Homeಮುಖಪುಟ'ಸಂಸತ್ ಅಧಿವೇಶನಕ್ಕೆ ಮುನ್ನ ಮಣಿಪುರಕ್ಕೆ ಭೇಟಿ ನೀಡಿ' - ಪ್ರಧಾನಿಗೆ ಕಾಂಗ್ರೆಸ್ ಒತ್ತಾಯ

‘ಸಂಸತ್ ಅಧಿವೇಶನಕ್ಕೆ ಮುನ್ನ ಮಣಿಪುರಕ್ಕೆ ಭೇಟಿ ನೀಡಿ’ – ಪ್ರಧಾನಿಗೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ಮಣಿಪುರದಲ್ಲಿ ಹಿಂಸಾಚಾರದ ಬಗ್ಗೆ ರಾಜಕೀಯ ವಾಗ್ವದದ ಮಧ್ಯೆ, ಸಂಸತ್ತಿನ ಅಧಿವೇಶನದ ಮೊದಲು ಹಿಂಸಾಚಾರ ಪೀಡಿತ ರಾಜ್ಯದಕ್ಕೆ ಭೇಟಿ ನೀಡುವಂತೆ ಕಾಂಗ್ರೆಸ್ ಪಕ್ಷವು ಸೋಮವಾರ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿಕೊಂಡಿದೆ. ಅಷ್ಟೆ ಅಲ್ಲದೆ, ಮಣಿಪುರದ “ಡಬಲ್ ಇಂಜಿನ್ ಸರ್ಕಾರದ ಸಂಪೂರ್ಣ ವೈಫಲ್ಯ” ಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಪಕ್ಷವು ಒತ್ತಾಯಿಸಿದೆ. ಅಧಿವೇಶನಕ್ಕೆ ಮುನ್ನ

ಮೋದಿ ಅವರು ಮೊದಲು ಮಣಿಪುರದ ಸರ್ವಪಕ್ಷ ನಿಯೋಗವನ್ನು ಭೇಟಿ ಮಾಡಬೇಕು ಮತ್ತು ನವೆಂಬರ್ 25 ರಿಂದ ಪ್ರಾರಂಭವಾಗುವ ಸಂಸತ್ತಿನ ಅಧಿವೇಶನಕ್ಕೂ ಮುನ್ನ ರಾಷ್ಟ್ರಮಟ್ಟದಲ್ಲಿ ಸರ್ವಪಕ್ಷ ಸಭೆಯನ್ನು ಕರೆಯಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂವಹನದ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಣಿಪುರ ಕಾಂಗ್ರೆಸ್ ಮುಖ್ಯಸ್ಥ ಕೆ. ಮೇಘಚಂದ್ರ ಸಿಂಗ್ ಮತ್ತು ಎಐಸಿಸಿ ರಾಜ್ಯ ಉಸ್ತುವಾರಿ ಗಿರೀಶ್ ಚೋಡಂಕರ್ ಅವರೊಂದಿಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜೈರಾಮ್ ರಮೇಶ್, ಅಮಿತ್ ಶಾ ಮತ್ತು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಧಿವೇಶನಕ್ಕೆ ಮುನ್ನ

2023ರ ಮೇ 3ರಿಂದ ಮಣಿಪುರ ಹೊತ್ತಿ ಉರಿಯುತ್ತಿದೆ ಮತ್ತು ಪ್ರಧಾನಿ ಮೋದಿ ಅವರು ವಿಶ್ವದ ವಿವಿಧ ದೇಶಗಳಿಗೆ ಭೇಟಿ ನೀಡುತ್ತಾರೆ, ಧರ್ಮೋಪದೇಶವನ್ನು ನೀಡುತ್ತಾರೆ, ಆದರೆ ಮಣಿಪುರಕ್ಕೆ ಭೇಟಿ ನೀಡಲು ಅವರಿಗೆ ಸಮಯ ಸಿಗುವುದಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. “ಆದ್ದರಿಂದ, ನಮ್ಮ ಮೊದಲ ಬೇಡಿಕೆ ಏನೆಂದರೆ, ಸಂಸತ್ತಿನ ಅಧಿವೇಶನಕ್ಕೆ ಮುಂಚಿತವಾಗಿ ಪ್ರಧಾನಿ ಸಮಯ ಹೊಂದಿಸಿಕೊಳ್ಳಬೇಕು. ಮಣಿಪುರಕ್ಕೆ ಭೇಟಿ ನೀಡಬೇಕು. ಜೊತೆಗೆ ಅಲ್ಲಿನ ರಾಜಕೀಯ ಪಕ್ಷಗಳು, ರಾಜಕಾರಣಿಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ಅಲ್ಲಿನ ಪರಿಹಾರ ಶಿಬಿರದಲ್ಲಿರುವ ಜನರನ್ನು ಭೇಟಿ ಮಾಡಬೇಕು” ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಪ್ರಧಾನಿಯವರು ಮಣಿಪುರದ ಸರ್ವಪಕ್ಷ ನಿಯೋಗವನ್ನು ಭೇಟಿ ಮಾಡಬೇಕು ಮತ್ತು ನಂತರ ರಾಷ್ಟ್ರಮಟ್ಟದಲ್ಲಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“2024ರ ಜುಲೈ 31ರಿಂದ ಅಲ್ಲಿ ಪೂರ್ಣಾವಧಿ ರಾಜ್ಯಪಾಲರಿಲ್ಲ. ಅದಕ್ಕೂ ಮೊದಲು ಎಸ್‌ಟಿ ವ್ಯಕ್ತಿಯೊಬ್ಬರು ರಾಜ್ಯಪಾಲರಾಗಿದ್ದರು. ಆದರೆ ಅವರನ್ನು 18 ತಿಂಗಳೊಳಗೆ ತೆಗೆದುಹಾಕಲಾಯಿತು. ತಕ್ಷಣವೇ ಪೂರ್ಣಾವಧಿಯ ರಾಜ್ಯಪಾಲರನ್ನು ನೇಮಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಕಾಂಗ್ರೆಸ್ ಹೇಳಿದೆ.

ಪ್ರಧಾನಿ ಮೋದಿ ಅವರು ಮಣಿಪುರವನ್ನು ಗೃಹ ಸಚಿವರಿಗೆ “ಹೊರಗುತ್ತಿಗೆ” ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. “ಗೃಹ ಸಚಿವರು ಮತ್ತು ವಿಫಲ ಸಿಎಂ ನಡುವೆ ವಿಚಿತ್ರವಾದ ‘ಜುಗಲ್ಬಂದಿ’ ಇದೆ. ಗೃಹ ಸಚಿವರು ಸಿಎಂ ವೈಫಲ್ಯಗಳ ಬಗ್ಗೆ ಏನಕ್ಕೆ ಗಮನ ಹರಿಸಿಲ್ಲ ಮತ್ತು ಅವರನ್ನು ಉಳಿಸಲು ಏನಕ್ಕೆ ಪ್ರಯತ್ನಿಸುತ್ತಿದ್ದಾರೆ?” ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಬಿಜೆಪಿ ಸರ್ಕಾರ, ಪ್ರಧಾನಿ ಮತ್ತು ಗೃಹ ಸಚಿವರು ಪ್ರಾಮಾಣಿಕವಾಗಿ ಡ್ರಗ್ಸ್ ಮಾಫಿಯಾ ವಿರುದ್ಧ ಹೋರಾಡಲು ಬಯಸಿದರೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ಏಕೆ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡುವುದು ತಕ್ಷಣದ ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. “ಮಣಿಪುರದ ನೋವು ದೇಶದ ನೋವು, 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 60,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಇದು ಡಬಲ್ ಎಂಜಿನ್ ಸರ್ಕಾರದ ಸಂಪೂರ್ಣ ವೈಫಲ್ಯದ ಕಥೆಯಾಗಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

2022 ರ ಚುನಾವಣೆಯಲ್ಲಿ ಬಿಜೆಪಿ 60 ರಲ್ಲಿ 32 ಸ್ಥಾನಗಳನ್ನು ಗಳಿಸಿತು. ಆದರೆ 15 ತಿಂಗಳೊಳಗೆ ಮಣಿಪುರ ಹೊತ್ತಿ ಉರಿಯಲಾರಂಭಿಸಿತು ಎಂದು ಅವರು ಹೇಳಿದ್ದಾರೆ. “ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ ಮತ್ತು ಹಳಿತಪ್ಪಿದೆ. ಇದಕ್ಕೆ ಗೃಹ ಸಚಿವರೇ ನೇರ ಹೊಣೆಯಾಗಿದ್ದು, ಗೃಹ ಸಚಿವರು ಇದಕ್ಕೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ನಾವು ಬಯಸುತ್ತೇವೆ” ಎಂದು ಜೈರಾಮ್ ಹೇಳಿದ್ದಾರೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...