Homeಮುಖಪುಟಪರೇಶ್ ರಾವಲ್‌ರ 'ದಿ ತಾಜ್ ಸ್ಟೋರಿ' ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

- Advertisement -
- Advertisement -

ನಟ ಪರೇಶ್ ರಾವಲ್ ಅವರ ಮುಂದಿನ ಚಿತ್ರ ‘ದಿ ತಾಜ್ ಸ್ಟೋರಿ’ಯ ಮೋಷನ್ ಪೋಸ್ಟರ್ ವಿವಾದದ ಕಿಡಿ ಹೊತ್ತಿಸಿದೆ. ತಾಜ್‌ ಮಹಲ್‌ನ ಗುಮ್ಮಟ ತೆಗೆಯುತ್ತಿರುವಂತೆ ಹಾಗೂ ಅಲ್ಲಿಂದ ಶಿವನ ಪ್ರತಿಮೆ ಹೊರಹೊಮ್ಮುತ್ತಿರುವಂತೆ ಪೋಸ್ಟರ್‌ನಲ್ಲಿ ತೋರಿಸಲಾಗಿದೆ.

ಪರೇಶ್ ರಾವಲ್ ಸೋಮವಾರ (ಸೆ.29) ಸಾಮಾಜಿಕ ಜಾಲತಾಣಗಳಲ್ಲಿ ಮೋಷನ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಐದು ದಿನಗಳ ಹಿಂದೆ ಇದೇ ರೀತಿಯ ಮತ್ತೊಂದು ಮೋಷನ್ ಪೋಸ್ಟರ್ ಹಂಚಿಕೊಂಡಿದ್ದರು. ಅದರಲ್ಲಿ ತಾಜ್‌ಮಹಲನ್ನು ಕಟಕಟೆಯಲ್ಲಿ ನಿಲ್ಲಿಸಿ ‘ತಾಜ್ ಮಹಲ್ ಅನ್ನು ಷಜಹಾನ್ ಕಟ್ಟಿಸಿದ್ರಾ?’ ಎಂದು ಪ್ರಶ್ನಿಸಲಾಗಿದೆ.

‘ದಿ ತಾಜ್ ಸ್ಟೋರಿ’ ಮತ್ತೊಂದು ಪ್ರೊಪಗಂಡ ಚಿತ್ರವೇ? ಎಂಬ ಪ್ರಶ್ನೆ ಮೂಡಿದೆ. ಚಿತ್ರದ ಪೋಸ್ಟರ್‌ಗಳು ಅದನ್ನು ಪುಷ್ಠೀಕರಿಸುತ್ತಿವೆ.

ಕೆಲ ವರ್ಷಗಳಿಂದ ಸಂಘಪರಿವಾರ, ಹಿಂದುತ್ವವಾದಿಗಳು ತಾಜ್‌ ಮಹಲ್‌ ಅನ್ನು ‘ತೇಜೋಮಹಲ್’ ಶಿವಮಂದಿರ ಎಂದು ಪ್ರತಿಪಾದಿಸಿಕೊಂಡು ಬರುತ್ತಿದ್ದಾರೆ. ಮಂದಿರ ಕೆಡವಿ ತಾಜ್‌ ಮಹಲ್ ನಿರ್ಮಿಸಲಾಗಿದೆ ಎಂಬ ಎಂದಿನ ವಾದವನ್ನು ಮುಂದಿಡುತ್ತಿದ್ದಾರೆ. ಆದರೆ, ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ, ಪಾರಂಪರಿಕ ತಾಣ ತಾಜ್‌ಮಹಲ್‌ ಮೇಲಿನ ಈ ಆರೋಪಗಳು ಇದುವರೆಗೆ ರುಜುವಾತಾಗಿಲ್ಲ. ತಾಜ್‌ ಮಹಲ್ ಸಂರಕ್ಷಿತ ಸ್ಮಾರಕವಾಗಿದೆ.

ಇದೀಗ ‘ದಿ ತಾಜ್‌ ಸ್ಟೋರಿ’ ಚಿತ್ರ ಸಂಘ ಪರಿವಾರದ ಪ್ರೊಪಗಂಡವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಕಳೆದ ಕೆಲ ವರ್ಷಗಳಿಂದ ‘ದಿ ಕಾಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ದಿ ಬೆಂಗಾಲ್ ಫೈಲ್ಸ್‌’ನಂತಹ ಪ್ರೊಪಗಂಡ ಚಿತ್ರಗಳು ದೇಶದಲ್ಲಿ ಬಂದಿವೆ. ಅವುಗಳ ಪಟ್ಟಿಗೆ ‘ದಿ ತಾಜ್ ಸ್ಟೋರಿ’ ಸೇರ್ಪಡೆಯಾಗುವ ಲಕ್ಷಣ ಕಾಣುತ್ತಿದೆ.

ಪೋಸ್ಟರ್ ವಿವಾದದ ಸ್ವರೂಪರ ಪಡೆಯುತ್ತಿದ್ದಂತೆ “ಚಿತ್ರವು ಯಾವುದೇ ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿಲ್ಲ ಅಥವಾ ತಾಜ್‌ಮಹಲ್‌ನ ಒಳಗೆ ಶಿವ ದೇವಾಲಯವಿದೆ ಎಂದು ಅದು ಹೇಳಿಕೊಳ್ಳುವುದಿಲ್ಲ. ಅದು ಕೇವಲ ಐತಿಹಾಸಿಕ ಸಂಗತಿಗಳ ಮೇಲೆ ಗಮನವನ್ನು ಕೇಂದ್ರೀಕರಿಸಿದೆ. ದಯವಿಟ್ಟು ಚಿತ್ರವನ್ನು ವೀಕ್ಷಿಸಿ ಮತ್ತು ನಿಮ್ಮ ಸ್ವಂತ ಅಭಿಪ್ರಾಯವನ್ನು ರೂಪಿಸಿಕೊಳ್ಳಿ ಎಂದು ನಾವು ವಿನಂತಿಸಿಕೊಳ್ಳುತ್ತೇವೆ” ಎಂದು ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ.ಹೇಳಿಕೆಯಲ್ಲಿ ತಿಳಿಸಿದೆ.

ಎಕ್ಸ್ ನಲ್ಲಿ ತನ್ನ ಫಾಲೋಅಪ್ ಸಂದೇಶದಲ್ಲಿ ಪರೇಶ್ ರಾವಲ್ ಅವರೂ ಚಿತ್ರ ನಿರ್ಮಾಪಕರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ ಹಾಗೂ ಚಿತ್ರವು ಯಾವುದೇ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿಲ್ಲ ಮತ್ತು ಐತಿಹಾಸಿಕ ಅಂಶಗಳನ್ನು ಆಧರಿಸಿದೆ ಎಂಬ ನಿರ್ಮಾಪಕರ ನಿಲುವನ್ನು ಪುನರುಚ್ಚರಿಸಿದ್ದಾರೆ.

ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ. ಮತ್ತು ಸಿಎ ಸುರೇಶ್ ಝಾ ನಿರ್ಮಿಸಿರುವ ‘ದಿ ತಾಜ್ ಸ್ಟೋರಿ’ಯನ್ನು ತುಷಾರ್ ಅಮರೀಶ್ ಗೋಯಲ್ ಬರೆದು ನಿರ್ದೇಶಿಸಿದ್ದಾರೆ. ಚಿತ್ರವು ಅ.31ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...