Homeಮುಖಪುಟಸಂಸತ್ತಿನ ಭದ್ರತಾ ಲೋಪಕ್ಕೆ ನಿರುದ್ಯೋಗವೇ ಕಾರಣ: ರಾಹುಲ್‌ ಗಾಂಧಿ

ಸಂಸತ್ತಿನ ಭದ್ರತಾ ಲೋಪಕ್ಕೆ ನಿರುದ್ಯೋಗವೇ ಕಾರಣ: ರಾಹುಲ್‌ ಗಾಂಧಿ

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೀತಿಯಿಂದಾಗಿ ಉದ್ಭವಿಸಿದ ನಿರುದ್ಯೋಗವೇ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದು, ಮೋದಿ ಮತ್ತು ಬಿಜೆಪಿ ಸರಕಾರದ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ಭಾರತೀಯರು  ಪ್ರಸ್ತುತ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ನಿರುದ್ಯೋಗ. ಪ್ರಧಾನಿ ನರೇಂದ್ರ ಮೋದಿಯವರ ನೀತಿಯಿಂದಾಗಿ ದೇಶದ ನಾಗರಿಕರಿಗೆ ಉದ್ಯೋಗ ಸಿಗುತ್ತಿಲ್ಲ. ನಿರುದ್ಯೋಗವೇ ಭದ್ರತಾ ಲೋಪ ಸಂಭವಿಸಲು ಕಾರಣ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭದ್ರತಾ ಉಲ್ಲಂಘನೆಯು ನಿಜವಾಗಿಯೂ ಸಂಭವಿಸಿದೆ. ಆದರೆ ಇದು ಏಕೆ ಸಂಭವಿಸಿತು? ಮುಖ್ಯ ವಿಷಯವೆಂದರೆ ನಿರುದ್ಯೋಗ. ಮೋದಿ ಜಿ ಅವರ ನೀತಿಗಳಿಂದಾಗಿ ಭಾರತದ ಜನರಿಗೆ ಉದ್ಯೋಗ ಸಿಗುತ್ತಿಲ್ಲ. ಪ್ರಧಾನಿಯವರ ನೀತಿಗಳಿಂದಾಗಿ ನಿರುದ್ಯೋಗ ಮತ್ತು ಹಣದುಬ್ಬರವು ಸಂಸತ್ತಿನ ಭದ್ರತಾ ಉಲ್ಲಂಘನೆಗೆ ಕಾರಣ ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಹರಡಿದ್ದಾರೆ. 2001ರ ಸಂಸತ್ ದಾಳಿಯ 22ನೇ ವಾರ್ಷಿಕದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಭದ್ರತೆಯನ್ನು ಉಲ್ಲಂಘಿಸಿದ ಇಬ್ಬರು ವ್ಯಕ್ತಿಗಳಿಗೆ ಸದನದೊಳಗೆ ಪ್ರವೇಶಿಸಲು ಸಂದರ್ಶಕರ ಪಾಸ್‌ಗಳನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ನೀಡಿದ್ದರು ಎನ್ನುವುದು ಬಯಲಾಗಿದೆ.

ಘಟನೆಗೆ ಸಂಬಂಧಿಸಿ ಲೋಕಸಭೆಯೊಳಗೆ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್, ಸಂಸತ್ತಿನ ಹೊರಗೆ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಲಲಿತ್ ಝಾನನ್ನು ಬಂಧಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಇಂಟೆಲಿಜೆನ್ಸ್ ತಂಡವು  ಮೈಸೂರಿನ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ಹೇಳಿಕೆಯನ್ನು ದಾಖಲಿಸಲು ಮುಂದಾಗಿದೆ. ಶುಕ್ರವಾರ ತಡರಾತ್ರಿ ತನಿಖಾಧಿಕಾರಿಗಳು ಆರೋಪಿಗಳನ್ನು ವಿವಿಧ ಸ್ಥಳಗಳಿಗೆ ಕರೆದೊಯ್ದು ಉಲ್ಲಂಘನೆಗೆ ಸಂಚು ರೂಪಿಸಿರುವ ಬಗ್ಗೆ ತನಿಖೆಯನ್ನು ನಡೆಸಿದ್ದಾರೆ.

ಇದಲ್ಲದೆ ಲಲಿತ್‌ ಝಾಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಮಹೇಶ್ ಕುಮ್ವತ್ ಮತ್ತು ಕೈಲಾಶ್ ಅವರಿಗೆ ತನಿಖಾಧಿಕಾರಿಗಳು ಕ್ಲೀನ್ ಚಿಟ್ ನೀಡಿಲ್ಲ. ಅವರ ಸಹಭಾಗಿತ್ವದ ಬಗ್ಗೆ ಕೂಡ ತನಿಖೆ ನಡೆಸುತ್ತಿದ್ದಾರೆ. ಬಂಧಿತ ಐವರು ಆರೋಪಿಗಳನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಇದನ್ನು ಓದಿ: ಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...