Homeಕರ್ನಾಟಕವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

ವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

- Advertisement -
- Advertisement -

ಕೇಂದ್ರ ಸರ್ಕಾರವು 2023ರ ಸೆಪ್ಟೆಂಬರ್ 18ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಘೋಷಿಸಿದೆ. ಈ ಅಧಿವೇಶನದ ಕಾರ್ಯಸೂಚಿಯನ್ನು ಬಹಿರಂಗಪಡಿಸಲು ಪ್ರತಿಪಕ್ಷಗಳು ಆಗ್ರಹಿಸಿದ್ದರೂ, ಕೇಂದ್ರ ಸರ್ಕಾರವು ಕಾರ್ಯಸೂಚಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆ ಬಹುತ್ವ ಕರ್ನಾಟಕ ಸಂಘಟನೆ ‘ಸಂಸತ್ತಿನ ವಿಶೇಷ ಅಧಿವೇಶನ- ಜನಸಾಮಾನ್ಯರ ಹಕ್ಕೊತ್ತಾಯ” ಬಿಡುಗಡೆ ಮಾಡಲು ಮುಂದಾಗಿದ್ದು, ಇದಕ್ಕೆ ಜನ ಸಾಮಾನ್ಯರಿಂದ ಅಭಿಪ್ರಾಯವನ್ನು ಕೇಳಿಕೊಂಡಿದೆ.

ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ನಿಮ್ಮ ಅನಿಸಿಕೆ, ಆಸೆಗಳನ್ನು ಕೆಳಗಿನ ಪ್ರಶ್ನಾವಳಿಗೆ ಉತ್ತರಿಸುವ ಮೂಲಕ ಅಭಿಪ್ರಾಯ ಕಳುಹಿಸಿಕೊಡಬೇಕೆಂದು ಈ ಸಂಘಟನೆ ಕೋರಿದೆ.

ಸಂಸತ್ತಿನ ಅಧಿವೇಶನಗಳು ಚುನಾಯಿತ ಸರ್ಕಾರದ ಅತ್ಯಂತ ನಿರ್ಣಾಯಕ ಸಾಂವಿಧಾನಿಕ ಪ್ರಕ್ರಿಯೆಗಳಲ್ಲಿ ಒಂದು. ಸಂಸತ್ತಿನ ಅಧಿವೇಶನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಂಸದರು, ಮಂತ್ರಿಗಳ ಕಾರ್ಯಕ್ಷಮತೆ ಬಗ್ಗೆ ಅಥವಾ ಪ್ರಮುಖ ವಿಷಯಗಳಲ್ಲಿ ಸರ್ಕಾರದ  ವೈಫಲ್ಯತೆ ಬಗ್ಗೆ ಪ್ರಶ್ನೆಗಳನ್ನು ಕೇಳಲು ಸಾಂವಿಧಾನಿಕ ಅವಕಾಶವಿದೆ.

ಆದರೆ ಸೆ.18ರ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಗೌಪ್ಯವಾಗಿರಿಸಿರುವುದು ಮಾತ್ರವಲ್ಲದೆ, ಪ್ರಶ್ನೋತ್ತರ ಅವಧಿ ಮತ್ತು ಶೂನ್ಯ ವೇಳೆಯಂತಹ ಪ್ರಮುಖ ಕಾರ್ಯವಿಧಾನಗಳನ್ನು ಕೂಡ ಸರ್ಕಾರ ಸ್ಥಗಿತಗೊಳಿಸಿದೆ. ಚುನಾಯಿತ ಸರ್ಕಾರದ ಹೊಣೆಗಾರಿಕೆಯನ್ನು ಪಡೆಯಲು ಸ್ಥಾಪಿಸಲಾದ ಸಂಸದೀಯ ಕಾರ್ಯವಿಧಾನಗಳನ್ನು ಈ ಸರ್ಕಾರವು ಅಮಾನತುಗೊಳಿಸಿರುವುದು ಆತಂಕದ ವಿಷಯ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ.

ಈ ವಿಶೇಷ ಅಧಿವೇಶನದಲ್ಲಿ ಜನಸಾಮಾನ್ಯರು ಎದುರಿಸುವ ಮುಖ್ಯ ಸಮಸ್ಯೆಗಳ ಬಗ್ಗೆ ಚರ್ಚಿಸುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸಕ್ರೀಯ ನಾಗರಿಕರಾದ ನಿಮ್ಮಿಂದ, ಈ ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ಅನಿಸಿಕೆ, ಆಸೆಗಳನ್ನು ನಮ್ಮೊಂದಿಗೆ ಕೆಳಗಿನ ಪ್ರಶ್ನಾವಳಿಯ ಮೂಲಕ ಹಂಚಿಕೊಳ್ಳಲು ಕೋರುತ್ತೇವೆ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ ಅಲ್ಲದೆ ಈ ಪ್ರಶ್ನಾವಳಿಗೆ ಉತ್ತರಿಸುವವರ ಹೆಸರು, ಇ-ಮೇಲ್, ವಿಳಾಸ, ಯಾವ ಮಾಹಿತಿಯನ್ನೂ ನಾವು ಸಂಗ್ರಹಿಸುವುದಿಲ್ಲ ಎಂದು ಸಂಘಟನೆ ಹೇಳಿದೆ.

ಪ್ರಶ್ನಾವಳಿಗಳು ಈ ಕೆಳಗಿನ ರೀತಿ ಇರಲಿದೆ..

ಈ ವಿಶೇಷ ಅಧಿವೇಶನದಲ್ಲಿ ಚರ್ಚಿಸಬೇಕೆಂದು ನೀವು ಭಾವಿಸುವ ಪ್ರಮುಖ 3 ವಿಷಯಗಳನ್ನು ಆಯ್ಕೆ ಮಾಡಿ  

ಮಣಿಪುರದಲ್ಲಿ 5 ತಿಂಗಳಿಗಿಂತಲೂ ಹೆಚ್ಚು ಕಾಲ ನಡೆಯುತ್ತಿರುವ ಹಿಂಸಾಚಾರ

ಭಾರತದ ವಿವಿಧ ಭಾಗಗಳಲ್ಲಿ ಪ್ರವಾಹ, ಬರ, ಹೀಟ್ ವೇವ್, ಇತರ ಹವಾಮಾನ ವೈಪರಿತ್ಯದಿಂದಾಗುತ್ತಿರುವ ಅಪಾಯಗಳು

ಮಹಿಳೆಯರ ವಿರುದ್ಧ ನಿರಂತರ ಅಪರಾಧಗಳು

ಹೆಚ್ಚುತ್ತಿರುವ ಅನೈತಿಕ ಪೊಲೀಸ್ ಗಿರಿ, ಗೂಂಡಾಗಿರಿ ಹಾಗೂ ಸರ್ಕಾರದಿಂದ ಜನರ ಮನೆ ಮೇಲೆ ಕಾನೂನು ಬಾಹಿರವಾಗಿ ಬುಲ್ಡೋಜರ್ ಬಳಕೆ

ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು

ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಹೆಚ್ಚುತ್ತಿರುವ ಬೆಲೆಗಳು

ನಿರುದ್ಯೋಗ ಮತ್ತು ಉದ್ಯೋಗ ಅಭದ್ರತೆಯ ಮುಂದುವರಿಯುತ್ತಿರುವ ಬಿಕ್ಕಟ್ಟು

ಅದಾನಿ ಕಂಪನಿಗಳ ಮೇಲಿನ ಭ್ರಷ್ಟಾಚಾರ, ಹಣಕಾಸಿನ ಅಕ್ರಮಗಳ ಆರೋಪಗಳು

ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು

ಈ ಪ್ರಶ್ನೆಗಳಿಗೆ ಉತ್ತರಿಸಿ

ನೀವು ಯಾವ ರಾಜ್ಯದಲ್ಲಿ ವಾಸಿಸುತ್ತೀರಿ?

ನಿಮ್ಮ ಸಂಸದೀಯ ಕ್ಷೇತ್ರ ಯಾವುದು?

ಇದನ್ನು ಓದಿ: ಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...