪಟ್ಟಿಗೆ ‘ದಿ ತಾಜ್ ಸ್ಟೋರಿ’ ಸೇರ್ಪಡೆಯಾಗುವ ಲಕ್ಷಣ ಕಾಣುತ್ತಿದೆ.

ಪೋಸ್ಟರ್ ವಿವಾದದ ಸ್ವರೂಪರ ಪಡೆಯುತ್ತಿದ್ದಂತೆ “ಚಿತ್ರವು ಯಾವುದೇ ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿಲ್ಲ ಅಥವಾ ತಾಜ್‌ಮಹಲ್‌ನ ಒಳಗೆ ಶಿವ ದೇವಾಲಯವಿದೆ ಎಂದು ಅದು ಹೇಳಿಕೊಳ್ಳುವುದಿಲ್ಲ. ಅದು ಕೇವಲ ಐತಿಹಾಸಿಕ ಸಂಗತಿಗಳ ಮೇಲೆ ಗಮನವನ್ನು ಕೇಂದ್ರೀಕರಿಸಿದೆ. ದಯವಿಟ್ಟು ಚಿತ್ರವನ್ನು ವೀಕ್ಷಿಸಿ ಮತ್ತು ನಿಮ್ಮ ಸ್ವಂತ ಅಭಿಪ್ರಾಯವನ್ನು ರೂಪಿಸಿಕೊಳ್ಳಿ ಎಂದು ನಾವು ವಿನಂತಿಸಿಕೊಳ್ಳುತ್ತೇವೆ” ಎಂದು ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ.ಹೇಳಿಕೆಯಲ್ಲಿ ತಿಳಿಸಿದೆ.

ಎಕ್ಸ್ ನಲ್ಲಿ ತನ್ನ ಫಾಲೋಅಪ್ ಸಂದೇಶದಲ್ಲಿ ಪರೇಶ್ ರಾವಲ್ ಅವರೂ ಚಿತ್ರ ನಿರ್ಮಾಪಕರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ ಹಾಗೂ ಚಿತ್ರವು ಯಾವುದೇ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿಲ್ಲ ಮತ್ತು ಐತಿಹಾಸಿಕ ಅಂಶಗಳನ್ನು ಆಧರಿಸಿದೆ ಎಂಬ ನಿರ್ಮಾಪಕರ ನಿಲುವನ್ನು ಪುನರುಚ್ಚರಿಸಿದ್ದಾರೆ.

ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ. ಮತ್ತು ಸಿಎ ಸುರೇಶ್ ಝಾ ನಿರ್ಮಿಸಿರುವ ‘ದಿ ತಾಜ್ ಸ್ಟೋರಿ’ಯನ್ನು ತುಷಾರ್ ಅಮರೀಶ್ ಗೋಯಲ್ ಬರೆದು ನಿರ್ದೇಶಿಸಿದ್ದಾರೆ. ಚಿತ್ರವು ಅ.31ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...