Homeಮುಖಪುಟಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

- Advertisement -
- Advertisement -

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) ‘ಅನುಕರಣೀಯ’ ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ ನೀಡಬೇಕು ಎಂದು ಸಂಸದೀಯ ಸಮಿತಿ ಹೇಳಿದೆ.

ಈ ವಾರದ ಆರಂಭದಲ್ಲಿ ಕಾಂಗ್ರೆಸ್ ಸಂಸದ ದಿಗ್ವಿಜಯ ಸಿಂಗ್ ನೇತೃತ್ವದ ಸಮಿತಿಯು ಸಂಸತ್ತಿನಲ್ಲಿ ಮಂಡಿಸಿರುವ ವರದಿಯಲ್ಲಿ ಹೆಚ್‌ಐಎಎಲ್‌ಗೆ ಯುಜಿಸಿಯಿಂದ ಇನ್ನೂ ಮಾನ್ಯತೆ ನೀಡದಿರುವ ಬಗ್ಗೆ ತನ್ನ ಕಳವಳ ವ್ಯಕ್ತಪಡಿಸಿದೆ.

ಕೇಂದ್ರ ಶಿಕ್ಷಣ ಸಚಿವಾಲಯ ಹೆಚ್‌ಐಎಎಲ್‌ ಮಾದರಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಬೇಕು ಮತ್ತು ಶಿಕ್ಷಣದಲ್ಲಿ ನಾವೀನ್ಯತೆ ಕೇಂದ್ರಗಳು ಅಥವಾ ಇತರ ರೀತಿಯಲ್ಲಿ ಅದನ್ನು ಬೇರೆಡೆ ಹೇಗೆ ಪ್ರಯೋಗಿಸಬಹುದು ಎಂಬುದನ್ನು ಪರಿಗಣಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ವಾಂಗ್ಚುಕ್ ಅವರ ಸಂಸ್ಥೆಯ ಕುರಿತು ಅಧ್ಯಯನಕ್ಕೆ ಲಡಾಖ್‌ಗೆ ಭೇಟಿ ನೀಡಿದ ಸಮಿತಿ, ಹೆಚ್‌ಐಎಎಲ್‌ ನಡೆಸುತ್ತಿರುವ ಶೈಕ್ಷಣಿಕ, ಸಂಶೋಧನೆ ಮತ್ತು ಉದ್ಯಮಶೀಲತೆಯ ವ್ಯವಸ್ಥೆಗಳಿಂದ ಬಹಳ ಪ್ರಭಾವಿತಗೊಂಡಿದೆ. ವಿಶೇಷವಾಗಿ, ಸ್ಥಳೀಯ ಸಾಮಾಜಿಕ-ಸಾಂಸ್ಕೃತಿಕ ಮತ್ತು ಪರಿಸರ ವ್ಯವಸ್ಥೆಗಳಲ್ಲಿ ಬೇರೂರಿದ ಅನುಭವಾಧಾರಿತ ಶಿಕ್ಷಣ ಮತ್ತು ಕಲಿಕೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿರುವುದು ಸಮಿತಿಯನ್ನು ಆಕರ್ಷಿಸಿದೆ ಎಂದು ಶಿಕ್ಷಣ, ಮಹಿಳೆಯರು, ಮಕ್ಕಳು, ಯುವಕರು ಮತ್ತು ಕ್ರೀಡೆಗಳ ಸ್ಥಾಯಿ ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ.

ಯುಜಿಸಿ ಇನ್ನೂ ಹೆಚ್‌ಐಎಎಲ್‌ಗೆ ಮಾನ್ಯತೆ ನೀಡಿಲ್ಲ. ಈ ವಿಷಯ ಹಲವು ವರ್ಷಗಳಿಂದ ಬಾಕಿ ಇದೆ ಎಂದು ತಿಳಿದು ಸಮಿತಿ ಕಳವಳ ವ್ಯಕ್ತಪಡಿಸಿದೆ. ಹೆಚ್‌ಐಎಎಲ್ ಸ್ಥಳೀಯ ಸಮುದಾಯದ ಮೇಲೆ ಅಗಾಧ ಪರಿಣಾಮ ಬೀರಿದೆ ಮತ್ತು ಅದರ ಐಸ್ ಸ್ತೂಪಗಳು ಮತ್ತು ಇತರ ಸಮುದಾಯ ತೊಡಗಿಸಿಕೊಳ್ಳುವಿಕೆ ಚಟುವಟಿಕೆಗಳ ಮೂಲಕ ಅಂತಾರಾಷ್ಟ್ರೀಯ ಖ್ಯಾತಿಯನ್ನು ಗಳಿಸಿದೆ ಎಂದು ವರದಿ ಹೇಳಿದೆ.

ಅನುಭವದ ಮತ್ತು ಯೋಜನೆ ಆಧಾರಿತ ಕಲಿಕೆ, ಸಮುದಾಯದ ತೊಡಗಿಸಿಕೊಳ್ಳುವಿಕೆ ಮತ್ತು ಭಾರತೀಯ ಜ್ಞಾನ ವ್ಯವಸ್ಥೆಗಳ ಏಕೀಕರಣಕ್ಕೆ ಕರೆ ನೀಡುವ ಎನ್‌ಇಪಿ 2020ರ ಅನುಷ್ಠಾನದಲ್ಲಿ ಹೆಚ್‌ಐಎಎಲ್‌ ಅನುಕರಣೀಯವಾಗಿದೆ ಎಂದು ವರದಿ ತಿಳಿಸಿದೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಆರನೇ ಪರಿಚ್ಚೇದದ ಅಡಿ ಸೇರಿಸಬೇಕು ಎಂದು ಒತ್ತಾಯಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ನಾಲ್ವರು ಸಾವನ್ನಪ್ಪಿ 90 ಜನರು ಗಾಯಗೊಂಡ ಎರಡು ದಿನಗಳ ನಂತರ, ಅಂದರೆ ಸೆಪ್ಟೆಂಬರ್ 26 ರಂದು ವಾಂಗ್ಚುಕ್ ಅವರನ್ನು ಕಠಿಣ ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿದೆ. ಸರ್ಕಾರ ವಾಂಗ್ಚುಕ್ ವಿರುದ್ದ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪ ಹೊರಿಸಿದೆ.

ಲಡಾಖ್ ಆಡಳಿತವು ಹೆಚ್ಐಎಎಲ್‌ಗೆ ಭೂ ಹಂಚಿಕೆಯನ್ನು ರದ್ದುಗೊಳಿಸಿದೆ. ಕೇಂದ್ರ ಗೃಹ ಸಚಿವಾಲಯವು ಕಾನೂನು ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಂಸ್ಥೆಯ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ) ನೋಂದಣಿಯನ್ನು ರದ್ದುಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...