Homeಮುಖಪುಟಪರೇಶ್ ರಾವಲ್‌ರ 'ದಿ ತಾಜ್ ಸ್ಟೋರಿ' ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

- Advertisement -
- Advertisement -

ನಟ ಪರೇಶ್ ರಾವಲ್ ಅವರ ಮುಂದಿನ ಚಿತ್ರ ‘ದಿ ತಾಜ್ ಸ್ಟೋರಿ’ಯ ಮೋಷನ್ ಪೋಸ್ಟರ್ ವಿವಾದದ ಕಿಡಿ ಹೊತ್ತಿಸಿದೆ. ತಾಜ್‌ ಮಹಲ್‌ನ ಗುಮ್ಮಟ ತೆಗೆಯುತ್ತಿರುವಂತೆ ಹಾಗೂ ಅಲ್ಲಿಂದ ಶಿವನ ಪ್ರತಿಮೆ ಹೊರಹೊಮ್ಮುತ್ತಿರುವಂತೆ ಪೋಸ್ಟರ್‌ನಲ್ಲಿ ತೋರಿಸಲಾಗಿದೆ.

ಪರೇಶ್ ರಾವಲ್ ಸೋಮವಾರ (ಸೆ.29) ಸಾಮಾಜಿಕ ಜಾಲತಾಣಗಳಲ್ಲಿ ಮೋಷನ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಐದು ದಿನಗಳ ಹಿಂದೆ ಇದೇ ರೀತಿಯ ಮತ್ತೊಂದು ಮೋಷನ್ ಪೋಸ್ಟರ್ ಹಂಚಿಕೊಂಡಿದ್ದರು. ಅದರಲ್ಲಿ ತಾಜ್‌ಮಹಲನ್ನು ಕಟಕಟೆಯಲ್ಲಿ ನಿಲ್ಲಿಸಿ ‘ತಾಜ್ ಮಹಲ್ ಅನ್ನು ಷಜಹಾನ್ ಕಟ್ಟಿಸಿದ್ರಾ?’ ಎಂದು ಪ್ರಶ್ನಿಸಲಾಗಿದೆ.

‘ದಿ ತಾಜ್ ಸ್ಟೋರಿ’ ಮತ್ತೊಂದು ಪ್ರೊಪಗಂಡ ಚಿತ್ರವೇ? ಎಂಬ ಪ್ರಶ್ನೆ ಮೂಡಿದೆ. ಚಿತ್ರದ ಪೋಸ್ಟರ್‌ಗಳು ಅದನ್ನು ಪುಷ್ಠೀಕರಿಸುತ್ತಿವೆ.

ಕೆಲ ವರ್ಷಗಳಿಂದ ಸಂಘಪರಿವಾರ, ಹಿಂದುತ್ವವಾದಿಗಳು ತಾಜ್‌ ಮಹಲ್‌ ಅನ್ನು ‘ತೇಜೋಮಹಲ್’ ಶಿವಮಂದಿರ ಎಂದು ಪ್ರತಿಪಾದಿಸಿಕೊಂಡು ಬರುತ್ತಿದ್ದಾರೆ. ಮಂದಿರ ಕೆಡವಿ ತಾಜ್‌ ಮಹಲ್ ನಿರ್ಮಿಸಲಾಗಿದೆ ಎಂಬ ಎಂದಿನ ವಾದವನ್ನು ಮುಂದಿಡುತ್ತಿದ್ದಾರೆ. ಆದರೆ, ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ, ಪಾರಂಪರಿಕ ತಾಣ ತಾಜ್‌ಮಹಲ್‌ ಮೇಲಿನ ಈ ಆರೋಪಗಳು ಇದುವರೆಗೆ ರುಜುವಾತಾಗಿಲ್ಲ. ತಾಜ್‌ ಮಹಲ್ ಸಂರಕ್ಷಿತ ಸ್ಮಾರಕವಾಗಿದೆ.

ಇದೀಗ ‘ದಿ ತಾಜ್‌ ಸ್ಟೋರಿ’ ಚಿತ್ರ ಸಂಘ ಪರಿವಾರದ ಪ್ರೊಪಗಂಡವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಕಳೆದ ಕೆಲ ವರ್ಷಗಳಿಂದ ‘ದಿ ಕಾಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ದಿ ಬೆಂಗಾಲ್ ಫೈಲ್ಸ್‌’ನಂತಹ ಪ್ರೊಪಗಂಡ ಚಿತ್ರಗಳು ದೇಶದಲ್ಲಿ ಬಂದಿವೆ. ಅವುಗಳ ಪಟ್ಟಿಗೆ ‘ದಿ ತಾಜ್ ಸ್ಟೋರಿ’ ಸೇರ್ಪಡೆಯಾಗುವ ಲಕ್ಷಣ ಕಾಣುತ್ತಿದೆ.

ಪೋಸ್ಟರ್ ವಿವಾದದ ಸ್ವರೂಪರ ಪಡೆಯುತ್ತಿದ್ದಂತೆ “ಚಿತ್ರವು ಯಾವುದೇ ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿಲ್ಲ ಅಥವಾ ತಾಜ್‌ಮಹಲ್‌ನ ಒಳಗೆ ಶಿವ ದೇವಾಲಯವಿದೆ ಎಂದು ಅದು ಹೇಳಿಕೊಳ್ಳುವುದಿಲ್ಲ. ಅದು ಕೇವಲ ಐತಿಹಾಸಿಕ ಸಂಗತಿಗಳ ಮೇಲೆ ಗಮನವನ್ನು ಕೇಂದ್ರೀಕರಿಸಿದೆ. ದಯವಿಟ್ಟು ಚಿತ್ರವನ್ನು ವೀಕ್ಷಿಸಿ ಮತ್ತು ನಿಮ್ಮ ಸ್ವಂತ ಅಭಿಪ್ರಾಯವನ್ನು ರೂಪಿಸಿಕೊಳ್ಳಿ ಎಂದು ನಾವು ವಿನಂತಿಸಿಕೊಳ್ಳುತ್ತೇವೆ” ಎಂದು ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ.ಹೇಳಿಕೆಯಲ್ಲಿ ತಿಳಿಸಿದೆ.

ಎಕ್ಸ್ ನಲ್ಲಿ ತನ್ನ ಫಾಲೋಅಪ್ ಸಂದೇಶದಲ್ಲಿ ಪರೇಶ್ ರಾವಲ್ ಅವರೂ ಚಿತ್ರ ನಿರ್ಮಾಪಕರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ ಹಾಗೂ ಚಿತ್ರವು ಯಾವುದೇ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿಲ್ಲ ಮತ್ತು ಐತಿಹಾಸಿಕ ಅಂಶಗಳನ್ನು ಆಧರಿಸಿದೆ ಎಂಬ ನಿರ್ಮಾಪಕರ ನಿಲುವನ್ನು ಪುನರುಚ್ಚರಿಸಿದ್ದಾರೆ.

ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ. ಮತ್ತು ಸಿಎ ಸುರೇಶ್ ಝಾ ನಿರ್ಮಿಸಿರುವ ‘ದಿ ತಾಜ್ ಸ್ಟೋರಿ’ಯನ್ನು ತುಷಾರ್ ಅಮರೀಶ್ ಗೋಯಲ್ ಬರೆದು ನಿರ್ದೇಶಿಸಿದ್ದಾರೆ. ಚಿತ್ರವು ಅ.31ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...