Homeಮುಖಪುಟಪರೇಶ್ ರಾವಲ್‌ರ 'ದಿ ತಾಜ್ ಸ್ಟೋರಿ' ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

- Advertisement -
- Advertisement -

ನಟ ಪರೇಶ್ ರಾವಲ್ ಅವರ ಮುಂದಿನ ಚಿತ್ರ ‘ದಿ ತಾಜ್ ಸ್ಟೋರಿ’ಯ ಮೋಷನ್ ಪೋಸ್ಟರ್ ವಿವಾದದ ಕಿಡಿ ಹೊತ್ತಿಸಿದೆ. ತಾಜ್‌ ಮಹಲ್‌ನ ಗುಮ್ಮಟ ತೆಗೆಯುತ್ತಿರುವಂತೆ ಹಾಗೂ ಅಲ್ಲಿಂದ ಶಿವನ ಪ್ರತಿಮೆ ಹೊರಹೊಮ್ಮುತ್ತಿರುವಂತೆ ಪೋಸ್ಟರ್‌ನಲ್ಲಿ ತೋರಿಸಲಾಗಿದೆ.

ಪರೇಶ್ ರಾವಲ್ ಸೋಮವಾರ (ಸೆ.29) ಸಾಮಾಜಿಕ ಜಾಲತಾಣಗಳಲ್ಲಿ ಮೋಷನ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಐದು ದಿನಗಳ ಹಿಂದೆ ಇದೇ ರೀತಿಯ ಮತ್ತೊಂದು ಮೋಷನ್ ಪೋಸ್ಟರ್ ಹಂಚಿಕೊಂಡಿದ್ದರು. ಅದರಲ್ಲಿ ತಾಜ್‌ಮಹಲನ್ನು ಕಟಕಟೆಯಲ್ಲಿ ನಿಲ್ಲಿಸಿ ‘ತಾಜ್ ಮಹಲ್ ಅನ್ನು ಷಜಹಾನ್ ಕಟ್ಟಿಸಿದ್ರಾ?’ ಎಂದು ಪ್ರಶ್ನಿಸಲಾಗಿದೆ.

‘ದಿ ತಾಜ್ ಸ್ಟೋರಿ’ ಮತ್ತೊಂದು ಪ್ರೊಪಗಂಡ ಚಿತ್ರವೇ? ಎಂಬ ಪ್ರಶ್ನೆ ಮೂಡಿದೆ. ಚಿತ್ರದ ಪೋಸ್ಟರ್‌ಗಳು ಅದನ್ನು ಪುಷ್ಠೀಕರಿಸುತ್ತಿವೆ.

ಕೆಲ ವರ್ಷಗಳಿಂದ ಸಂಘಪರಿವಾರ, ಹಿಂದುತ್ವವಾದಿಗಳು ತಾಜ್‌ ಮಹಲ್‌ ಅನ್ನು ‘ತೇಜೋಮಹಲ್’ ಶಿವಮಂದಿರ ಎಂದು ಪ್ರತಿಪಾದಿಸಿಕೊಂಡು ಬರುತ್ತಿದ್ದಾರೆ. ಮಂದಿರ ಕೆಡವಿ ತಾಜ್‌ ಮಹಲ್ ನಿರ್ಮಿಸಲಾಗಿದೆ ಎಂಬ ಎಂದಿನ ವಾದವನ್ನು ಮುಂದಿಡುತ್ತಿದ್ದಾರೆ. ಆದರೆ, ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ, ಪಾರಂಪರಿಕ ತಾಣ ತಾಜ್‌ಮಹಲ್‌ ಮೇಲಿನ ಈ ಆರೋಪಗಳು ಇದುವರೆಗೆ ರುಜುವಾತಾಗಿಲ್ಲ. ತಾಜ್‌ ಮಹಲ್ ಸಂರಕ್ಷಿತ ಸ್ಮಾರಕವಾಗಿದೆ.

ಇದೀಗ ‘ದಿ ತಾಜ್‌ ಸ್ಟೋರಿ’ ಚಿತ್ರ ಸಂಘ ಪರಿವಾರದ ಪ್ರೊಪಗಂಡವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಕಳೆದ ಕೆಲ ವರ್ಷಗಳಿಂದ ‘ದಿ ಕಾಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ದಿ ಬೆಂಗಾಲ್ ಫೈಲ್ಸ್‌’ನಂತಹ ಪ್ರೊಪಗಂಡ ಚಿತ್ರಗಳು ದೇಶದಲ್ಲಿ ಬಂದಿವೆ. ಅವುಗಳ ಪಟ್ಟಿಗೆ ‘ದಿ ತಾಜ್ ಸ್ಟೋರಿ’ ಸೇರ್ಪಡೆಯಾಗುವ ಲಕ್ಷಣ ಕಾಣುತ್ತಿದೆ.

ಪೋಸ್ಟರ್ ವಿವಾದದ ಸ್ವರೂಪರ ಪಡೆಯುತ್ತಿದ್ದಂತೆ “ಚಿತ್ರವು ಯಾವುದೇ ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿಲ್ಲ ಅಥವಾ ತಾಜ್‌ಮಹಲ್‌ನ ಒಳಗೆ ಶಿವ ದೇವಾಲಯವಿದೆ ಎಂದು ಅದು ಹೇಳಿಕೊಳ್ಳುವುದಿಲ್ಲ. ಅದು ಕೇವಲ ಐತಿಹಾಸಿಕ ಸಂಗತಿಗಳ ಮೇಲೆ ಗಮನವನ್ನು ಕೇಂದ್ರೀಕರಿಸಿದೆ. ದಯವಿಟ್ಟು ಚಿತ್ರವನ್ನು ವೀಕ್ಷಿಸಿ ಮತ್ತು ನಿಮ್ಮ ಸ್ವಂತ ಅಭಿಪ್ರಾಯವನ್ನು ರೂಪಿಸಿಕೊಳ್ಳಿ ಎಂದು ನಾವು ವಿನಂತಿಸಿಕೊಳ್ಳುತ್ತೇವೆ” ಎಂದು ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ.ಹೇಳಿಕೆಯಲ್ಲಿ ತಿಳಿಸಿದೆ.

ಎಕ್ಸ್ ನಲ್ಲಿ ತನ್ನ ಫಾಲೋಅಪ್ ಸಂದೇಶದಲ್ಲಿ ಪರೇಶ್ ರಾವಲ್ ಅವರೂ ಚಿತ್ರ ನಿರ್ಮಾಪಕರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ ಹಾಗೂ ಚಿತ್ರವು ಯಾವುದೇ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿಲ್ಲ ಮತ್ತು ಐತಿಹಾಸಿಕ ಅಂಶಗಳನ್ನು ಆಧರಿಸಿದೆ ಎಂಬ ನಿರ್ಮಾಪಕರ ನಿಲುವನ್ನು ಪುನರುಚ್ಚರಿಸಿದ್ದಾರೆ.

ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ. ಮತ್ತು ಸಿಎ ಸುರೇಶ್ ಝಾ ನಿರ್ಮಿಸಿರುವ ‘ದಿ ತಾಜ್ ಸ್ಟೋರಿ’ಯನ್ನು ತುಷಾರ್ ಅಮರೀಶ್ ಗೋಯಲ್ ಬರೆದು ನಿರ್ದೇಶಿಸಿದ್ದಾರೆ. ಚಿತ್ರವು ಅ.31ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...