Homeಮುಖಪುಟಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

- Advertisement -
- Advertisement -

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) ‘ಅನುಕರಣೀಯ’ ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ ನೀಡಬೇಕು ಎಂದು ಸಂಸದೀಯ ಸಮಿತಿ ಹೇಳಿದೆ.

ಈ ವಾರದ ಆರಂಭದಲ್ಲಿ ಕಾಂಗ್ರೆಸ್ ಸಂಸದ ದಿಗ್ವಿಜಯ ಸಿಂಗ್ ನೇತೃತ್ವದ ಸಮಿತಿಯು ಸಂಸತ್ತಿನಲ್ಲಿ ಮಂಡಿಸಿರುವ ವರದಿಯಲ್ಲಿ ಹೆಚ್‌ಐಎಎಲ್‌ಗೆ ಯುಜಿಸಿಯಿಂದ ಇನ್ನೂ ಮಾನ್ಯತೆ ನೀಡದಿರುವ ಬಗ್ಗೆ ತನ್ನ ಕಳವಳ ವ್ಯಕ್ತಪಡಿಸಿದೆ.

ಕೇಂದ್ರ ಶಿಕ್ಷಣ ಸಚಿವಾಲಯ ಹೆಚ್‌ಐಎಎಲ್‌ ಮಾದರಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಬೇಕು ಮತ್ತು ಶಿಕ್ಷಣದಲ್ಲಿ ನಾವೀನ್ಯತೆ ಕೇಂದ್ರಗಳು ಅಥವಾ ಇತರ ರೀತಿಯಲ್ಲಿ ಅದನ್ನು ಬೇರೆಡೆ ಹೇಗೆ ಪ್ರಯೋಗಿಸಬಹುದು ಎಂಬುದನ್ನು ಪರಿಗಣಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ವಾಂಗ್ಚುಕ್ ಅವರ ಸಂಸ್ಥೆಯ ಕುರಿತು ಅಧ್ಯಯನಕ್ಕೆ ಲಡಾಖ್‌ಗೆ ಭೇಟಿ ನೀಡಿದ ಸಮಿತಿ, ಹೆಚ್‌ಐಎಎಲ್‌ ನಡೆಸುತ್ತಿರುವ ಶೈಕ್ಷಣಿಕ, ಸಂಶೋಧನೆ ಮತ್ತು ಉದ್ಯಮಶೀಲತೆಯ ವ್ಯವಸ್ಥೆಗಳಿಂದ ಬಹಳ ಪ್ರಭಾವಿತಗೊಂಡಿದೆ. ವಿಶೇಷವಾಗಿ, ಸ್ಥಳೀಯ ಸಾಮಾಜಿಕ-ಸಾಂಸ್ಕೃತಿಕ ಮತ್ತು ಪರಿಸರ ವ್ಯವಸ್ಥೆಗಳಲ್ಲಿ ಬೇರೂರಿದ ಅನುಭವಾಧಾರಿತ ಶಿಕ್ಷಣ ಮತ್ತು ಕಲಿಕೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿರುವುದು ಸಮಿತಿಯನ್ನು ಆಕರ್ಷಿಸಿದೆ ಎಂದು ಶಿಕ್ಷಣ, ಮಹಿಳೆಯರು, ಮಕ್ಕಳು, ಯುವಕರು ಮತ್ತು ಕ್ರೀಡೆಗಳ ಸ್ಥಾಯಿ ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ.

ಯುಜಿಸಿ ಇನ್ನೂ ಹೆಚ್‌ಐಎಎಲ್‌ಗೆ ಮಾನ್ಯತೆ ನೀಡಿಲ್ಲ. ಈ ವಿಷಯ ಹಲವು ವರ್ಷಗಳಿಂದ ಬಾಕಿ ಇದೆ ಎಂದು ತಿಳಿದು ಸಮಿತಿ ಕಳವಳ ವ್ಯಕ್ತಪಡಿಸಿದೆ. ಹೆಚ್‌ಐಎಎಲ್ ಸ್ಥಳೀಯ ಸಮುದಾಯದ ಮೇಲೆ ಅಗಾಧ ಪರಿಣಾಮ ಬೀರಿದೆ ಮತ್ತು ಅದರ ಐಸ್ ಸ್ತೂಪಗಳು ಮತ್ತು ಇತರ ಸಮುದಾಯ ತೊಡಗಿಸಿಕೊಳ್ಳುವಿಕೆ ಚಟುವಟಿಕೆಗಳ ಮೂಲಕ ಅಂತಾರಾಷ್ಟ್ರೀಯ ಖ್ಯಾತಿಯನ್ನು ಗಳಿಸಿದೆ ಎಂದು ವರದಿ ಹೇಳಿದೆ.

ಅನುಭವದ ಮತ್ತು ಯೋಜನೆ ಆಧಾರಿತ ಕಲಿಕೆ, ಸಮುದಾಯದ ತೊಡಗಿಸಿಕೊಳ್ಳುವಿಕೆ ಮತ್ತು ಭಾರತೀಯ ಜ್ಞಾನ ವ್ಯವಸ್ಥೆಗಳ ಏಕೀಕರಣಕ್ಕೆ ಕರೆ ನೀಡುವ ಎನ್‌ಇಪಿ 2020ರ ಅನುಷ್ಠಾನದಲ್ಲಿ ಹೆಚ್‌ಐಎಎಲ್‌ ಅನುಕರಣೀಯವಾಗಿದೆ ಎಂದು ವರದಿ ತಿಳಿಸಿದೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಆರನೇ ಪರಿಚ್ಚೇದದ ಅಡಿ ಸೇರಿಸಬೇಕು ಎಂದು ಒತ್ತಾಯಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ನಾಲ್ವರು ಸಾವನ್ನಪ್ಪಿ 90 ಜನರು ಗಾಯಗೊಂಡ ಎರಡು ದಿನಗಳ ನಂತರ, ಅಂದರೆ ಸೆಪ್ಟೆಂಬರ್ 26 ರಂದು ವಾಂಗ್ಚುಕ್ ಅವರನ್ನು ಕಠಿಣ ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿದೆ. ಸರ್ಕಾರ ವಾಂಗ್ಚುಕ್ ವಿರುದ್ದ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪ ಹೊರಿಸಿದೆ.

ಲಡಾಖ್ ಆಡಳಿತವು ಹೆಚ್ಐಎಎಲ್‌ಗೆ ಭೂ ಹಂಚಿಕೆಯನ್ನು ರದ್ದುಗೊಳಿಸಿದೆ. ಕೇಂದ್ರ ಗೃಹ ಸಚಿವಾಲಯವು ಕಾನೂನು ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಂಸ್ಥೆಯ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ) ನೋಂದಣಿಯನ್ನು ರದ್ದುಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...