Homeಮುಖಪುಟಸಂಸತ್‌ನಲ್ಲಿ ಪ್ರತಿಧ್ವನಿಸಿದ ಅದಾನಿ ಹಗರಣ, ಸಂಭಾಲ್ ಹಿಂಸಾಚಾರ : ಉಭಯ ಸದನಗಳ ಕಲಾಪ ಮುಂದೂಡಿಕೆ

ಸಂಸತ್‌ನಲ್ಲಿ ಪ್ರತಿಧ್ವನಿಸಿದ ಅದಾನಿ ಹಗರಣ, ಸಂಭಾಲ್ ಹಿಂಸಾಚಾರ : ಉಭಯ ಸದನಗಳ ಕಲಾಪ ಮುಂದೂಡಿಕೆ

- Advertisement -
- Advertisement -

ಅದಾನಿ ಲಂಚ-ವಂಚನೆ ಪ್ರಕರಣ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ವಿಷಯಗಳ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆ ಹಿನ್ನೆಲೆ, ಸಂಸತ್ತಿನ ಉಭಯ ಸದನಗಳ ಕಲಾಪಗಳು ಮುಂದೂಡಲಾಗಿದೆ.

ಇಂದು (ನ.27) ಲೋಕಸಭೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ವಿವಿಧ ವಿಷಯಗಳ ಚರ್ಚೆಗೆ ಒತ್ತಾಯಿಸಿದರು. ಸದನದ ಬಾವಿಗಿಳಿದು ಪ್ರತಿಭಟಿಸಿದರು. ಈ ಹಿನ್ನೆಲೆ ಸ್ಪೀಕರ್ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು. ಬಳಿಕ ಪುನರಾರಂಭಗೊಂಡಾಗ ಪ್ರತಿಪಕ್ಷ ಸದಸ್ಯರು ಪ್ರತಿಭಟನೆ ಮುಂದುವರೆಸಿದರು. ಈ ಹಿನ್ನೆಲೆ ಸ್ಪೀಕರ್ ಕಲಾಪವನ್ನು ನಾಳೆಗೆ ಮುಂದೂಡಿದರು.

ಪ್ರತಿ ಸದಸ್ಯರ ಪ್ರತಿಭಟನೆ ವೇಳೆ, ಸ್ಪೀಕರ್ ಓಂ ಬಿರ್ಲಾ ಅವರು ಪ್ರಶ್ನೋತ್ತರ ಅವಧಿಗೆ ಅವಕಾಶ ಕೊಡಿ. ನಂತರ ಪ್ರಸಕ್ತ ವಿಷಯಗಳ ಬಗ್ಗೆ ಚರ್ಚೆ ನಡೆಸಬಹುದು ಎಂದರು. ಆದರೆ, ಪ್ರತಿಪಕ್ಷ ಸದಸ್ಯರು ಮೊದಲು ಚರ್ಚೆಗೆ ಪಟ್ಟು ಹಿಡಿದರು. ಗದ್ದಲದ ನಡುವೆ ಒಂದು ಪ್ರಶ್ನೆಯನ್ನು ಕೇಳಲಾಯಿತು. ಸುಮಾರು 6 ನಿಮಿಷಗಳ ಕಲಾಪದ ಬಳಿಕ, ಸದನವನ್ನು ಮುಂದೂಡಲಾಯಿತು.

ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ

ಪ್ರತಿಪಕ್ಷಗಳ ಸದಸ್ಯರು ಲೋಕಸಭೆಯಲ್ಲಿ ಎತ್ತಿದ ಪ್ರಶ್ನೆಗಳನ್ನೇ ರಾಜ್ಯಸಭೆಯಲ್ಲೂ ಪ್ರಸ್ತಾಪಿಸಿ ಚರ್ಚೆಗೆ ಪಟ್ಟು ಹಿಡಿದವು. ಈ ಹಿನ್ನೆಲೆ ಆರಂಭದಲ್ಲಿ ಬೆಳಿಗ್ಗೆ 11.30ರವರೆಗೆ ಕಲಾಪ ಮುಂದೂಡಲಾಯಿತು. ಕಲಾಪ ಪುನರಾರಂಭಗೊಂಡಾಗ ಪ್ರತಿಪಕ್ಷ ಸದಸ್ಯರು ಮತ್ತೆ ಪ್ರತಿಭಟಿಸಿದರು. ಈ ಹಿನ್ನೆಲೆ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಕಲಾಪವನ್ನು ನಾಳೆಗೆ (ನ.28) ಮುಂದೂಡಿದರು.

ಕಲಾಪ ಆರಂಭಗೊಂಡಾಗ, ಪಟ್ಟಿ ಮಾಡಲಾದ ವಿಷಯಗಳನ್ನು ಸದನದಲ್ಲಿ ಮಂಡಿಸಿದ ಕೂಡಲೇ, ಅಧ್ಯಕ್ಷ ಜಗದೀಪ್ ಧನ್ಕರ್ ಅವರು, ನಿಗದಿತ ಚರ್ಚೆಗಳನ್ನು ನಿಲ್ಲಿಸಿ ಅದಾನಿ ಸಮೂಹ, ಸಂಭಾಲ್‌ ಹಿಂಸಾಚಾರ ಮತ್ತು ದೆಹಲಿಯಲ್ಲಿ ಹೆಚ್ಚುತ್ತಿರುವ ಅಪರಾಧ ಘಟನೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸುವಂತೆ ಕೋರಿ ನಿಯಮ 267 ರ ಅಡಿಯಲ್ಲಿ 18 ನೋಟಿಸ್‌ಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು.

ಆದರೆ, ಅವರು ನೋಟಿಸ್‌ಗಳನ್ನು ಸ್ವೀಕರಿಸಲಿಲ್ಲ. ಇದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಗೆ ಕಾರಣವಾಯಿತು. ನಂತರ ಸಭಾಪತಿ ಕಲಾಪವನ್ನು ಮುಂದೂಡಿದರು.

ಇದನ್ನೂ ಓದಿ | ಮಣಿಪುರ: ನ.16ರಿಂದ ಪ್ರಾರಂಭವಾಗದ ಶಾಲಾ-ಕಾಲೇಜುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...