Homeಮುಖಪುಟಪರೇಶ್ ರಾವಲ್‌ರ 'ದಿ ತಾಜ್ ಸ್ಟೋರಿ' ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

- Advertisement -
- Advertisement -

ನಟ ಪರೇಶ್ ರಾವಲ್ ಅವರ ಮುಂದಿನ ಚಿತ್ರ ‘ದಿ ತಾಜ್ ಸ್ಟೋರಿ’ಯ ಮೋಷನ್ ಪೋಸ್ಟರ್ ವಿವಾದದ ಕಿಡಿ ಹೊತ್ತಿಸಿದೆ. ತಾಜ್‌ ಮಹಲ್‌ನ ಗುಮ್ಮಟ ತೆಗೆಯುತ್ತಿರುವಂತೆ ಹಾಗೂ ಅಲ್ಲಿಂದ ಶಿವನ ಪ್ರತಿಮೆ ಹೊರಹೊಮ್ಮುತ್ತಿರುವಂತೆ ಪೋಸ್ಟರ್‌ನಲ್ಲಿ ತೋರಿಸಲಾಗಿದೆ.

ಪರೇಶ್ ರಾವಲ್ ಸೋಮವಾರ (ಸೆ.29) ಸಾಮಾಜಿಕ ಜಾಲತಾಣಗಳಲ್ಲಿ ಮೋಷನ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಐದು ದಿನಗಳ ಹಿಂದೆ ಇದೇ ರೀತಿಯ ಮತ್ತೊಂದು ಮೋಷನ್ ಪೋಸ್ಟರ್ ಹಂಚಿಕೊಂಡಿದ್ದರು. ಅದರಲ್ಲಿ ತಾಜ್‌ಮಹಲನ್ನು ಕಟಕಟೆಯಲ್ಲಿ ನಿಲ್ಲಿಸಿ ‘ತಾಜ್ ಮಹಲ್ ಅನ್ನು ಷಜಹಾನ್ ಕಟ್ಟಿಸಿದ್ರಾ?’ ಎಂದು ಪ್ರಶ್ನಿಸಲಾಗಿದೆ.

‘ದಿ ತಾಜ್ ಸ್ಟೋರಿ’ ಮತ್ತೊಂದು ಪ್ರೊಪಗಂಡ ಚಿತ್ರವೇ? ಎಂಬ ಪ್ರಶ್ನೆ ಮೂಡಿದೆ. ಚಿತ್ರದ ಪೋಸ್ಟರ್‌ಗಳು ಅದನ್ನು ಪುಷ್ಠೀಕರಿಸುತ್ತಿವೆ.

ಕೆಲ ವರ್ಷಗಳಿಂದ ಸಂಘಪರಿವಾರ, ಹಿಂದುತ್ವವಾದಿಗಳು ತಾಜ್‌ ಮಹಲ್‌ ಅನ್ನು ‘ತೇಜೋಮಹಲ್’ ಶಿವಮಂದಿರ ಎಂದು ಪ್ರತಿಪಾದಿಸಿಕೊಂಡು ಬರುತ್ತಿದ್ದಾರೆ. ಮಂದಿರ ಕೆಡವಿ ತಾಜ್‌ ಮಹಲ್ ನಿರ್ಮಿಸಲಾಗಿದೆ ಎಂಬ ಎಂದಿನ ವಾದವನ್ನು ಮುಂದಿಡುತ್ತಿದ್ದಾರೆ. ಆದರೆ, ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ, ಪಾರಂಪರಿಕ ತಾಣ ತಾಜ್‌ಮಹಲ್‌ ಮೇಲಿನ ಈ ಆರೋಪಗಳು ಇದುವರೆಗೆ ರುಜುವಾತಾಗಿಲ್ಲ. ತಾಜ್‌ ಮಹಲ್ ಸಂರಕ್ಷಿತ ಸ್ಮಾರಕವಾಗಿದೆ.

ಇದೀಗ ‘ದಿ ತಾಜ್‌ ಸ್ಟೋರಿ’ ಚಿತ್ರ ಸಂಘ ಪರಿವಾರದ ಪ್ರೊಪಗಂಡವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಕಳೆದ ಕೆಲ ವರ್ಷಗಳಿಂದ ‘ದಿ ಕಾಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ದಿ ಬೆಂಗಾಲ್ ಫೈಲ್ಸ್‌’ನಂತಹ ಪ್ರೊಪಗಂಡ ಚಿತ್ರಗಳು ದೇಶದಲ್ಲಿ ಬಂದಿವೆ. ಅವುಗಳ ಪಟ್ಟಿಗೆ ‘ದಿ ತಾಜ್ ಸ್ಟೋರಿ’ ಸೇರ್ಪಡೆಯಾಗುವ ಲಕ್ಷಣ ಕಾಣುತ್ತಿದೆ.

ಪೋಸ್ಟರ್ ವಿವಾದದ ಸ್ವರೂಪರ ಪಡೆಯುತ್ತಿದ್ದಂತೆ “ಚಿತ್ರವು ಯಾವುದೇ ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿಲ್ಲ ಅಥವಾ ತಾಜ್‌ಮಹಲ್‌ನ ಒಳಗೆ ಶಿವ ದೇವಾಲಯವಿದೆ ಎಂದು ಅದು ಹೇಳಿಕೊಳ್ಳುವುದಿಲ್ಲ. ಅದು ಕೇವಲ ಐತಿಹಾಸಿಕ ಸಂಗತಿಗಳ ಮೇಲೆ ಗಮನವನ್ನು ಕೇಂದ್ರೀಕರಿಸಿದೆ. ದಯವಿಟ್ಟು ಚಿತ್ರವನ್ನು ವೀಕ್ಷಿಸಿ ಮತ್ತು ನಿಮ್ಮ ಸ್ವಂತ ಅಭಿಪ್ರಾಯವನ್ನು ರೂಪಿಸಿಕೊಳ್ಳಿ ಎಂದು ನಾವು ವಿನಂತಿಸಿಕೊಳ್ಳುತ್ತೇವೆ” ಎಂದು ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ.ಹೇಳಿಕೆಯಲ್ಲಿ ತಿಳಿಸಿದೆ.

ಎಕ್ಸ್ ನಲ್ಲಿ ತನ್ನ ಫಾಲೋಅಪ್ ಸಂದೇಶದಲ್ಲಿ ಪರೇಶ್ ರಾವಲ್ ಅವರೂ ಚಿತ್ರ ನಿರ್ಮಾಪಕರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ ಹಾಗೂ ಚಿತ್ರವು ಯಾವುದೇ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿಲ್ಲ ಮತ್ತು ಐತಿಹಾಸಿಕ ಅಂಶಗಳನ್ನು ಆಧರಿಸಿದೆ ಎಂಬ ನಿರ್ಮಾಪಕರ ನಿಲುವನ್ನು ಪುನರುಚ್ಚರಿಸಿದ್ದಾರೆ.

ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ. ಮತ್ತು ಸಿಎ ಸುರೇಶ್ ಝಾ ನಿರ್ಮಿಸಿರುವ ‘ದಿ ತಾಜ್ ಸ್ಟೋರಿ’ಯನ್ನು ತುಷಾರ್ ಅಮರೀಶ್ ಗೋಯಲ್ ಬರೆದು ನಿರ್ದೇಶಿಸಿದ್ದಾರೆ. ಚಿತ್ರವು ಅ.31ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...