Homeಕರ್ನಾಟಕ'ತಮ್ಮದೇ ಬೆತ್ತಲೆ ಜಗತ್ತಿನಲ್ಲಿ ತಾನೇ ಬೆತ್ತಲಾಗಿ ನಿಂತಿದ್ದಾರೆ..'; ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಕಿಡಿ

‘ತಮ್ಮದೇ ಬೆತ್ತಲೆ ಜಗತ್ತಿನಲ್ಲಿ ತಾನೇ ಬೆತ್ತಲಾಗಿ ನಿಂತಿದ್ದಾರೆ..’; ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಕಿಡಿ

- Advertisement -
- Advertisement -

ಸಂಸತ್ತಿನ ಬಿಗಿ ಭದ್ರತೆ ಉಲ್ಲಂಘಿಸಿ ಲೋಕಸಭೆ ಪ್ರವೇಶಿಸಿದ್ದವರಿಗೆ ಪ್ರವೇಶ ಪಾಸ್ ನೀಡಿದ್ದನ್ನು ಸಮರ್ಥಿಸಿಕೊಂಡಿದ್ದ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆಗೆ ತಿರುಗೇಟು ಕೊಟ್ಟಿರುವ ರಾಜ್ಯ ಕಾಂಗ್ರೆಸ್, ‘ದೇವರಿಗೆ ಗೊತ್ತಿದೆ, ದಿಂಡರಿಗೆ ಗೊತ್ತಿದೆ ಎನ್ನುವುದಾರೆ ಸಂಸತ್ ಇರುವುದೇಕೆ? ಸಂಸತ್ ದಾಳಿಕೋರರಿಗೆ 3 ಬಾರಿ ಪಾಸ್ ನೀಡಿದ್ದೇಕೆ? ಪತ್ರಕರ್ತರಿಗೆ ಉತ್ತರ ನೀಡಲಾಗದೆ ತಮ್ಮದೇ ಬೆತ್ತಲೆ ಜಗತ್ತಿನಲ್ಲಿ ತಾನೇ ಬೆತ್ತಲಾಗಿ ನಿಂತಿದ್ದಾರೆ’ ಎಂದು ವಾಗ್ದಾಳಿ ನಡೆಸಿದೆ.

ಈ ಕುರಿತು ‘ಎಕ್ಸ್’ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ‘ಬ್ಯಾರಿಕೆಡ್ ವೀರ ಪ್ರತಾಪ್ ಸಿಂಹ ಅವರೇ, ಅಕ್ರಮಗಳನ್ನೆಸಗಿ ದೇವರ ಹೆಸರಲ್ಲಿ ಇನ್ನೆಷ್ಟು ದಿನ ರಕ್ಷಣೆ ಪಡೆಯುತ್ತೀರಿ? ತಾವು ಹೊಣೆಗಾರಿಕೆಯ ಸ್ಥಾನ ಹೊಂದಿರುವ ಸಂಸತ್ ಸದಸ್ಯ, ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸತ್ತಿಗೆ ಪರಮೋಚ್ಚ ಸ್ಥಾನವಿದೆ. ಅಂತಹ ಸಂಸತ್ತಿನಲ್ಲಿ ಮಾಡಿದ ತಪ್ಪಿನ ಬಗ್ಗೆ ಹೇಳಿಕೆ ನೀಡುವುದು ಸಂಸತ್ ಸದಸ್ಯನ ಕರ್ತವ್ಯ. ಅದನ್ನು ಬಿಟ್ಟು ದೇವರಿಗೆ ಗೊತ್ತಿದೆ, ದಿಂಡರಿಗೆ ಗೊತ್ತಿದೆ ಎನ್ನುವುದಾರೆ ಸಂಸತ್ ಇರುವುದೇಕೆ? ತನಿಖಾ ಸಂಸ್ಥೆಗಳೇಕೆ’ ಎಂದು ಬಿಜೆಪಿ ಸಂಸದರ ವಿರುದ್ಧ ಕಿಡಿಕಾರಿದೆ.

‘ಸಂಸತ್ತಿನಲ್ಲಿ ಉತ್ತರಿಸುವುದೆಂದರೆ ಈ ದೇಶದ ಹಾಗೂ ತಮ್ಮ ಕ್ಷೇತ್ರದ ಜನತೆಗೆ ಉತ್ತರಿಸಿದಂತೆ ಎಂಬ ಮಿನಿಮಮ್ ಕಾಮನ್ ಸೆನ್ಸ್ ಇಲ್ಲದ ವ್ಯಕ್ತಿ ಸಂಸತ್ ಸದಸ್ಯನಾಗಿದ್ದು ದುರಂತ, ಮೈಸೂರು, ಕೊಡಗಿನ ಜನತೆ ಇನ್ನೊಮ್ಮೆ ಆ ದುರಂತವನ್ನು ಮರುಕಳಿಸಲು ಬಿಡುವುದಿಲ್ಲ’ ಎಂದು ಕಾಂಗ್ರೆಸ್ ಟೀಕಿಸಿದೆ.

‘ಬೇರೆಯವರ ಬಗ್ಗೆ ಪುಂಖಾನುಪುಂಖವಾಗಿ ಬರೆದು ತಾನೊಬ್ಬ ಮಹಾನ್ ಬರಹಗಾರ ಎನ್ನುವ ಪ್ರತಾಪ್ ಸಿಂಹ ಇಂದು ಜನತೆಗೆ, ಪತ್ರಕರ್ತರಿಗೆ ಉತ್ತರ ನೀಡಲಾಗದೆ ತಮ್ಮದೇ ಬೆತ್ತಲೆ ಜಗತ್ತಿನಲ್ಲಿ ತಾನೇ ಬೆತ್ತಲಾಗಿ ನಿಂತಿದ್ದಾರೆ! ಇತರರ ಬಗ್ಗೆ ತಮ್ಮ ಕೊಳಕು ನಾಲಿಗೆಯನ್ನು ಝಳಪಿಸುವ ಪ್ರತಾಪ್ ಸಿಂಹ ಸಂಸತ್ ದಾಳಿಯ ಬಗ್ಗೆ ಮಾತನಾಡುವಾಗ ಅವರ ನಾಲಿಗೆ ಬಿದ್ದುಹೋಗಿದ್ದೇಕೆ’ ಎಂದಿದೆ.

‘ಜನತೆಗೆ ಉತ್ತರಿಸಬೇಕಾದ ಪ್ರಶ್ನೆಗಳು ಇಷ್ಟೇ, ಸಂಸತ್ ದಾಳಿಕೋರರಿಗೆ 3 ಬಾರಿ ಪಾಸ್ ನೀಡಿದ್ದೇಕೆ? ದಾಳಿಕೋರರಿಗೂ ಪ್ರತಾಪ್ ಸಿಂಹರಿಗೂ ಇರುವ ಸಂಬಂಧವೇನು? ಪಾಸ್ ನೀಡಿದವರ ಬಗ್ಗೆ ತನಿಖೆ ಮಾಡುತ್ತಿಲ್ಲವೇಕೆ? ಮಿಸ್ಟರ್ ಪಲಾಯನವಾದಿ ಪ್ರತಾಪ್ ಸಿಂಹ, ಈ ಪ್ರಶ್ನೆಗಳಿಗೆ ಉತ್ತರಿಸಿ ನಿಮ್ಮ ಪ್ರತಾಪ ತೋರಿಸಿ’ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

ಇದನ್ನೂ ಓದಿ; ನಾನು ದೇಶದ್ರೋಹಿಯೋ, ದೇಶಪ್ರೇಮಿಯೋ ಎಂಬುದನ್ನು ಜನರೆ ನಿರ್ಧರಿಸುತ್ತಾರೆ: ಪ್ರತಾಪ್ ಸಿಂಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...