Homeಮುಖಪುಟಪರೇಶ್ ರಾವಲ್‌ರ 'ದಿ ತಾಜ್ ಸ್ಟೋರಿ' ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

- Advertisement -
- Advertisement -

ನಟ ಪರೇಶ್ ರಾವಲ್ ಅವರ ಮುಂದಿನ ಚಿತ್ರ ‘ದಿ ತಾಜ್ ಸ್ಟೋರಿ’ಯ ಮೋಷನ್ ಪೋಸ್ಟರ್ ವಿವಾದದ ಕಿಡಿ ಹೊತ್ತಿಸಿದೆ. ತಾಜ್‌ ಮಹಲ್‌ನ ಗುಮ್ಮಟ ತೆಗೆಯುತ್ತಿರುವಂತೆ ಹಾಗೂ ಅಲ್ಲಿಂದ ಶಿವನ ಪ್ರತಿಮೆ ಹೊರಹೊಮ್ಮುತ್ತಿರುವಂತೆ ಪೋಸ್ಟರ್‌ನಲ್ಲಿ ತೋರಿಸಲಾಗಿದೆ.

ಪರೇಶ್ ರಾವಲ್ ಸೋಮವಾರ (ಸೆ.29) ಸಾಮಾಜಿಕ ಜಾಲತಾಣಗಳಲ್ಲಿ ಮೋಷನ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಐದು ದಿನಗಳ ಹಿಂದೆ ಇದೇ ರೀತಿಯ ಮತ್ತೊಂದು ಮೋಷನ್ ಪೋಸ್ಟರ್ ಹಂಚಿಕೊಂಡಿದ್ದರು. ಅದರಲ್ಲಿ ತಾಜ್‌ಮಹಲನ್ನು ಕಟಕಟೆಯಲ್ಲಿ ನಿಲ್ಲಿಸಿ ‘ತಾಜ್ ಮಹಲ್ ಅನ್ನು ಷಜಹಾನ್ ಕಟ್ಟಿಸಿದ್ರಾ?’ ಎಂದು ಪ್ರಶ್ನಿಸಲಾಗಿದೆ.

‘ದಿ ತಾಜ್ ಸ್ಟೋರಿ’ ಮತ್ತೊಂದು ಪ್ರೊಪಗಂಡ ಚಿತ್ರವೇ? ಎಂಬ ಪ್ರಶ್ನೆ ಮೂಡಿದೆ. ಚಿತ್ರದ ಪೋಸ್ಟರ್‌ಗಳು ಅದನ್ನು ಪುಷ್ಠೀಕರಿಸುತ್ತಿವೆ.

ಕೆಲ ವರ್ಷಗಳಿಂದ ಸಂಘಪರಿವಾರ, ಹಿಂದುತ್ವವಾದಿಗಳು ತಾಜ್‌ ಮಹಲ್‌ ಅನ್ನು ‘ತೇಜೋಮಹಲ್’ ಶಿವಮಂದಿರ ಎಂದು ಪ್ರತಿಪಾದಿಸಿಕೊಂಡು ಬರುತ್ತಿದ್ದಾರೆ. ಮಂದಿರ ಕೆಡವಿ ತಾಜ್‌ ಮಹಲ್ ನಿರ್ಮಿಸಲಾಗಿದೆ ಎಂಬ ಎಂದಿನ ವಾದವನ್ನು ಮುಂದಿಡುತ್ತಿದ್ದಾರೆ. ಆದರೆ, ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ, ಪಾರಂಪರಿಕ ತಾಣ ತಾಜ್‌ಮಹಲ್‌ ಮೇಲಿನ ಈ ಆರೋಪಗಳು ಇದುವರೆಗೆ ರುಜುವಾತಾಗಿಲ್ಲ. ತಾಜ್‌ ಮಹಲ್ ಸಂರಕ್ಷಿತ ಸ್ಮಾರಕವಾಗಿದೆ.

ಇದೀಗ ‘ದಿ ತಾಜ್‌ ಸ್ಟೋರಿ’ ಚಿತ್ರ ಸಂಘ ಪರಿವಾರದ ಪ್ರೊಪಗಂಡವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಕಳೆದ ಕೆಲ ವರ್ಷಗಳಿಂದ ‘ದಿ ಕಾಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ದಿ ಬೆಂಗಾಲ್ ಫೈಲ್ಸ್‌’ನಂತಹ ಪ್ರೊಪಗಂಡ ಚಿತ್ರಗಳು ದೇಶದಲ್ಲಿ ಬಂದಿವೆ. ಅವುಗಳ ಪಟ್ಟಿಗೆ ‘ದಿ ತಾಜ್ ಸ್ಟೋರಿ’ ಸೇರ್ಪಡೆಯಾಗುವ ಲಕ್ಷಣ ಕಾಣುತ್ತಿದೆ.

ಪೋಸ್ಟರ್ ವಿವಾದದ ಸ್ವರೂಪರ ಪಡೆಯುತ್ತಿದ್ದಂತೆ “ಚಿತ್ರವು ಯಾವುದೇ ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿಲ್ಲ ಅಥವಾ ತಾಜ್‌ಮಹಲ್‌ನ ಒಳಗೆ ಶಿವ ದೇವಾಲಯವಿದೆ ಎಂದು ಅದು ಹೇಳಿಕೊಳ್ಳುವುದಿಲ್ಲ. ಅದು ಕೇವಲ ಐತಿಹಾಸಿಕ ಸಂಗತಿಗಳ ಮೇಲೆ ಗಮನವನ್ನು ಕೇಂದ್ರೀಕರಿಸಿದೆ. ದಯವಿಟ್ಟು ಚಿತ್ರವನ್ನು ವೀಕ್ಷಿಸಿ ಮತ್ತು ನಿಮ್ಮ ಸ್ವಂತ ಅಭಿಪ್ರಾಯವನ್ನು ರೂಪಿಸಿಕೊಳ್ಳಿ ಎಂದು ನಾವು ವಿನಂತಿಸಿಕೊಳ್ಳುತ್ತೇವೆ” ಎಂದು ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ.ಹೇಳಿಕೆಯಲ್ಲಿ ತಿಳಿಸಿದೆ.

ಎಕ್ಸ್ ನಲ್ಲಿ ತನ್ನ ಫಾಲೋಅಪ್ ಸಂದೇಶದಲ್ಲಿ ಪರೇಶ್ ರಾವಲ್ ಅವರೂ ಚಿತ್ರ ನಿರ್ಮಾಪಕರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ ಹಾಗೂ ಚಿತ್ರವು ಯಾವುದೇ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿಲ್ಲ ಮತ್ತು ಐತಿಹಾಸಿಕ ಅಂಶಗಳನ್ನು ಆಧರಿಸಿದೆ ಎಂಬ ನಿರ್ಮಾಪಕರ ನಿಲುವನ್ನು ಪುನರುಚ್ಚರಿಸಿದ್ದಾರೆ.

ಸ್ವರ್ಣಿಮ್ ಗ್ಲೋಬಲ್ ಸರ್ವಿಸಿಸ್ ಪ್ರೈ.ಲಿ. ಮತ್ತು ಸಿಎ ಸುರೇಶ್ ಝಾ ನಿರ್ಮಿಸಿರುವ ‘ದಿ ತಾಜ್ ಸ್ಟೋರಿ’ಯನ್ನು ತುಷಾರ್ ಅಮರೀಶ್ ಗೋಯಲ್ ಬರೆದು ನಿರ್ದೇಶಿಸಿದ್ದಾರೆ. ಚಿತ್ರವು ಅ.31ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು...

ದೆಹಲಿ ಗಾಳಿಯನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೆಹಲಿಯ ವಾಯು ಮಾಲಿನ್ಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ "ಗ್ಯಾಸ್ ಚೇಂಬರ್" ಗೆ ಹೋಲಿಸಿದ್ದಾರೆ. ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಮುಂದುವರಿದಿದ್ದು ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣದಲ್ಲಿ ವಾಸಿಸುವ ಅದೃಷ್ಟಶಾಲಿಗಳಾಗಿದ್ದಾರೆ...

‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ...

‘ಫಾರ್ಮ್ 7’ ಮೂಲಕ ಮುಸ್ಲಿಂ ಮತಗಳನ್ನು ಸಾಮೂಹಿಕವಾಗಿ ತೆಗೆದುಹಾಕಲು ಬಿಜೆಪಿ-ಅಧಿಕಾರಿಗಳು ಸಂಚು ರೂಪಿಸಿದ್ದಾರೆ: ಮುಸ್ಲಿಂ ಲೀಗ್ ಆರೋಪ

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಏಳು ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್ 7 ಅರ್ಜಿಗಳನ್ನು ನೀಡಿದ್ದು, "ಕಾಸರಗೋಡು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಸಹಕರಿಸಿದ ಅಧಿಕಾರಿಗಳು,...

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...