Homeಮುಖಪುಟಲಿಂಗ ಸಂವೇದನೆ ವರದಿಗಾಗಿ ಲಾಡ್ಲಿ ಮೀಡಿಯಾ ಪ್ರಶಸ್ತಿ ಗೆದ್ದ PARI ಪತ್ರಕರ್ತೆ

ಲಿಂಗ ಸಂವೇದನೆ ವರದಿಗಾಗಿ ಲಾಡ್ಲಿ ಮೀಡಿಯಾ ಪ್ರಶಸ್ತಿ ಗೆದ್ದ PARI ಪತ್ರಕರ್ತೆ

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ.

- Advertisement -
- Advertisement -

PARI ವರದಿಗಾರ್ತಿ ಜ್ಯೋತಿ ಶಿನೋಲಿ ಲಿಂಗ ಸಂವೇದನೆಗಾಗಿ ಲಾಡ್ಲಿ ಮೀಡಿಯಾ ಮತ್ತು ಜಾಹೀರಾತು ಪ್ರಶಸ್ತಿ 2020 ಅನ್ನು ಗೆದ್ದಿದ್ದಾರೆ. ಮಹಾರಾಷ್ಟ್ರದಲ್ಲಿ ಪರಿಶಿಷ್ಠ ಪಂಗಡಕ್ಕೆ ಸೇರಿದ ಪಾರ್ಧಿ ಎಂಬ ಬುಡಕಟ್ಟು ಸಮುದಾಯ ತಮ್ಮದಲ್ಲದ ತಪ್ಪಿಗೆ ಹೇಗೆ ನಿರಂತರ ಕಿರುಕುಳಕ್ಕೆ ಒಳಗಾಗುತ್ತಿದೆ ಎಂಬುದರ ಬಗ್ಗೆ No crime, unending punishment ‘ಅಪರಾಧವಿಲ್ಲದಿದ್ದರೂ, ಕೊನೆಯಿಲ್ಲದ ಶಿಕ್ಷೆ’ (ಆಗಸ್ಟ್ 10, 2018) ಎಂಬ ಅವರ ವರದಿಗೆ ಪ್ರಶಸ್ತಿ ಲಭಿಸಿದೆ.

1871 ರಲ್ಲಿ ಬ್ರಿಟಿಷರು ತಮ್ಮ ಆಳ್ವಿಕೆಯನ್ನು ಒಪ್ಪಿಕೊಳ್ಳದ ಪಾರ್ಧಿ ಬುಡಕಟ್ಟು ಜನಾಂಗದವರು ಸೇರಿ ಸುಮಾರು 200 ಇತರ ಡಿ-ನೋಟಿಫೈಡ್ ಸಮುದಾಯಗಳಿಗೆ ‘ಕ್ರಿಮಿನಲ್ ಬುಡಕಟ್ಟು’ ಎಂದು ಬ್ರಾಂಡ್ ಮಾಡಿದ್ದರು. ಸ್ವಾತಂತ್ರ್ಯಾನಂತರ 1952 ರಲ್ಲಿ ಆ ಅಪರಾಧ ಬುಡಕಟ್ಟು ಕಾಯ್ದೆಯನ್ನು ಭಾರತ ಸರ್ಕಾರ ರದ್ದುಗೊಳಿಸಿದರೂ, ಇಂದಿಗೂ ಆ ಸಮುದಾಯಗಳಿಗೆ ಕಳಂಕ, ತಾರತಮ್ಯ ಮತ್ತು ಕಿರುಕುಳ ಮುಂದುವರೆದಿದೆ. ಆ ಪಾರ್ಧಿ ಸಮುದಾಯದ ನೋವಿಗೆ ಸ್ಪಂದಿಸುತ್ತಿರುವ ಅದೇ ಸಮುದಾಯದ ಸುನೀತಾ ಬೋಸಲೆ ಎಂಬ ಮಹಿಳೆಯ ಹೋರಾಟದ ಬಗ್ಗೆ ಜ್ಯೋತಿ ಶಿನೋಲಿ ವಿಸ್ತೃತ ವರದಿ ಮಾಡಿದ್ದರು.

ಜ್ಯೋತಿ ಶಿನೋಲಿ. Photo Courtesy: Pari

ಜ್ಯೋತಿ ಶಿನೋಲಿ ಅವರು ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ಪತ್ರಿಕೆಗೆ ತಂದಿರುವ ಮೂರನೇ ಪತ್ರಿಕೋದ್ಯಮ ಪ್ರಶಸ್ತಿ ಇದಾಗಿದೆ. ಅಲ್ಲದೆ ಈ ವರ್ಷದ ಆಗಸ್ಟ್‌ನಲ್ಲಿ ಪರಿ ತಂಡಕ್ಕೆ 2020ನೇ ಸಾಲಿನ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ ಲಭಿಸಿತ್ತು. PARI ತಂಡವು “ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ಗ್ರಾಮೀಣ ಭಾರತದ ಮೇಲೆ ಸಾಂಕ್ರಾಮಿಕದ ಪ್ರಭಾವ ಸೇರಿದಂತೆ ಅವರ ವ್ಯಾಪಕ ಕ್ಷೇತ್ರ ವರದಿಗಳಿಗಾಗಿ” ಪ್ರಶಸ್ತಿಯನ್ನು ಸ್ವೀಕರಿಸಿತ್ತು.

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ. “ಪರಿ ಜೀವಂತ ಜರ್ನಲ್ ಮತ್ತು ಆರ್ಕೈವ್ ಆಗಿದೆ” ಎಂಬ ಹೆಸರು ಗಳಿಸಿದೆ.


ಇದನ್ನೂ ಓದಿ: ಪಿ ಸಾಯಿನಾಥ್‌ರವರ ‘ಪರಿ’ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...