Homeಮುಖಪುಟ‘ದೇಶದ ಸಂಸತ್ತು ಗಾಢ ಕತ್ತಲೆ ಕೋಣೆಯಾಗಿ ಮಾರ್ಪಟ್ಟಿದೆ’; ಮೋದಿ-ಅಮಿತ್ ಶಾ ವಿರುದ್ಧ ಒಬ್ರಿಯಾನ್ ಕಿಡಿ

‘ದೇಶದ ಸಂಸತ್ತು ಗಾಢ ಕತ್ತಲೆ ಕೋಣೆಯಾಗಿ ಮಾರ್ಪಟ್ಟಿದೆ’; ಮೋದಿ-ಅಮಿತ್ ಶಾ ವಿರುದ್ಧ ಒಬ್ರಿಯಾನ್ ಕಿಡಿ

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಅವರದೇ ಪಕ್ಷದ ನಾಯಕರಾದ ವಾಜಪೇಯಿ-ಅಡ್ವಾಣಿಯವರಿಗೆ ಹೋಲಿಕೆ ಮಾಡಿರುವ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್, ‘ಸಂಸತ್ತು ಗಾಢ ಕತ್ತಲೆ ಕೋಣೆಯಾಗಿ (ಚೇಂಬರ್) ಮಾರ್ಪಟ್ಟಿದೆ’ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘2001ರ ಸಂಸತ್ ದಾಳಿಯ ನಂತರ, ಆಗಿನ ಪ್ರಧಾನಿ ಮತ್ತು ಗೃಹ ಸಚಿವರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ’ ಎಂದು ಟೀಕಿಸಿದ್ದಾರೆ.

‘2001 ಸಂಸತ್ ದಾಳಿ ನಡೆದಾಗ, ಸಂಸತ್ತಿನಲ್ಲಿ 3 ಕೆಲಸದ ದಿನ ಪೂರ್ಣ ಚರ್ಚೆ. ಪ್ರಧಾನ ಮಂತ್ರಿ ರಾಜ್ಯಸಭೆಯಲ್ಲಿ, ಗೃಹ ಸಚಿವರು ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದರು. 2023ರ ಉಲ್ಲಂಘನೆ; ಸರ್ಕಾರ ಮೌನವಾಗಿದೆ. ಗೃಹ ಸಚಿವರಿಂದ ಚರ್ಚೆ ಮತ್ತು ಹೇಳಿಕೆಗೆ ಒತ್ತಾಯಿಸಿದ್ದಕ್ಕಾಗಿ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಸಂಸತ್ತು ಗಾಢವಾದ ಕತ್ತಲೆಯ ಕೋಣೆಯಾಗಿ ಮಾರ್ಪಟ್ಟಿದೆ’ ಎಂದು ಮೋದಿ-ಅಮಿತ್ ಶಾ ವಿರುದ್ಧ ಕಿಡಿಕಾರಿದ್ದಾರೆ.

2001ರ ಸಂಸತ್ತಿನ ದಾಳಿಯ ವಾರ್ಷಿಕೋತ್ಸವದ ದಿವಾದ ಡಿಸೆಂಬರ್ 13 ರಂದು, ಲೋಕಸಭೆಯಯಲ್ಲಿ ಶೂನ್ಯ ವೇಳೆಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸಾರ್ವಜನಿಕ ಗ್ಯಾಲರಿಯಿಂದ ಸಂಸತ್ತಿನ ಜಿಗಿದಿದ್ದ ಇಬ್ಬರು ಯುವಕರು, ತಮ್ಮ ಬೂಟುಗಳಲ್ಲಿ ಬಚ್ಚಿಟ್ಟಿದ್ದ ಡಬ್ಬಿಗಳಿಂದ ಹಳದಿ ಹೊಗೆಯನ್ನು ಬಿಡುಗಡೆ ಮಾಡಿದ್ದರು.

ಘಟನೆಯ ನಂತರ ವಿರೋಧ ಪಕ್ಷದ ಸಂಸದರು ಭದ್ರತೆ ಉಲ್ಲಂಘನೆಯ ಬಗ್ಗೆ ಚರ್ಚೆಗೆ ಒತ್ತಾಯಿಸಿ, ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿದರು.

ಈ ವಾಗ್ವಾದಿಂದ ಲೋಕಸಭೆಯ 100 ಮತ್ತು ರಾಜ್ಯಸಭೆಯ 46 ಪ್ರತಿಪಕ್ಷಗಳ ಸಂಸದರು ಅಶಿಸ್ತಿನ ಕಾರಣಕ್ಕಾಗಿ ಚಳಿಗಾಲ ಅಧಿವೇಶನದಿಂದ ಅಮಾನತುಗೊಂಡರು. ಒಬ್ರೇನ್ ಅಮಾನತುಗೊಂಡ ಮೊದಲ ರಾಜ್ಯಸಭಾ ಸಂಸದರಾಗಿದ್ದಾರೆ. ಅಮಾನತುಗೊಂಡ ನಂತರವೂ ಅವರು ಸದನದಲ್ಲಿ ಉಳಿದುಕೊಂಡಿದ್ದಕ್ಕಾಗಿ ಅವರ ವಿರುದ್ಧ ವಿಶೇಷ ಹಕ್ಕು ಉಲ್ಲಂಘನೆಯ ಪ್ರಸ್ತಾಪವನ್ನು ಸಹ ಮಾಡಿದ್ದಾರೆ. ಈ ವಿಷಯವನ್ನು ಸದನದ ವಿಶೇಷಾಧಿಕಾರ ಸಮಿತಿಗೆ ವಹಿಸಲಾಗಿದೆ.

ಸಂಸತ್ತಿನ ದಾಖಲೆಗಳ ಪ್ರಕಾರ, ಡಿಸೆಂಬರ್ 2001ರ ಸಂಸತ್ತಿನ ಮೇಲಿನ ದಾಳಿಯ ನಂತರ, ಉಭಯ ಸದನಗಳಲ್ಲಿ ಚರ್ಚೆ ನಡೆದಿದೆ. ಅಂದಿನ ಗೃಹ ಸಚಿವ ಎಲ್ಕೆ ಅಡ್ವಾಣಿ ಚರ್ಚೆಗೆ ಉತ್ತರ ನೀಡಿದ್ದರು. ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಉಭಯ ಸದನಗಳಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ; ಪೂಂಛ್‌ನಲ್ಲಿ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...