Homeಮುಖಪುಟಸಂಸತ್ತಿನ ಭದ್ರತಾ ಲೋಪಕ್ಕೆ ನಿರುದ್ಯೋಗವೇ ಕಾರಣ: ರಾಹುಲ್‌ ಗಾಂಧಿ

ಸಂಸತ್ತಿನ ಭದ್ರತಾ ಲೋಪಕ್ಕೆ ನಿರುದ್ಯೋಗವೇ ಕಾರಣ: ರಾಹುಲ್‌ ಗಾಂಧಿ

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೀತಿಯಿಂದಾಗಿ ಉದ್ಭವಿಸಿದ ನಿರುದ್ಯೋಗವೇ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದು, ಮೋದಿ ಮತ್ತು ಬಿಜೆಪಿ ಸರಕಾರದ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ಭಾರತೀಯರು  ಪ್ರಸ್ತುತ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ನಿರುದ್ಯೋಗ. ಪ್ರಧಾನಿ ನರೇಂದ್ರ ಮೋದಿಯವರ ನೀತಿಯಿಂದಾಗಿ ದೇಶದ ನಾಗರಿಕರಿಗೆ ಉದ್ಯೋಗ ಸಿಗುತ್ತಿಲ್ಲ. ನಿರುದ್ಯೋಗವೇ ಭದ್ರತಾ ಲೋಪ ಸಂಭವಿಸಲು ಕಾರಣ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭದ್ರತಾ ಉಲ್ಲಂಘನೆಯು ನಿಜವಾಗಿಯೂ ಸಂಭವಿಸಿದೆ. ಆದರೆ ಇದು ಏಕೆ ಸಂಭವಿಸಿತು? ಮುಖ್ಯ ವಿಷಯವೆಂದರೆ ನಿರುದ್ಯೋಗ. ಮೋದಿ ಜಿ ಅವರ ನೀತಿಗಳಿಂದಾಗಿ ಭಾರತದ ಜನರಿಗೆ ಉದ್ಯೋಗ ಸಿಗುತ್ತಿಲ್ಲ. ಪ್ರಧಾನಿಯವರ ನೀತಿಗಳಿಂದಾಗಿ ನಿರುದ್ಯೋಗ ಮತ್ತು ಹಣದುಬ್ಬರವು ಸಂಸತ್ತಿನ ಭದ್ರತಾ ಉಲ್ಲಂಘನೆಗೆ ಕಾರಣ ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಹರಡಿದ್ದಾರೆ. 2001ರ ಸಂಸತ್ ದಾಳಿಯ 22ನೇ ವಾರ್ಷಿಕದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಭದ್ರತೆಯನ್ನು ಉಲ್ಲಂಘಿಸಿದ ಇಬ್ಬರು ವ್ಯಕ್ತಿಗಳಿಗೆ ಸದನದೊಳಗೆ ಪ್ರವೇಶಿಸಲು ಸಂದರ್ಶಕರ ಪಾಸ್‌ಗಳನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ನೀಡಿದ್ದರು ಎನ್ನುವುದು ಬಯಲಾಗಿದೆ.

ಘಟನೆಗೆ ಸಂಬಂಧಿಸಿ ಲೋಕಸಭೆಯೊಳಗೆ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್, ಸಂಸತ್ತಿನ ಹೊರಗೆ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಲಲಿತ್ ಝಾನನ್ನು ಬಂಧಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಇಂಟೆಲಿಜೆನ್ಸ್ ತಂಡವು  ಮೈಸೂರಿನ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ಹೇಳಿಕೆಯನ್ನು ದಾಖಲಿಸಲು ಮುಂದಾಗಿದೆ. ಶುಕ್ರವಾರ ತಡರಾತ್ರಿ ತನಿಖಾಧಿಕಾರಿಗಳು ಆರೋಪಿಗಳನ್ನು ವಿವಿಧ ಸ್ಥಳಗಳಿಗೆ ಕರೆದೊಯ್ದು ಉಲ್ಲಂಘನೆಗೆ ಸಂಚು ರೂಪಿಸಿರುವ ಬಗ್ಗೆ ತನಿಖೆಯನ್ನು ನಡೆಸಿದ್ದಾರೆ.

ಇದಲ್ಲದೆ ಲಲಿತ್‌ ಝಾಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಮಹೇಶ್ ಕುಮ್ವತ್ ಮತ್ತು ಕೈಲಾಶ್ ಅವರಿಗೆ ತನಿಖಾಧಿಕಾರಿಗಳು ಕ್ಲೀನ್ ಚಿಟ್ ನೀಡಿಲ್ಲ. ಅವರ ಸಹಭಾಗಿತ್ವದ ಬಗ್ಗೆ ಕೂಡ ತನಿಖೆ ನಡೆಸುತ್ತಿದ್ದಾರೆ. ಬಂಧಿತ ಐವರು ಆರೋಪಿಗಳನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಇದನ್ನು ಓದಿ: ಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...