Homeಮುಖಪುಟವಕ್ಫ್ ಕರಡು ಮಸೂದೆ ಅಂಗೀಕರಿಸಿದ ಜಂಟಿ ಸಂಸದೀಯ ಸಮಿತಿ : ಸದಸ್ಯರು ಭಿನ್ನಾಭಿಪ್ರಾಯ ತಿಳಿಸಲು ಅವಕಾಶ

ವಕ್ಫ್ ಕರಡು ಮಸೂದೆ ಅಂಗೀಕರಿಸಿದ ಜಂಟಿ ಸಂಸದೀಯ ಸಮಿತಿ : ಸದಸ್ಯರು ಭಿನ್ನಾಭಿಪ್ರಾಯ ತಿಳಿಸಲು ಅವಕಾಶ

- Advertisement -
- Advertisement -

ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಕ್ಫ್ (ತಿದ್ದುಪಡಿ) ಮಸೂದೆಯ ಕರಡು ವರದಿ ಮತ್ತು ಪ್ರಸ್ತಾವಿತ ಕಾನೂನಿನ ತಿದ್ದುಪಡಿ ಮಾಡಿದ ಆವೃತ್ತಿಯನ್ನು ಬಹುಮತದಿಂದ ಅಂಗೀಕರಿಸಿದೆ ಎಂದು ಅಧ್ಯಕ್ಷ ಜಗದಾಂಬಿಕಾ ಪಾಲ್ ಬುಧವಾರ (ಜ.29) ತಿಳಿಸಿದ್ದಾರೆ.

ಸಮಿತಿಯ 16 ಸದಸ್ಯರು ಕರಡು ವರದಿಯ ಪರ ಮತ ಚಲಾಯಿಸಿದರೆ, 11 ಸದಸ್ಯರು ವಿರೋಧಿಸಿದ್ದಾರೆ ಎಂದು ಪಾಲ್ ಹೇಳಿದ್ದಾರೆ. ಸಂಸದೀಯ ಸಮಿತಿ ಸದಸ್ಯರಿಗೆ ತಮ್ಮ ಭಿನ್ನಾಭಿಪ್ರಾಯ ತಿಳಿಸಲು ಇಂದು ಸಂಜೆ 4 ಗಂಟೆಯವರೆಗೆ ಸಮಯ ನೀಡಲಾಗಿದೆ.

ಇಲ್ಲಿಯವರೆಗೆ, ತೃಣಮೂಲ ಕಾಂಗ್ರೆಸ್ ಸಂಸದರಾದ ಕಲ್ಯಾಣ್ ಬ್ಯಾನರ್ಜಿ ಮತ್ತು ನದಿಮುಲ್ ಹಕ್, ಡಿಎಂಕೆ ಸಂಸದ ಎ ರಾಜಾ, ಎಎಪಿ ನಾಯಕ ಸಂಜಯ್ ಸಿಂಗ್ ಮತ್ತು ಶಿವಸೇನೆ (ಯುಬಿಟಿ) ಸಂಸದ ಅರವಿಂದ್ ಸಾವಂತ್ ಅವರು ಔಪಚಾರಿಕವಾಗಿ ತಮ್ಮ ಭಿನ್ನಾಭಿಪ್ರಾಯವನ್ನು ಸಲ್ಲಿಸಿದ್ದಾರೆ.

ಅಂತಿಮ ವರದಿ ಪರಿಶೀಲಿಸಲು ತಮಗೆ ಕಡಿಮೆ ಸಮಯ ನೀಡಲಾಗಿದೆ ಎಂದು ಆರೋಪಿಸಿರುವ ವಿರೋಧ ಪಕ್ಷದ ಸದಸ್ಯರು, ಕರಡು ವರದಿ ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಟೀಕಿಸಿದ್ದಾರೆ.

ಇದು “ಪ್ರಜಾಪ್ರಭುತ್ವ ವಿರೋಧಿ” ನಡೆ ಎಂದಿರುವ ಶಿವಸೇನೆ (ಯುಬಿಟಿ) ಸಂಸದ ಅರವಿಂದ್ ಸಾವಂತ್, ಎಲ್ಲಾ ವಿರೋಧ ಪಕ್ಷದ ಸದಸ್ಯರು ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ಸಲ್ಲಿಸುತ್ತಾರೆ ಎಂದು ಹೇಳಿದ್ದಾರೆ.

ಜಗದಾಂಬಿಕಾ ಪಾಲ್ ಅವರು ಪರಿಷ್ಕೃತ ಮಸೂದೆಯನ್ನು ಗುರುವಾರ (ಜನವರಿ 30) ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸುವ ನಿರೀಕ್ಷೆಯಿದೆ.

ವಕ್ಫ್ (ತಿದ್ದುಪಡಿ) ಮಸೂದೆ- 2024 ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಮಂಡಿಸಿದ ನಂತರ, ಆಗಸ್ಟ್ 8, 2024 ರಂದು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲಾಗಿತ್ತು.

ವಕ್ಫ್ ಆಸ್ತಿಗಳನ್ನು ನಿಯಂತ್ರಿಸುವ ಮತ್ತು ನಿರ್ವಹಿಸುವಲ್ಲಿನ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಲು ಜಾರಿಗೆ ತಂದ 1995 ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಗುರಿಯನ್ನು ಈ ಮಸೂದೆ ಹೊಂದಿದೆ.

ಸೋಮವಾರ (ಜನವರಿ 27) ಸಂಸದೀಯ ಸಮಿತಿಯು ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಸದಸ್ಯರು ಪ್ರಸ್ತಾಪಿಸಿದ ಎಲ್ಲಾ ತಿದ್ದುಪಡಿಗಳನ್ನು ಅಂಗೀಕರಿಸಿದೆ ಮತ್ತು ವಿರೋಧ ಪಕ್ಷದ ಸದಸ್ಯರು ಸೂಚಿಸಿದ ಎಲ್ಲಾ ತಿದ್ದುಪಡಿಗಳನ್ನು ತಿರಸ್ಕರಿಸಿದೆ.

ಅನುಮೋದಿತ ತಿದ್ದುಪಡಿಗಳಲ್ಲಿ ವಕ್ಫ್‌ ಸಮಿತಿಯಲ್ಲಿ ಮುಸ್ಲಿಮೇತರ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವುದು ಒಂದು. ತಿದ್ದುಪಡಿಯ ಪ್ರಕಾರ, ವಕ್ಫ್‌ ಸಮಿತಿಗಳಲ್ಲಿ ಇಬ್ಬರು ಮುಸ್ಲಿಮೇತರರು ಸದಸ್ಯರಾಗಬಹುದು.

ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳ ಜೊತೆಗೆ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ವಕ್ಪ್‌ನ ಕೆಲ ಹುದ್ದೆಗಳಿಗೆ ನೇಮಿಸಲು ಅವಕಾಶ ನೀಡುವುದು ಮತ್ತು ವಕ್ಫ್ ನ್ಯಾಯಮಂಡಳಿಗಳ ಸದಸ್ಯರನ್ನು ಎರಡರಿಂದ ಮೂರಕ್ಕೆ ಹೆಚ್ಚಿಸುವುದು ತಿದ್ದುಪಡಿಗಳಲ್ಲಿ ಸೇರಿವೆ.

100ನೇ ರಾಕೆಟ್ ಯಶಸ್ವಿ ಉಡಾವಣೆ : ಇಸ್ರೋ ಹೊಸ ಮೈಲಿಗಲ್ಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....