Homeಮುಖಪುಟಪರೇಶ್ ರಾವಲ್‌ರ 'ದಿ ತಾಜ್ ಸ್ಟೋರಿ' ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

- Advertisement -
- Advertisement -

ನಟ ಪರೇಶ್ ರಾವಲ್ ಅವರ ಮುಂದಿನ ಚಿತ್ರ ‘ದಿ ತಾಜ್ ಸ್ಟೋರಿ’ಯ ಮೋಷನ್ ಪೋಸ್ಟರ್ ವಿವಾದದ ಕಿಡಿ ಹೊತ್ತಿಸಿದೆ. ತಾಜ್‌ ಮಹಲ್‌ನ ಗುಮ್ಮಟ ತೆಗೆಯುತ್ತಿರುವಂತೆ ಹಾಗೂ ಅಲ್ಲಿಂದ ಶಿವನ ಪ್ರತಿಮೆ ಹೊರಹೊಮ್ಮುತ್ತಿರುವಂತೆ ಪೋಸ್ಟರ್‌ನಲ್ಲಿ ತೋರಿಸಲಾಗಿದೆ.

ಪರೇಶ್ ರಾವಲ್ ಸೋಮವಾರ (ಸೆ.29) ಸಾಮಾಜಿಕ ಜಾಲತಾಣಗಳಲ್ಲಿ ಮೋಷನ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಐದು ದಿನಗಳ ಹಿಂದೆ ಇದೇ ರೀತಿಯ ಮತ್ತೊಂದು ಮೋಷನ್ ಪೋಸ್ಟರ್ ಹಂಚಿಕೊಂಡಿದ್ದರು. ಅದರಲ್ಲಿ ತಾಜ್‌ಮಹಲನ್ನು ಕಟಕಟೆಯಲ್ಲಿ ನಿಲ್ಲಿಸಿ ‘ತಾಜ್ ಮಹಲ್ ಅನ್ನು ಷಜಹಾನ್ ಕಟ್ಟಿಸಿದ್ರಾ?’ ಎಂದು ಪ್ರಶ್ನಿಸಲಾಗಿದೆ.

‘ದಿ ತಾಜ್ ಸ್ಟೋರಿ’ ಮತ್ತೊಂದು ಪ್ರೊಪಗಂಡ ಚಿತ್ರವೇ? ಎಂಬ ಪ್ರಶ್ನೆ ಮೂಡಿದೆ. ಚಿತ್ರದ ಪೋಸ್ಟರ್‌ಗಳು ಅದನ್ನು ಪುಷ್ಠೀಕರಿಸುತ್ತಿವೆ.

ಕೆಲ ವರ್ಷಗಳಿಂದ ಸಂಘಪರಿವಾರ, ಹಿಂದುತ್ವವಾದಿಗಳು ತಾಜ್‌ ಮಹಲ್‌ ಅನ್ನು ‘ತೇಜೋಮಹಲ್’ ಶಿವಮಂದಿರ ಎಂದು ಪ್ರತಿಪಾದಿಸಿಕೊಂಡು ಬರುತ್ತಿದ್ದಾರೆ. ಮಂದಿರ ಕೆಡವಿ ತಾಜ್‌ ಮಹಲ್ ನಿರ್ಮಿಸಲಾಗಿದೆ ಎಂಬ ಎಂದಿನ ವಾದವನ್ನು ಮುಂದಿಡುತ್ತಿದ್ದಾರೆ. ಆದರೆ, ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ, ಪಾರಂಪರಿಕ ತಾಣ ತಾಜ್‌ಮಹಲ್‌ ಮೇಲಿನ ಈ ಆರೋಪಗಳು ಇದುವರೆಗೆ ರುಜುವಾತಾಗಿಲ್ಲ. ತಾಜ್‌ ಮಹಲ್ ಸಂರಕ್ಷಿತ ಸ್ಮಾರಕವಾಗಿದೆ.

ಇದೀಗ ‘ದಿ ತಾಜ್‌ ಸ್ಟೋರಿ’ ಚಿತ್ರ ಸಂಘ ಪರಿವಾರದ ಪ್ರೊಪಗಂಡವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಕಳೆದ ಕೆಲ ವರ್ಷಗಳಿಂದ ‘ದಿ ಕಾಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ದಿ ಬೆಂಗಾಲ್ ಫೈಲ್ಸ್‌’ನಂತಹ ಪ್ರೊಪಗಂಡ ಚಿತ್ರಗಳು ದೇಶದಲ್ಲಿ ಬಂದಿವೆ. ಅವುಗಳ ಪಟ್ಟಿಗೆ ‘ದಿ ತಾಜ್ ಸ್ಟೋರಿ’ ಸೇರ್ಪಡೆಯಾಗುವ ಲಕ್ಷಣ ಕಾಣುತ್ತಿದೆ.

ಪೋಸ್ಟರ್ ವಿವಾದದ ಸ್ವರೂಪರ ಪಡೆಯುತ್ತಿದ್ದಂತೆ “ಚಿತ್ರವು ಯಾವುದೇ ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿಲ್ಲ ಅಥವಾ ತಾಜ್‌ಮಹಲ್‌ನ ಒಳಗೆ ಶಿವ ದೇವಾಲಯವಿದೆ ಎಂದು ಅದು ಹೇಳಿಕೊಳ್ಳುವುದಿಲ್ಲ. ಅದು ಕೇವಲ ಐತಿಹಾಸಿಕ ಸಂಗತಿಗಳ ಮೇಲೆ ಗಮನವನ್ನು ಕೇಂದ್ರೀಕರಿಸಿದೆ. ದಯವಿಟ್ಟು ಚಿತ್ರವನ್ನು ವೀಕ್ಷಿಸಿ ಮತ್ತು ನಿಮ್ಮ ಸ್ವಂತ ಅಭಿಪ್ರಾಯವನ್ನು ರೂಪಿಸಿಕೊಳ್ಳಿ ಎಂದು ನಾವು ವಿನಂತಿಸಿಕೊಳ್ಳುತ್ತೇವೆ” ಎಂದು ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ.ಹೇಳಿಕೆಯಲ್ಲಿ ತಿಳಿಸಿದೆ.

ಎಕ್ಸ್ ನಲ್ಲಿ ತನ್ನ ಫಾಲೋಅಪ್ ಸಂದೇಶದಲ್ಲಿ ಪರೇಶ್ ರಾವಲ್ ಅವರೂ ಚಿತ್ರ ನಿರ್ಮಾಪಕರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ ಹಾಗೂ ಚಿತ್ರವು ಯಾವುದೇ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿಲ್ಲ ಮತ್ತು ಐತಿಹಾಸಿಕ ಅಂಶಗಳನ್ನು ಆಧರಿಸಿದೆ ಎಂಬ ನಿರ್ಮಾಪಕರ ನಿಲುವನ್ನು ಪುನರುಚ್ಚರಿಸಿದ್ದಾರೆ.

ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ. ಮತ್ತು ಸಿಎ ಸುರೇಶ್ ಝಾ ನಿರ್ಮಿಸಿರುವ ‘ದಿ ತಾಜ್ ಸ್ಟೋರಿ’ಯನ್ನು ತುಷಾರ್ ಅಮರೀಶ್ ಗೋಯಲ್ ಬರೆದು ನಿರ್ದೇಶಿಸಿದ್ದಾರೆ. ಚಿತ್ರವು ಅ.31ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...