Homeಕರ್ನಾಟಕ'ತಮ್ಮದೇ ಬೆತ್ತಲೆ ಜಗತ್ತಿನಲ್ಲಿ ತಾನೇ ಬೆತ್ತಲಾಗಿ ನಿಂತಿದ್ದಾರೆ..'; ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಕಿಡಿ

‘ತಮ್ಮದೇ ಬೆತ್ತಲೆ ಜಗತ್ತಿನಲ್ಲಿ ತಾನೇ ಬೆತ್ತಲಾಗಿ ನಿಂತಿದ್ದಾರೆ..’; ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಕಿಡಿ

- Advertisement -
- Advertisement -

ಸಂಸತ್ತಿನ ಬಿಗಿ ಭದ್ರತೆ ಉಲ್ಲಂಘಿಸಿ ಲೋಕಸಭೆ ಪ್ರವೇಶಿಸಿದ್ದವರಿಗೆ ಪ್ರವೇಶ ಪಾಸ್ ನೀಡಿದ್ದನ್ನು ಸಮರ್ಥಿಸಿಕೊಂಡಿದ್ದ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆಗೆ ತಿರುಗೇಟು ಕೊಟ್ಟಿರುವ ರಾಜ್ಯ ಕಾಂಗ್ರೆಸ್, ‘ದೇವರಿಗೆ ಗೊತ್ತಿದೆ, ದಿಂಡರಿಗೆ ಗೊತ್ತಿದೆ ಎನ್ನುವುದಾರೆ ಸಂಸತ್ ಇರುವುದೇಕೆ? ಸಂಸತ್ ದಾಳಿಕೋರರಿಗೆ 3 ಬಾರಿ ಪಾಸ್ ನೀಡಿದ್ದೇಕೆ? ಪತ್ರಕರ್ತರಿಗೆ ಉತ್ತರ ನೀಡಲಾಗದೆ ತಮ್ಮದೇ ಬೆತ್ತಲೆ ಜಗತ್ತಿನಲ್ಲಿ ತಾನೇ ಬೆತ್ತಲಾಗಿ ನಿಂತಿದ್ದಾರೆ’ ಎಂದು ವಾಗ್ದಾಳಿ ನಡೆಸಿದೆ.

ಈ ಕುರಿತು ‘ಎಕ್ಸ್’ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ‘ಬ್ಯಾರಿಕೆಡ್ ವೀರ ಪ್ರತಾಪ್ ಸಿಂಹ ಅವರೇ, ಅಕ್ರಮಗಳನ್ನೆಸಗಿ ದೇವರ ಹೆಸರಲ್ಲಿ ಇನ್ನೆಷ್ಟು ದಿನ ರಕ್ಷಣೆ ಪಡೆಯುತ್ತೀರಿ? ತಾವು ಹೊಣೆಗಾರಿಕೆಯ ಸ್ಥಾನ ಹೊಂದಿರುವ ಸಂಸತ್ ಸದಸ್ಯ, ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸತ್ತಿಗೆ ಪರಮೋಚ್ಚ ಸ್ಥಾನವಿದೆ. ಅಂತಹ ಸಂಸತ್ತಿನಲ್ಲಿ ಮಾಡಿದ ತಪ್ಪಿನ ಬಗ್ಗೆ ಹೇಳಿಕೆ ನೀಡುವುದು ಸಂಸತ್ ಸದಸ್ಯನ ಕರ್ತವ್ಯ. ಅದನ್ನು ಬಿಟ್ಟು ದೇವರಿಗೆ ಗೊತ್ತಿದೆ, ದಿಂಡರಿಗೆ ಗೊತ್ತಿದೆ ಎನ್ನುವುದಾರೆ ಸಂಸತ್ ಇರುವುದೇಕೆ? ತನಿಖಾ ಸಂಸ್ಥೆಗಳೇಕೆ’ ಎಂದು ಬಿಜೆಪಿ ಸಂಸದರ ವಿರುದ್ಧ ಕಿಡಿಕಾರಿದೆ.

‘ಸಂಸತ್ತಿನಲ್ಲಿ ಉತ್ತರಿಸುವುದೆಂದರೆ ಈ ದೇಶದ ಹಾಗೂ ತಮ್ಮ ಕ್ಷೇತ್ರದ ಜನತೆಗೆ ಉತ್ತರಿಸಿದಂತೆ ಎಂಬ ಮಿನಿಮಮ್ ಕಾಮನ್ ಸೆನ್ಸ್ ಇಲ್ಲದ ವ್ಯಕ್ತಿ ಸಂಸತ್ ಸದಸ್ಯನಾಗಿದ್ದು ದುರಂತ, ಮೈಸೂರು, ಕೊಡಗಿನ ಜನತೆ ಇನ್ನೊಮ್ಮೆ ಆ ದುರಂತವನ್ನು ಮರುಕಳಿಸಲು ಬಿಡುವುದಿಲ್ಲ’ ಎಂದು ಕಾಂಗ್ರೆಸ್ ಟೀಕಿಸಿದೆ.

‘ಬೇರೆಯವರ ಬಗ್ಗೆ ಪುಂಖಾನುಪುಂಖವಾಗಿ ಬರೆದು ತಾನೊಬ್ಬ ಮಹಾನ್ ಬರಹಗಾರ ಎನ್ನುವ ಪ್ರತಾಪ್ ಸಿಂಹ ಇಂದು ಜನತೆಗೆ, ಪತ್ರಕರ್ತರಿಗೆ ಉತ್ತರ ನೀಡಲಾಗದೆ ತಮ್ಮದೇ ಬೆತ್ತಲೆ ಜಗತ್ತಿನಲ್ಲಿ ತಾನೇ ಬೆತ್ತಲಾಗಿ ನಿಂತಿದ್ದಾರೆ! ಇತರರ ಬಗ್ಗೆ ತಮ್ಮ ಕೊಳಕು ನಾಲಿಗೆಯನ್ನು ಝಳಪಿಸುವ ಪ್ರತಾಪ್ ಸಿಂಹ ಸಂಸತ್ ದಾಳಿಯ ಬಗ್ಗೆ ಮಾತನಾಡುವಾಗ ಅವರ ನಾಲಿಗೆ ಬಿದ್ದುಹೋಗಿದ್ದೇಕೆ’ ಎಂದಿದೆ.

‘ಜನತೆಗೆ ಉತ್ತರಿಸಬೇಕಾದ ಪ್ರಶ್ನೆಗಳು ಇಷ್ಟೇ, ಸಂಸತ್ ದಾಳಿಕೋರರಿಗೆ 3 ಬಾರಿ ಪಾಸ್ ನೀಡಿದ್ದೇಕೆ? ದಾಳಿಕೋರರಿಗೂ ಪ್ರತಾಪ್ ಸಿಂಹರಿಗೂ ಇರುವ ಸಂಬಂಧವೇನು? ಪಾಸ್ ನೀಡಿದವರ ಬಗ್ಗೆ ತನಿಖೆ ಮಾಡುತ್ತಿಲ್ಲವೇಕೆ? ಮಿಸ್ಟರ್ ಪಲಾಯನವಾದಿ ಪ್ರತಾಪ್ ಸಿಂಹ, ಈ ಪ್ರಶ್ನೆಗಳಿಗೆ ಉತ್ತರಿಸಿ ನಿಮ್ಮ ಪ್ರತಾಪ ತೋರಿಸಿ’ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

ಇದನ್ನೂ ಓದಿ; ನಾನು ದೇಶದ್ರೋಹಿಯೋ, ದೇಶಪ್ರೇಮಿಯೋ ಎಂಬುದನ್ನು ಜನರೆ ನಿರ್ಧರಿಸುತ್ತಾರೆ: ಪ್ರತಾಪ್ ಸಿಂಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...