Homeಮುಖಪುಟಲಿಂಗ ಸಂವೇದನೆ ವರದಿಗಾಗಿ ಲಾಡ್ಲಿ ಮೀಡಿಯಾ ಪ್ರಶಸ್ತಿ ಗೆದ್ದ PARI ಪತ್ರಕರ್ತೆ

ಲಿಂಗ ಸಂವೇದನೆ ವರದಿಗಾಗಿ ಲಾಡ್ಲಿ ಮೀಡಿಯಾ ಪ್ರಶಸ್ತಿ ಗೆದ್ದ PARI ಪತ್ರಕರ್ತೆ

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ.

- Advertisement -
- Advertisement -

PARI ವರದಿಗಾರ್ತಿ ಜ್ಯೋತಿ ಶಿನೋಲಿ ಲಿಂಗ ಸಂವೇದನೆಗಾಗಿ ಲಾಡ್ಲಿ ಮೀಡಿಯಾ ಮತ್ತು ಜಾಹೀರಾತು ಪ್ರಶಸ್ತಿ 2020 ಅನ್ನು ಗೆದ್ದಿದ್ದಾರೆ. ಮಹಾರಾಷ್ಟ್ರದಲ್ಲಿ ಪರಿಶಿಷ್ಠ ಪಂಗಡಕ್ಕೆ ಸೇರಿದ ಪಾರ್ಧಿ ಎಂಬ ಬುಡಕಟ್ಟು ಸಮುದಾಯ ತಮ್ಮದಲ್ಲದ ತಪ್ಪಿಗೆ ಹೇಗೆ ನಿರಂತರ ಕಿರುಕುಳಕ್ಕೆ ಒಳಗಾಗುತ್ತಿದೆ ಎಂಬುದರ ಬಗ್ಗೆ No crime, unending punishment ‘ಅಪರಾಧವಿಲ್ಲದಿದ್ದರೂ, ಕೊನೆಯಿಲ್ಲದ ಶಿಕ್ಷೆ’ (ಆಗಸ್ಟ್ 10, 2018) ಎಂಬ ಅವರ ವರದಿಗೆ ಪ್ರಶಸ್ತಿ ಲಭಿಸಿದೆ.

1871 ರಲ್ಲಿ ಬ್ರಿಟಿಷರು ತಮ್ಮ ಆಳ್ವಿಕೆಯನ್ನು ಒಪ್ಪಿಕೊಳ್ಳದ ಪಾರ್ಧಿ ಬುಡಕಟ್ಟು ಜನಾಂಗದವರು ಸೇರಿ ಸುಮಾರು 200 ಇತರ ಡಿ-ನೋಟಿಫೈಡ್ ಸಮುದಾಯಗಳಿಗೆ ‘ಕ್ರಿಮಿನಲ್ ಬುಡಕಟ್ಟು’ ಎಂದು ಬ್ರಾಂಡ್ ಮಾಡಿದ್ದರು. ಸ್ವಾತಂತ್ರ್ಯಾನಂತರ 1952 ರಲ್ಲಿ ಆ ಅಪರಾಧ ಬುಡಕಟ್ಟು ಕಾಯ್ದೆಯನ್ನು ಭಾರತ ಸರ್ಕಾರ ರದ್ದುಗೊಳಿಸಿದರೂ, ಇಂದಿಗೂ ಆ ಸಮುದಾಯಗಳಿಗೆ ಕಳಂಕ, ತಾರತಮ್ಯ ಮತ್ತು ಕಿರುಕುಳ ಮುಂದುವರೆದಿದೆ. ಆ ಪಾರ್ಧಿ ಸಮುದಾಯದ ನೋವಿಗೆ ಸ್ಪಂದಿಸುತ್ತಿರುವ ಅದೇ ಸಮುದಾಯದ ಸುನೀತಾ ಬೋಸಲೆ ಎಂಬ ಮಹಿಳೆಯ ಹೋರಾಟದ ಬಗ್ಗೆ ಜ್ಯೋತಿ ಶಿನೋಲಿ ವಿಸ್ತೃತ ವರದಿ ಮಾಡಿದ್ದರು.

ಜ್ಯೋತಿ ಶಿನೋಲಿ. Photo Courtesy: Pari

ಜ್ಯೋತಿ ಶಿನೋಲಿ ಅವರು ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ಪತ್ರಿಕೆಗೆ ತಂದಿರುವ ಮೂರನೇ ಪತ್ರಿಕೋದ್ಯಮ ಪ್ರಶಸ್ತಿ ಇದಾಗಿದೆ. ಅಲ್ಲದೆ ಈ ವರ್ಷದ ಆಗಸ್ಟ್‌ನಲ್ಲಿ ಪರಿ ತಂಡಕ್ಕೆ 2020ನೇ ಸಾಲಿನ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ ಲಭಿಸಿತ್ತು. PARI ತಂಡವು “ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ಗ್ರಾಮೀಣ ಭಾರತದ ಮೇಲೆ ಸಾಂಕ್ರಾಮಿಕದ ಪ್ರಭಾವ ಸೇರಿದಂತೆ ಅವರ ವ್ಯಾಪಕ ಕ್ಷೇತ್ರ ವರದಿಗಳಿಗಾಗಿ” ಪ್ರಶಸ್ತಿಯನ್ನು ಸ್ವೀಕರಿಸಿತ್ತು.

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ. “ಪರಿ ಜೀವಂತ ಜರ್ನಲ್ ಮತ್ತು ಆರ್ಕೈವ್ ಆಗಿದೆ” ಎಂಬ ಹೆಸರು ಗಳಿಸಿದೆ.


ಇದನ್ನೂ ಓದಿ: ಪಿ ಸಾಯಿನಾಥ್‌ರವರ ‘ಪರಿ’ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...