Homeಮುಖಪುಟಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

- Advertisement -
- Advertisement -

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) ‘ಅನುಕರಣೀಯ’ ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ ನೀಡಬೇಕು ಎಂದು ಸಂಸದೀಯ ಸಮಿತಿ ಹೇಳಿದೆ.

ಈ ವಾರದ ಆರಂಭದಲ್ಲಿ ಕಾಂಗ್ರೆಸ್ ಸಂಸದ ದಿಗ್ವಿಜಯ ಸಿಂಗ್ ನೇತೃತ್ವದ ಸಮಿತಿಯು ಸಂಸತ್ತಿನಲ್ಲಿ ಮಂಡಿಸಿರುವ ವರದಿಯಲ್ಲಿ ಹೆಚ್‌ಐಎಎಲ್‌ಗೆ ಯುಜಿಸಿಯಿಂದ ಇನ್ನೂ ಮಾನ್ಯತೆ ನೀಡದಿರುವ ಬಗ್ಗೆ ತನ್ನ ಕಳವಳ ವ್ಯಕ್ತಪಡಿಸಿದೆ.

ಕೇಂದ್ರ ಶಿಕ್ಷಣ ಸಚಿವಾಲಯ ಹೆಚ್‌ಐಎಎಲ್‌ ಮಾದರಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಬೇಕು ಮತ್ತು ಶಿಕ್ಷಣದಲ್ಲಿ ನಾವೀನ್ಯತೆ ಕೇಂದ್ರಗಳು ಅಥವಾ ಇತರ ರೀತಿಯಲ್ಲಿ ಅದನ್ನು ಬೇರೆಡೆ ಹೇಗೆ ಪ್ರಯೋಗಿಸಬಹುದು ಎಂಬುದನ್ನು ಪರಿಗಣಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ವಾಂಗ್ಚುಕ್ ಅವರ ಸಂಸ್ಥೆಯ ಕುರಿತು ಅಧ್ಯಯನಕ್ಕೆ ಲಡಾಖ್‌ಗೆ ಭೇಟಿ ನೀಡಿದ ಸಮಿತಿ, ಹೆಚ್‌ಐಎಎಲ್‌ ನಡೆಸುತ್ತಿರುವ ಶೈಕ್ಷಣಿಕ, ಸಂಶೋಧನೆ ಮತ್ತು ಉದ್ಯಮಶೀಲತೆಯ ವ್ಯವಸ್ಥೆಗಳಿಂದ ಬಹಳ ಪ್ರಭಾವಿತಗೊಂಡಿದೆ. ವಿಶೇಷವಾಗಿ, ಸ್ಥಳೀಯ ಸಾಮಾಜಿಕ-ಸಾಂಸ್ಕೃತಿಕ ಮತ್ತು ಪರಿಸರ ವ್ಯವಸ್ಥೆಗಳಲ್ಲಿ ಬೇರೂರಿದ ಅನುಭವಾಧಾರಿತ ಶಿಕ್ಷಣ ಮತ್ತು ಕಲಿಕೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿರುವುದು ಸಮಿತಿಯನ್ನು ಆಕರ್ಷಿಸಿದೆ ಎಂದು ಶಿಕ್ಷಣ, ಮಹಿಳೆಯರು, ಮಕ್ಕಳು, ಯುವಕರು ಮತ್ತು ಕ್ರೀಡೆಗಳ ಸ್ಥಾಯಿ ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ.

ಯುಜಿಸಿ ಇನ್ನೂ ಹೆಚ್‌ಐಎಎಲ್‌ಗೆ ಮಾನ್ಯತೆ ನೀಡಿಲ್ಲ. ಈ ವಿಷಯ ಹಲವು ವರ್ಷಗಳಿಂದ ಬಾಕಿ ಇದೆ ಎಂದು ತಿಳಿದು ಸಮಿತಿ ಕಳವಳ ವ್ಯಕ್ತಪಡಿಸಿದೆ. ಹೆಚ್‌ಐಎಎಲ್ ಸ್ಥಳೀಯ ಸಮುದಾಯದ ಮೇಲೆ ಅಗಾಧ ಪರಿಣಾಮ ಬೀರಿದೆ ಮತ್ತು ಅದರ ಐಸ್ ಸ್ತೂಪಗಳು ಮತ್ತು ಇತರ ಸಮುದಾಯ ತೊಡಗಿಸಿಕೊಳ್ಳುವಿಕೆ ಚಟುವಟಿಕೆಗಳ ಮೂಲಕ ಅಂತಾರಾಷ್ಟ್ರೀಯ ಖ್ಯಾತಿಯನ್ನು ಗಳಿಸಿದೆ ಎಂದು ವರದಿ ಹೇಳಿದೆ.

ಅನುಭವದ ಮತ್ತು ಯೋಜನೆ ಆಧಾರಿತ ಕಲಿಕೆ, ಸಮುದಾಯದ ತೊಡಗಿಸಿಕೊಳ್ಳುವಿಕೆ ಮತ್ತು ಭಾರತೀಯ ಜ್ಞಾನ ವ್ಯವಸ್ಥೆಗಳ ಏಕೀಕರಣಕ್ಕೆ ಕರೆ ನೀಡುವ ಎನ್‌ಇಪಿ 2020ರ ಅನುಷ್ಠಾನದಲ್ಲಿ ಹೆಚ್‌ಐಎಎಲ್‌ ಅನುಕರಣೀಯವಾಗಿದೆ ಎಂದು ವರದಿ ತಿಳಿಸಿದೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಆರನೇ ಪರಿಚ್ಚೇದದ ಅಡಿ ಸೇರಿಸಬೇಕು ಎಂದು ಒತ್ತಾಯಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ನಾಲ್ವರು ಸಾವನ್ನಪ್ಪಿ 90 ಜನರು ಗಾಯಗೊಂಡ ಎರಡು ದಿನಗಳ ನಂತರ, ಅಂದರೆ ಸೆಪ್ಟೆಂಬರ್ 26 ರಂದು ವಾಂಗ್ಚುಕ್ ಅವರನ್ನು ಕಠಿಣ ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿದೆ. ಸರ್ಕಾರ ವಾಂಗ್ಚುಕ್ ವಿರುದ್ದ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪ ಹೊರಿಸಿದೆ.

ಲಡಾಖ್ ಆಡಳಿತವು ಹೆಚ್ಐಎಎಲ್‌ಗೆ ಭೂ ಹಂಚಿಕೆಯನ್ನು ರದ್ದುಗೊಳಿಸಿದೆ. ಕೇಂದ್ರ ಗೃಹ ಸಚಿವಾಲಯವು ಕಾನೂನು ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಂಸ್ಥೆಯ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ) ನೋಂದಣಿಯನ್ನು ರದ್ದುಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...