Homeಮುಖಪುಟ‘ದೇಶದ ಸಂಸತ್ತು ಗಾಢ ಕತ್ತಲೆ ಕೋಣೆಯಾಗಿ ಮಾರ್ಪಟ್ಟಿದೆ’; ಮೋದಿ-ಅಮಿತ್ ಶಾ ವಿರುದ್ಧ ಒಬ್ರಿಯಾನ್ ಕಿಡಿ

‘ದೇಶದ ಸಂಸತ್ತು ಗಾಢ ಕತ್ತಲೆ ಕೋಣೆಯಾಗಿ ಮಾರ್ಪಟ್ಟಿದೆ’; ಮೋದಿ-ಅಮಿತ್ ಶಾ ವಿರುದ್ಧ ಒಬ್ರಿಯಾನ್ ಕಿಡಿ

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಅವರದೇ ಪಕ್ಷದ ನಾಯಕರಾದ ವಾಜಪೇಯಿ-ಅಡ್ವಾಣಿಯವರಿಗೆ ಹೋಲಿಕೆ ಮಾಡಿರುವ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್, ‘ಸಂಸತ್ತು ಗಾಢ ಕತ್ತಲೆ ಕೋಣೆಯಾಗಿ (ಚೇಂಬರ್) ಮಾರ್ಪಟ್ಟಿದೆ’ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘2001ರ ಸಂಸತ್ ದಾಳಿಯ ನಂತರ, ಆಗಿನ ಪ್ರಧಾನಿ ಮತ್ತು ಗೃಹ ಸಚಿವರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ’ ಎಂದು ಟೀಕಿಸಿದ್ದಾರೆ.

‘2001 ಸಂಸತ್ ದಾಳಿ ನಡೆದಾಗ, ಸಂಸತ್ತಿನಲ್ಲಿ 3 ಕೆಲಸದ ದಿನ ಪೂರ್ಣ ಚರ್ಚೆ. ಪ್ರಧಾನ ಮಂತ್ರಿ ರಾಜ್ಯಸಭೆಯಲ್ಲಿ, ಗೃಹ ಸಚಿವರು ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದರು. 2023ರ ಉಲ್ಲಂಘನೆ; ಸರ್ಕಾರ ಮೌನವಾಗಿದೆ. ಗೃಹ ಸಚಿವರಿಂದ ಚರ್ಚೆ ಮತ್ತು ಹೇಳಿಕೆಗೆ ಒತ್ತಾಯಿಸಿದ್ದಕ್ಕಾಗಿ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಸಂಸತ್ತು ಗಾಢವಾದ ಕತ್ತಲೆಯ ಕೋಣೆಯಾಗಿ ಮಾರ್ಪಟ್ಟಿದೆ’ ಎಂದು ಮೋದಿ-ಅಮಿತ್ ಶಾ ವಿರುದ್ಧ ಕಿಡಿಕಾರಿದ್ದಾರೆ.

2001ರ ಸಂಸತ್ತಿನ ದಾಳಿಯ ವಾರ್ಷಿಕೋತ್ಸವದ ದಿವಾದ ಡಿಸೆಂಬರ್ 13 ರಂದು, ಲೋಕಸಭೆಯಯಲ್ಲಿ ಶೂನ್ಯ ವೇಳೆಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸಾರ್ವಜನಿಕ ಗ್ಯಾಲರಿಯಿಂದ ಸಂಸತ್ತಿನ ಜಿಗಿದಿದ್ದ ಇಬ್ಬರು ಯುವಕರು, ತಮ್ಮ ಬೂಟುಗಳಲ್ಲಿ ಬಚ್ಚಿಟ್ಟಿದ್ದ ಡಬ್ಬಿಗಳಿಂದ ಹಳದಿ ಹೊಗೆಯನ್ನು ಬಿಡುಗಡೆ ಮಾಡಿದ್ದರು.

ಘಟನೆಯ ನಂತರ ವಿರೋಧ ಪಕ್ಷದ ಸಂಸದರು ಭದ್ರತೆ ಉಲ್ಲಂಘನೆಯ ಬಗ್ಗೆ ಚರ್ಚೆಗೆ ಒತ್ತಾಯಿಸಿ, ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿದರು.

ಈ ವಾಗ್ವಾದಿಂದ ಲೋಕಸಭೆಯ 100 ಮತ್ತು ರಾಜ್ಯಸಭೆಯ 46 ಪ್ರತಿಪಕ್ಷಗಳ ಸಂಸದರು ಅಶಿಸ್ತಿನ ಕಾರಣಕ್ಕಾಗಿ ಚಳಿಗಾಲ ಅಧಿವೇಶನದಿಂದ ಅಮಾನತುಗೊಂಡರು. ಒಬ್ರೇನ್ ಅಮಾನತುಗೊಂಡ ಮೊದಲ ರಾಜ್ಯಸಭಾ ಸಂಸದರಾಗಿದ್ದಾರೆ. ಅಮಾನತುಗೊಂಡ ನಂತರವೂ ಅವರು ಸದನದಲ್ಲಿ ಉಳಿದುಕೊಂಡಿದ್ದಕ್ಕಾಗಿ ಅವರ ವಿರುದ್ಧ ವಿಶೇಷ ಹಕ್ಕು ಉಲ್ಲಂಘನೆಯ ಪ್ರಸ್ತಾಪವನ್ನು ಸಹ ಮಾಡಿದ್ದಾರೆ. ಈ ವಿಷಯವನ್ನು ಸದನದ ವಿಶೇಷಾಧಿಕಾರ ಸಮಿತಿಗೆ ವಹಿಸಲಾಗಿದೆ.

ಸಂಸತ್ತಿನ ದಾಖಲೆಗಳ ಪ್ರಕಾರ, ಡಿಸೆಂಬರ್ 2001ರ ಸಂಸತ್ತಿನ ಮೇಲಿನ ದಾಳಿಯ ನಂತರ, ಉಭಯ ಸದನಗಳಲ್ಲಿ ಚರ್ಚೆ ನಡೆದಿದೆ. ಅಂದಿನ ಗೃಹ ಸಚಿವ ಎಲ್ಕೆ ಅಡ್ವಾಣಿ ಚರ್ಚೆಗೆ ಉತ್ತರ ನೀಡಿದ್ದರು. ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಉಭಯ ಸದನಗಳಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ; ಪೂಂಛ್‌ನಲ್ಲಿ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...