Homeಮುಖಪುಟಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ: ಮೂರನೇ ದಿನವೂ ಸಂಸತ್ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ: ಮೂರನೇ ದಿನವೂ ಸಂಸತ್ ಕಲಾಪ ಮುಂದೂಡಿಕೆ

- Advertisement -
- Advertisement -

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಮೂರನೇ ದಿನವೂ ಸಂಸತ್ತಿನ ಉಭಯ ಸದನಗಳ ಕಲಾಪ ಮುಂದೂಡಿಕೆಯಾಗಿದೆ.

ಆರಂಭದಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಕಲಾಪ ಮುಂದೂಡಿಕೆಯಾಗಿದೆ. ನಂತರದ ಬೆಳವಣಿಗೆ ಕಾದು ನೋಡಬೇಕಿದೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ, ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಕುರಿತು ಉಭಯ ಸದನಗಳಲ್ಲಿ ಚರ್ಚಿಸುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪ್ರತಿಪಕ್ಷಗಳು ಪ್ರತಿಭಟಿಸುತ್ತಿವೆ.

“ಪ್ರತಿಪಕ್ಷಗಳ ಬೇಡಿಕೆಯನ್ನು ಪರಿಗಣಿಸುತ್ತಿಲ್ಲ. ಇದರಿಂದ ಕಲಾಪಕ್ಕೆ ಅಡ್ಡಿಯಾಗುತ್ತಿದೆ. ಕಲಾಪಕ್ಕೆ ತಡೆಯಾದರೆ, ಅದರ ಅತಿದೊಡ್ಡ ಫಲಾನುಭವಿ ಸರ್ಕಾರ” ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒ ಬ್ರಿಯಾನ್ ಹೇಳಿದ್ದಾರೆ.

“ಸಂಸತ್ತು ಕಾರ್ಯ ನಿರ್ವಹಿಸದಿದ್ದರೆ ಅದರ ಲಾಭ ಯಾರಿಗೆ? ಸರ್ಕಾರಕ್ಕೆ. ಏಕೆಂದರೆ, ಸಂಸತ್ತಿನ ಜವಾಬ್ದಾರಿ ಸರ್ಕಾರದ ಮೇಲಿದೆ. ಜನರ ಜವಾಬ್ದಾರಿ ಸಂಸತ್ತಿನ ಮೇಲಿದೆ. ಸಂಸತ್ತೇ ಕಾರ್ಯನಿರ್ವಹಿಸದಿದ್ದರೆ ಸರ್ಕಾರಕ್ಕೆ ಯಾವ ಜವಾಬ್ದಾರಿಯೂ ಇರುವುದಿಲ್ಲ” ಎಂದು ಒಬ್ರಿಯಾನ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮುಂಗಾರು ಅಧಿವೇಶನವು ಒಟ್ಟು 190 ಗಂಟೆಗಳ ಕಾಲ ನಿಗದಿಯಾಗಿದ್ದು, ಅದರಲ್ಲಿ ಶೇ. 70ರಷ್ಟು ಸಮಯವನ್ನು ಸರ್ಕಾರಿ ವ್ಯವಹಾರಗಳಿಗೆ ಮೀಸಲಿಡಲಾಗಿದೆ ಎಂದು ವಿವರಿಸಿದ ಒಬ್ರಿಯಾನ್ ಅವರು, ಬ್ಲಾಗ್ ಪೋಸ್ಟ್‌ಗೆ ಲಿಂಕ್ ಒಂದನ್ನು ಹಂಚಿಕೊಂಡಿದ್ದಾರೆ. ವಿರೋಧ ಪಕ್ಷದ ಸಂಸದರು ಪ್ರಶ್ನೋತ್ತರ ಅವಧಿಗೆ ಅರ್ಧದಷ್ಟು ಪ್ರಶ್ನೆಗಳನ್ನು ಮತ್ತು ಶೂನ್ಯ ವೇಳೆಯ ನೋಟಿಸ್‌ಗಳನ್ನು ನೀಡುತ್ತಾರೆ. ಅವರಿಗೆ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಎತ್ತಲು 31 ಗಂಟೆಗಳ ಕಾಲಾವಕಾಶ ನೀಡಲಾಗುತ್ತದೆ ಎಂದು ಒಬ್ರಿಯಾನ್ ವಿವರಿಸಿದ್ದಾರೆ.

ತುರ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳ ಕುರಿತು ಚರ್ಚೆಗಳಿಗೆ ಅವಕಾಶ ನೀಡಲು ಪ್ರತಿ ಸದನದಲ್ಲಿ ಪ್ರತಿ ವಾರ ನಾಲ್ಕು ಗಂಟೆಗಳನ್ನು ಕಾಯ್ದಿರಿಸಬೇಕು ಮತ್ತು ಗಮನ ಸೆಳೆಯುವ ಪ್ರಸ್ತಾಪಕ್ಕಾಗಿ ಹೆಚ್ಚುವರಿಯಾಗಿ ಎರಡು ಗಂಟೆಗಳನ್ನು ಮೀಸಲಿಡಬೇಕು. ಇದು ಸರ್ಕಾರಿ ವ್ಯವಹಾರಗಳಿಗೆ 117 ಗಂಟೆಗಳು ಮತ್ತು ವಿರೋಧ ಪಕ್ಷಗಳಿಗೆ 49 ಗಂಟೆಗಳ ಸಮಯ ನೀಡುತ್ತದೆ. ಈ ಮಾದರಿಯು ‘ಹೆಚ್ಚು ನ್ಯಾಯಯುತ ವ್ಯವಸ್ಥೆ’ ಎಂದು ಒಬ್ರಿಯಾನ್ ಹೇಳಿದ್ದಾರೆ.

ಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...