Homeಮುಖಪುಟಪರೇಶ್ ರಾವಲ್‌ರ 'ದಿ ತಾಜ್ ಸ್ಟೋರಿ' ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

- Advertisement -
- Advertisement -

ನಟ ಪರೇಶ್ ರಾವಲ್ ಅವರ ಮುಂದಿನ ಚಿತ್ರ ‘ದಿ ತಾಜ್ ಸ್ಟೋರಿ’ಯ ಮೋಷನ್ ಪೋಸ್ಟರ್ ವಿವಾದದ ಕಿಡಿ ಹೊತ್ತಿಸಿದೆ. ತಾಜ್‌ ಮಹಲ್‌ನ ಗುಮ್ಮಟ ತೆಗೆಯುತ್ತಿರುವಂತೆ ಹಾಗೂ ಅಲ್ಲಿಂದ ಶಿವನ ಪ್ರತಿಮೆ ಹೊರಹೊಮ್ಮುತ್ತಿರುವಂತೆ ಪೋಸ್ಟರ್‌ನಲ್ಲಿ ತೋರಿಸಲಾಗಿದೆ.

ಪರೇಶ್ ರಾವಲ್ ಸೋಮವಾರ (ಸೆ.29) ಸಾಮಾಜಿಕ ಜಾಲತಾಣಗಳಲ್ಲಿ ಮೋಷನ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಐದು ದಿನಗಳ ಹಿಂದೆ ಇದೇ ರೀತಿಯ ಮತ್ತೊಂದು ಮೋಷನ್ ಪೋಸ್ಟರ್ ಹಂಚಿಕೊಂಡಿದ್ದರು. ಅದರಲ್ಲಿ ತಾಜ್‌ಮಹಲನ್ನು ಕಟಕಟೆಯಲ್ಲಿ ನಿಲ್ಲಿಸಿ ‘ತಾಜ್ ಮಹಲ್ ಅನ್ನು ಷಜಹಾನ್ ಕಟ್ಟಿಸಿದ್ರಾ?’ ಎಂದು ಪ್ರಶ್ನಿಸಲಾಗಿದೆ.

‘ದಿ ತಾಜ್ ಸ್ಟೋರಿ’ ಮತ್ತೊಂದು ಪ್ರೊಪಗಂಡ ಚಿತ್ರವೇ? ಎಂಬ ಪ್ರಶ್ನೆ ಮೂಡಿದೆ. ಚಿತ್ರದ ಪೋಸ್ಟರ್‌ಗಳು ಅದನ್ನು ಪುಷ್ಠೀಕರಿಸುತ್ತಿವೆ.

ಕೆಲ ವರ್ಷಗಳಿಂದ ಸಂಘಪರಿವಾರ, ಹಿಂದುತ್ವವಾದಿಗಳು ತಾಜ್‌ ಮಹಲ್‌ ಅನ್ನು ‘ತೇಜೋಮಹಲ್’ ಶಿವಮಂದಿರ ಎಂದು ಪ್ರತಿಪಾದಿಸಿಕೊಂಡು ಬರುತ್ತಿದ್ದಾರೆ. ಮಂದಿರ ಕೆಡವಿ ತಾಜ್‌ ಮಹಲ್ ನಿರ್ಮಿಸಲಾಗಿದೆ ಎಂಬ ಎಂದಿನ ವಾದವನ್ನು ಮುಂದಿಡುತ್ತಿದ್ದಾರೆ. ಆದರೆ, ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ, ಪಾರಂಪರಿಕ ತಾಣ ತಾಜ್‌ಮಹಲ್‌ ಮೇಲಿನ ಈ ಆರೋಪಗಳು ಇದುವರೆಗೆ ರುಜುವಾತಾಗಿಲ್ಲ. ತಾಜ್‌ ಮಹಲ್ ಸಂರಕ್ಷಿತ ಸ್ಮಾರಕವಾಗಿದೆ.

ಇದೀಗ ‘ದಿ ತಾಜ್‌ ಸ್ಟೋರಿ’ ಚಿತ್ರ ಸಂಘ ಪರಿವಾರದ ಪ್ರೊಪಗಂಡವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಕಳೆದ ಕೆಲ ವರ್ಷಗಳಿಂದ ‘ದಿ ಕಾಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ದಿ ಬೆಂಗಾಲ್ ಫೈಲ್ಸ್‌’ನಂತಹ ಪ್ರೊಪಗಂಡ ಚಿತ್ರಗಳು ದೇಶದಲ್ಲಿ ಬಂದಿವೆ. ಅವುಗಳ ಪಟ್ಟಿಗೆ ‘ದಿ ತಾಜ್ ಸ್ಟೋರಿ’ ಸೇರ್ಪಡೆಯಾಗುವ ಲಕ್ಷಣ ಕಾಣುತ್ತಿದೆ.

ಪೋಸ್ಟರ್ ವಿವಾದದ ಸ್ವರೂಪರ ಪಡೆಯುತ್ತಿದ್ದಂತೆ “ಚಿತ್ರವು ಯಾವುದೇ ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿಲ್ಲ ಅಥವಾ ತಾಜ್‌ಮಹಲ್‌ನ ಒಳಗೆ ಶಿವ ದೇವಾಲಯವಿದೆ ಎಂದು ಅದು ಹೇಳಿಕೊಳ್ಳುವುದಿಲ್ಲ. ಅದು ಕೇವಲ ಐತಿಹಾಸಿಕ ಸಂಗತಿಗಳ ಮೇಲೆ ಗಮನವನ್ನು ಕೇಂದ್ರೀಕರಿಸಿದೆ. ದಯವಿಟ್ಟು ಚಿತ್ರವನ್ನು ವೀಕ್ಷಿಸಿ ಮತ್ತು ನಿಮ್ಮ ಸ್ವಂತ ಅಭಿಪ್ರಾಯವನ್ನು ರೂಪಿಸಿಕೊಳ್ಳಿ ಎಂದು ನಾವು ವಿನಂತಿಸಿಕೊಳ್ಳುತ್ತೇವೆ” ಎಂದು ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ.ಹೇಳಿಕೆಯಲ್ಲಿ ತಿಳಿಸಿದೆ.

ಎಕ್ಸ್ ನಲ್ಲಿ ತನ್ನ ಫಾಲೋಅಪ್ ಸಂದೇಶದಲ್ಲಿ ಪರೇಶ್ ರಾವಲ್ ಅವರೂ ಚಿತ್ರ ನಿರ್ಮಾಪಕರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ ಹಾಗೂ ಚಿತ್ರವು ಯಾವುದೇ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿಲ್ಲ ಮತ್ತು ಐತಿಹಾಸಿಕ ಅಂಶಗಳನ್ನು ಆಧರಿಸಿದೆ ಎಂಬ ನಿರ್ಮಾಪಕರ ನಿಲುವನ್ನು ಪುನರುಚ್ಚರಿಸಿದ್ದಾರೆ.

ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ. ಮತ್ತು ಸಿಎ ಸುರೇಶ್ ಝಾ ನಿರ್ಮಿಸಿರುವ ‘ದಿ ತಾಜ್ ಸ್ಟೋರಿ’ಯನ್ನು ತುಷಾರ್ ಅಮರೀಶ್ ಗೋಯಲ್ ಬರೆದು ನಿರ್ದೇಶಿಸಿದ್ದಾರೆ. ಚಿತ್ರವು ಅ.31ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...