Homeಮುಖಪುಟ'ಸಂಸತ್ ಅಧಿವೇಶನಕ್ಕೆ ಮುನ್ನ ಮಣಿಪುರಕ್ಕೆ ಭೇಟಿ ನೀಡಿ' - ಪ್ರಧಾನಿಗೆ ಕಾಂಗ್ರೆಸ್ ಒತ್ತಾಯ

‘ಸಂಸತ್ ಅಧಿವೇಶನಕ್ಕೆ ಮುನ್ನ ಮಣಿಪುರಕ್ಕೆ ಭೇಟಿ ನೀಡಿ’ – ಪ್ರಧಾನಿಗೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ಮಣಿಪುರದಲ್ಲಿ ಹಿಂಸಾಚಾರದ ಬಗ್ಗೆ ರಾಜಕೀಯ ವಾಗ್ವದದ ಮಧ್ಯೆ, ಸಂಸತ್ತಿನ ಅಧಿವೇಶನದ ಮೊದಲು ಹಿಂಸಾಚಾರ ಪೀಡಿತ ರಾಜ್ಯದಕ್ಕೆ ಭೇಟಿ ನೀಡುವಂತೆ ಕಾಂಗ್ರೆಸ್ ಪಕ್ಷವು ಸೋಮವಾರ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿಕೊಂಡಿದೆ. ಅಷ್ಟೆ ಅಲ್ಲದೆ, ಮಣಿಪುರದ “ಡಬಲ್ ಇಂಜಿನ್ ಸರ್ಕಾರದ ಸಂಪೂರ್ಣ ವೈಫಲ್ಯ” ಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಪಕ್ಷವು ಒತ್ತಾಯಿಸಿದೆ. ಅಧಿವೇಶನಕ್ಕೆ ಮುನ್ನ

ಮೋದಿ ಅವರು ಮೊದಲು ಮಣಿಪುರದ ಸರ್ವಪಕ್ಷ ನಿಯೋಗವನ್ನು ಭೇಟಿ ಮಾಡಬೇಕು ಮತ್ತು ನವೆಂಬರ್ 25 ರಿಂದ ಪ್ರಾರಂಭವಾಗುವ ಸಂಸತ್ತಿನ ಅಧಿವೇಶನಕ್ಕೂ ಮುನ್ನ ರಾಷ್ಟ್ರಮಟ್ಟದಲ್ಲಿ ಸರ್ವಪಕ್ಷ ಸಭೆಯನ್ನು ಕರೆಯಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂವಹನದ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಣಿಪುರ ಕಾಂಗ್ರೆಸ್ ಮುಖ್ಯಸ್ಥ ಕೆ. ಮೇಘಚಂದ್ರ ಸಿಂಗ್ ಮತ್ತು ಎಐಸಿಸಿ ರಾಜ್ಯ ಉಸ್ತುವಾರಿ ಗಿರೀಶ್ ಚೋಡಂಕರ್ ಅವರೊಂದಿಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜೈರಾಮ್ ರಮೇಶ್, ಅಮಿತ್ ಶಾ ಮತ್ತು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಧಿವೇಶನಕ್ಕೆ ಮುನ್ನ

2023ರ ಮೇ 3ರಿಂದ ಮಣಿಪುರ ಹೊತ್ತಿ ಉರಿಯುತ್ತಿದೆ ಮತ್ತು ಪ್ರಧಾನಿ ಮೋದಿ ಅವರು ವಿಶ್ವದ ವಿವಿಧ ದೇಶಗಳಿಗೆ ಭೇಟಿ ನೀಡುತ್ತಾರೆ, ಧರ್ಮೋಪದೇಶವನ್ನು ನೀಡುತ್ತಾರೆ, ಆದರೆ ಮಣಿಪುರಕ್ಕೆ ಭೇಟಿ ನೀಡಲು ಅವರಿಗೆ ಸಮಯ ಸಿಗುವುದಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. “ಆದ್ದರಿಂದ, ನಮ್ಮ ಮೊದಲ ಬೇಡಿಕೆ ಏನೆಂದರೆ, ಸಂಸತ್ತಿನ ಅಧಿವೇಶನಕ್ಕೆ ಮುಂಚಿತವಾಗಿ ಪ್ರಧಾನಿ ಸಮಯ ಹೊಂದಿಸಿಕೊಳ್ಳಬೇಕು. ಮಣಿಪುರಕ್ಕೆ ಭೇಟಿ ನೀಡಬೇಕು. ಜೊತೆಗೆ ಅಲ್ಲಿನ ರಾಜಕೀಯ ಪಕ್ಷಗಳು, ರಾಜಕಾರಣಿಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ಅಲ್ಲಿನ ಪರಿಹಾರ ಶಿಬಿರದಲ್ಲಿರುವ ಜನರನ್ನು ಭೇಟಿ ಮಾಡಬೇಕು” ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಪ್ರಧಾನಿಯವರು ಮಣಿಪುರದ ಸರ್ವಪಕ್ಷ ನಿಯೋಗವನ್ನು ಭೇಟಿ ಮಾಡಬೇಕು ಮತ್ತು ನಂತರ ರಾಷ್ಟ್ರಮಟ್ಟದಲ್ಲಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“2024ರ ಜುಲೈ 31ರಿಂದ ಅಲ್ಲಿ ಪೂರ್ಣಾವಧಿ ರಾಜ್ಯಪಾಲರಿಲ್ಲ. ಅದಕ್ಕೂ ಮೊದಲು ಎಸ್‌ಟಿ ವ್ಯಕ್ತಿಯೊಬ್ಬರು ರಾಜ್ಯಪಾಲರಾಗಿದ್ದರು. ಆದರೆ ಅವರನ್ನು 18 ತಿಂಗಳೊಳಗೆ ತೆಗೆದುಹಾಕಲಾಯಿತು. ತಕ್ಷಣವೇ ಪೂರ್ಣಾವಧಿಯ ರಾಜ್ಯಪಾಲರನ್ನು ನೇಮಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಕಾಂಗ್ರೆಸ್ ಹೇಳಿದೆ.

ಪ್ರಧಾನಿ ಮೋದಿ ಅವರು ಮಣಿಪುರವನ್ನು ಗೃಹ ಸಚಿವರಿಗೆ “ಹೊರಗುತ್ತಿಗೆ” ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. “ಗೃಹ ಸಚಿವರು ಮತ್ತು ವಿಫಲ ಸಿಎಂ ನಡುವೆ ವಿಚಿತ್ರವಾದ ‘ಜುಗಲ್ಬಂದಿ’ ಇದೆ. ಗೃಹ ಸಚಿವರು ಸಿಎಂ ವೈಫಲ್ಯಗಳ ಬಗ್ಗೆ ಏನಕ್ಕೆ ಗಮನ ಹರಿಸಿಲ್ಲ ಮತ್ತು ಅವರನ್ನು ಉಳಿಸಲು ಏನಕ್ಕೆ ಪ್ರಯತ್ನಿಸುತ್ತಿದ್ದಾರೆ?” ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಬಿಜೆಪಿ ಸರ್ಕಾರ, ಪ್ರಧಾನಿ ಮತ್ತು ಗೃಹ ಸಚಿವರು ಪ್ರಾಮಾಣಿಕವಾಗಿ ಡ್ರಗ್ಸ್ ಮಾಫಿಯಾ ವಿರುದ್ಧ ಹೋರಾಡಲು ಬಯಸಿದರೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ಏಕೆ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡುವುದು ತಕ್ಷಣದ ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. “ಮಣಿಪುರದ ನೋವು ದೇಶದ ನೋವು, 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 60,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಇದು ಡಬಲ್ ಎಂಜಿನ್ ಸರ್ಕಾರದ ಸಂಪೂರ್ಣ ವೈಫಲ್ಯದ ಕಥೆಯಾಗಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

2022 ರ ಚುನಾವಣೆಯಲ್ಲಿ ಬಿಜೆಪಿ 60 ರಲ್ಲಿ 32 ಸ್ಥಾನಗಳನ್ನು ಗಳಿಸಿತು. ಆದರೆ 15 ತಿಂಗಳೊಳಗೆ ಮಣಿಪುರ ಹೊತ್ತಿ ಉರಿಯಲಾರಂಭಿಸಿತು ಎಂದು ಅವರು ಹೇಳಿದ್ದಾರೆ. “ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ ಮತ್ತು ಹಳಿತಪ್ಪಿದೆ. ಇದಕ್ಕೆ ಗೃಹ ಸಚಿವರೇ ನೇರ ಹೊಣೆಯಾಗಿದ್ದು, ಗೃಹ ಸಚಿವರು ಇದಕ್ಕೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ನಾವು ಬಯಸುತ್ತೇವೆ” ಎಂದು ಜೈರಾಮ್ ಹೇಳಿದ್ದಾರೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...