Homeಮುಖಪುಟಸಂಸತ್ ಕಲಾಪ | ಲೋಕಸಭೆಯಲ್ಲಿ ಡಿಎಂಕೆ ಪ್ರತಿಭಟನೆ, ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷ ಸದಸ್ಯರು

ಸಂಸತ್ ಕಲಾಪ | ಲೋಕಸಭೆಯಲ್ಲಿ ಡಿಎಂಕೆ ಪ್ರತಿಭಟನೆ, ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷ ಸದಸ್ಯರು

- Advertisement -
- Advertisement -

ಇಂದು (ಮಾ.10) ಪುನರಾರಂಭಗೊಂಡಿರುವ ಸಂಸತ್ತಿನ ಉಭಯ ಸದನಗಳ ಕಲಾಪಗಳಲ್ಲೂ ಗದ್ದಲ ಉಂಟಾಗಿದೆ.

ಲೋಕಸಭೆಯಲ್ಲಿ ಪ್ರತಿಪಕ್ಷದ ಡಿಎಂಕೆ ಸದಸ್ಯರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ದ ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಕಲಾಪವನ್ನು 30 ನಿಮಿಷಗಳ ಕಾಲ ಮುಂದೂಡಲಾಯಿತು.

ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನ್ “ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ಸ್ಥಳೀಯ ಸಂಸ್ಥೆಗಳು ನಿರ್ವಹಿಸುವ ಶಾಲೆಗಳನ್ನು ಬಲಪಡಿಸುವ ಕೇಂದ್ರ ಪ್ರಾಯೋಜಿತ ಯೋಜನೆಯಾದ ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂ ಶ್ರೀ) ಅನುಷ್ಠಾನಗೊಳಿಸುವ ಸಂಬಂಧ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ತನ್ನ ನಿಲುವನ್ನು ಬದಲಾಯಿಸಿದೆ. ಈ ಮೂಲಕ ಅಪ್ರಾಮಾಣಿಕರಾದ ಅವರು ತಮಿಳುನಾಡಿನ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ರಾಜಕೀಯ ಮಾಡುತ್ತಿದ್ದಾರೆ” ಎಂದು ಹೇಳಿದರು.

“ತಮಿಳುನಾಡು ಸರ್ಕಾರ ಆರಂಭದಲ್ಲಿ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಕೊಂಡಿತ್ತು. ಆದರೆ ಈಗ ಅವರು ನಿಲುವನ್ನು ಬದಲಾಯಿಸಿದ್ದಾರೆ. ಕರ್ನಾಟಕ, ಹಿಮಾಚಲ ಪ್ರದೇಶ ಸೇರಿದಂತೆ ಹಲವು ಬಿಜೆಪಿ ಆಡಳಿತವಿಲ್ಲದ ರಾಜ್ಯಗಳು ಕೂಡ ಒಪ್ಪಂದಕ್ಕೆ ಸಹಿ ಹಾಕಿವೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಜಾರಿಗೆ ತರುವ ಬಗ್ಗೆ ಸಂಬಂಧಪಟ್ಟ ತಮಿಳುನಾಡು ಕೇಂದ್ರ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಬೇಕು” ಎಂದರು.

ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಡಿಎಂಕೆ ಸದಸ್ಯರು, “ಸದನದ ಬಾವಿಗಿಳಿದು ಪ್ರತಿಭಟಿಸಿದರು. ಈ ವೇಳೆ ಸ್ಪೀಕರ್ ಓಂ ಬಿರ್ಲಾ, ಸಂಸದರು ತಮ್ಮ ಆಸನದಲ್ಲಿ ಕುಳಿತು ಕಲಾಪ ಸುಸೂತ್ರವಾಗಿ ನಡೆಯಲು ಅನುವು ಮಾಡಿಕೊಡುವಂತೆ ಮನವಿ ಮಾಡಿದರು.

ರಾಜ್ಯಸಭೆಯಿಂದ ಹೊರ ನಡೆದ ಸದಸ್ಯರು

ಮತದಾರರ ಚೀಟಿಯ ಅಕ್ರಮ, ಅಮೆರಿಕ ಹೆಚ್ಚುವರಿ ಸುಂಕ ವಿಧಿಸಿರುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸುವಂತೆ ಕೋರಿ ನೀಡಿದ್ದ ನೋಟಿಸ್ ಅನ್ನು ಉಪ ಸಭಾಪತಿ ತಿರಸ್ಕರಿಸಿದ ಹಿನ್ನೆಲೆ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷ ಸದಸ್ಯರು ರಾಜ್ಯಸಭೆಯಿಂದ ಹೊರ ನಡೆದರು.

ತುರ್ತು ವಿಷಯಗಳ ಕುರಿತು ಚರ್ಚೆ ನಡೆಸಲು ದಿನದ ವ್ಯವಹಾರವನ್ನು ಬದಿಗಿಡುವಂತೆ ಕೋರಿ ನಿಯಮ 267ರ ಅಡಿಯಲ್ಲಿ ನೀಡಿರುವ ನೋಟಿಸ್‌ಗಳನ್ನು ತಿರಸ್ಕರಿಸಲಾಗಿದೆ ಎಂದು ಸದನದ ಉಪ ಸಭಾಪತಿ ಹರಿವಂಶ್ ಹೇಳಿದ ನಂತರ, ವಿರೋಧ ಪಕ್ಷದ ಸಂಸದರು ಘೋಷಣೆಗಳನ್ನು ಕೂಗಿದರು.

ಈ ವೇಳೆ, “ಸರ್ಕಾರ ಎಲ್ಲಾ ವಿಷಯಗಳ ಕುರಿತು ಚರ್ಚೆಗೆ ಸಿದ್ದವಿದೆ” ಎಂದು ಸಚಿವ ಜೆ.ಪಿ ನಡ್ಡಾ ಪ್ರತಿಪಕ್ಷ ಸದಸ್ಯರಿಗೆ ಹೇಳಿದರು.

ವಿಧಾನಸಭೆ, ಸಂಸತ್ತಿನ ಅಧಿವೇಶನಗಳು ಪುನರಾರಂಭ : ಬಜೆಟ್ ಮೇಲೆ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಮಹಿಳೆಯರಿಗಷ್ಟೇ ಏಕೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...