Homeಮುಖಪುಟಲಿಂಗ ಸಂವೇದನೆ ವರದಿಗಾಗಿ ಲಾಡ್ಲಿ ಮೀಡಿಯಾ ಪ್ರಶಸ್ತಿ ಗೆದ್ದ PARI ಪತ್ರಕರ್ತೆ

ಲಿಂಗ ಸಂವೇದನೆ ವರದಿಗಾಗಿ ಲಾಡ್ಲಿ ಮೀಡಿಯಾ ಪ್ರಶಸ್ತಿ ಗೆದ್ದ PARI ಪತ್ರಕರ್ತೆ

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ.

- Advertisement -
- Advertisement -

PARI ವರದಿಗಾರ್ತಿ ಜ್ಯೋತಿ ಶಿನೋಲಿ ಲಿಂಗ ಸಂವೇದನೆಗಾಗಿ ಲಾಡ್ಲಿ ಮೀಡಿಯಾ ಮತ್ತು ಜಾಹೀರಾತು ಪ್ರಶಸ್ತಿ 2020 ಅನ್ನು ಗೆದ್ದಿದ್ದಾರೆ. ಮಹಾರಾಷ್ಟ್ರದಲ್ಲಿ ಪರಿಶಿಷ್ಠ ಪಂಗಡಕ್ಕೆ ಸೇರಿದ ಪಾರ್ಧಿ ಎಂಬ ಬುಡಕಟ್ಟು ಸಮುದಾಯ ತಮ್ಮದಲ್ಲದ ತಪ್ಪಿಗೆ ಹೇಗೆ ನಿರಂತರ ಕಿರುಕುಳಕ್ಕೆ ಒಳಗಾಗುತ್ತಿದೆ ಎಂಬುದರ ಬಗ್ಗೆ No crime, unending punishment ‘ಅಪರಾಧವಿಲ್ಲದಿದ್ದರೂ, ಕೊನೆಯಿಲ್ಲದ ಶಿಕ್ಷೆ’ (ಆಗಸ್ಟ್ 10, 2018) ಎಂಬ ಅವರ ವರದಿಗೆ ಪ್ರಶಸ್ತಿ ಲಭಿಸಿದೆ.

1871 ರಲ್ಲಿ ಬ್ರಿಟಿಷರು ತಮ್ಮ ಆಳ್ವಿಕೆಯನ್ನು ಒಪ್ಪಿಕೊಳ್ಳದ ಪಾರ್ಧಿ ಬುಡಕಟ್ಟು ಜನಾಂಗದವರು ಸೇರಿ ಸುಮಾರು 200 ಇತರ ಡಿ-ನೋಟಿಫೈಡ್ ಸಮುದಾಯಗಳಿಗೆ ‘ಕ್ರಿಮಿನಲ್ ಬುಡಕಟ್ಟು’ ಎಂದು ಬ್ರಾಂಡ್ ಮಾಡಿದ್ದರು. ಸ್ವಾತಂತ್ರ್ಯಾನಂತರ 1952 ರಲ್ಲಿ ಆ ಅಪರಾಧ ಬುಡಕಟ್ಟು ಕಾಯ್ದೆಯನ್ನು ಭಾರತ ಸರ್ಕಾರ ರದ್ದುಗೊಳಿಸಿದರೂ, ಇಂದಿಗೂ ಆ ಸಮುದಾಯಗಳಿಗೆ ಕಳಂಕ, ತಾರತಮ್ಯ ಮತ್ತು ಕಿರುಕುಳ ಮುಂದುವರೆದಿದೆ. ಆ ಪಾರ್ಧಿ ಸಮುದಾಯದ ನೋವಿಗೆ ಸ್ಪಂದಿಸುತ್ತಿರುವ ಅದೇ ಸಮುದಾಯದ ಸುನೀತಾ ಬೋಸಲೆ ಎಂಬ ಮಹಿಳೆಯ ಹೋರಾಟದ ಬಗ್ಗೆ ಜ್ಯೋತಿ ಶಿನೋಲಿ ವಿಸ್ತೃತ ವರದಿ ಮಾಡಿದ್ದರು.

ಜ್ಯೋತಿ ಶಿನೋಲಿ. Photo Courtesy: Pari

ಜ್ಯೋತಿ ಶಿನೋಲಿ ಅವರು ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ಪತ್ರಿಕೆಗೆ ತಂದಿರುವ ಮೂರನೇ ಪತ್ರಿಕೋದ್ಯಮ ಪ್ರಶಸ್ತಿ ಇದಾಗಿದೆ. ಅಲ್ಲದೆ ಈ ವರ್ಷದ ಆಗಸ್ಟ್‌ನಲ್ಲಿ ಪರಿ ತಂಡಕ್ಕೆ 2020ನೇ ಸಾಲಿನ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ ಲಭಿಸಿತ್ತು. PARI ತಂಡವು “ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ಗ್ರಾಮೀಣ ಭಾರತದ ಮೇಲೆ ಸಾಂಕ್ರಾಮಿಕದ ಪ್ರಭಾವ ಸೇರಿದಂತೆ ಅವರ ವ್ಯಾಪಕ ಕ್ಷೇತ್ರ ವರದಿಗಳಿಗಾಗಿ” ಪ್ರಶಸ್ತಿಯನ್ನು ಸ್ವೀಕರಿಸಿತ್ತು.

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ. “ಪರಿ ಜೀವಂತ ಜರ್ನಲ್ ಮತ್ತು ಆರ್ಕೈವ್ ಆಗಿದೆ” ಎಂಬ ಹೆಸರು ಗಳಿಸಿದೆ.


ಇದನ್ನೂ ಓದಿ: ಪಿ ಸಾಯಿನಾಥ್‌ರವರ ‘ಪರಿ’ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...