Homeಕರ್ನಾಟಕವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

ವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

- Advertisement -
- Advertisement -

ಕೇಂದ್ರ ಸರ್ಕಾರವು 2023ರ ಸೆಪ್ಟೆಂಬರ್ 18ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಘೋಷಿಸಿದೆ. ಈ ಅಧಿವೇಶನದ ಕಾರ್ಯಸೂಚಿಯನ್ನು ಬಹಿರಂಗಪಡಿಸಲು ಪ್ರತಿಪಕ್ಷಗಳು ಆಗ್ರಹಿಸಿದ್ದರೂ, ಕೇಂದ್ರ ಸರ್ಕಾರವು ಕಾರ್ಯಸೂಚಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆ ಬಹುತ್ವ ಕರ್ನಾಟಕ ಸಂಘಟನೆ ‘ಸಂಸತ್ತಿನ ವಿಶೇಷ ಅಧಿವೇಶನ- ಜನಸಾಮಾನ್ಯರ ಹಕ್ಕೊತ್ತಾಯ” ಬಿಡುಗಡೆ ಮಾಡಲು ಮುಂದಾಗಿದ್ದು, ಇದಕ್ಕೆ ಜನ ಸಾಮಾನ್ಯರಿಂದ ಅಭಿಪ್ರಾಯವನ್ನು ಕೇಳಿಕೊಂಡಿದೆ.

ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ನಿಮ್ಮ ಅನಿಸಿಕೆ, ಆಸೆಗಳನ್ನು ಕೆಳಗಿನ ಪ್ರಶ್ನಾವಳಿಗೆ ಉತ್ತರಿಸುವ ಮೂಲಕ ಅಭಿಪ್ರಾಯ ಕಳುಹಿಸಿಕೊಡಬೇಕೆಂದು ಈ ಸಂಘಟನೆ ಕೋರಿದೆ.

ಸಂಸತ್ತಿನ ಅಧಿವೇಶನಗಳು ಚುನಾಯಿತ ಸರ್ಕಾರದ ಅತ್ಯಂತ ನಿರ್ಣಾಯಕ ಸಾಂವಿಧಾನಿಕ ಪ್ರಕ್ರಿಯೆಗಳಲ್ಲಿ ಒಂದು. ಸಂಸತ್ತಿನ ಅಧಿವೇಶನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಂಸದರು, ಮಂತ್ರಿಗಳ ಕಾರ್ಯಕ್ಷಮತೆ ಬಗ್ಗೆ ಅಥವಾ ಪ್ರಮುಖ ವಿಷಯಗಳಲ್ಲಿ ಸರ್ಕಾರದ  ವೈಫಲ್ಯತೆ ಬಗ್ಗೆ ಪ್ರಶ್ನೆಗಳನ್ನು ಕೇಳಲು ಸಾಂವಿಧಾನಿಕ ಅವಕಾಶವಿದೆ.

ಆದರೆ ಸೆ.18ರ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಗೌಪ್ಯವಾಗಿರಿಸಿರುವುದು ಮಾತ್ರವಲ್ಲದೆ, ಪ್ರಶ್ನೋತ್ತರ ಅವಧಿ ಮತ್ತು ಶೂನ್ಯ ವೇಳೆಯಂತಹ ಪ್ರಮುಖ ಕಾರ್ಯವಿಧಾನಗಳನ್ನು ಕೂಡ ಸರ್ಕಾರ ಸ್ಥಗಿತಗೊಳಿಸಿದೆ. ಚುನಾಯಿತ ಸರ್ಕಾರದ ಹೊಣೆಗಾರಿಕೆಯನ್ನು ಪಡೆಯಲು ಸ್ಥಾಪಿಸಲಾದ ಸಂಸದೀಯ ಕಾರ್ಯವಿಧಾನಗಳನ್ನು ಈ ಸರ್ಕಾರವು ಅಮಾನತುಗೊಳಿಸಿರುವುದು ಆತಂಕದ ವಿಷಯ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ.

ಈ ವಿಶೇಷ ಅಧಿವೇಶನದಲ್ಲಿ ಜನಸಾಮಾನ್ಯರು ಎದುರಿಸುವ ಮುಖ್ಯ ಸಮಸ್ಯೆಗಳ ಬಗ್ಗೆ ಚರ್ಚಿಸುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸಕ್ರೀಯ ನಾಗರಿಕರಾದ ನಿಮ್ಮಿಂದ, ಈ ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ಅನಿಸಿಕೆ, ಆಸೆಗಳನ್ನು ನಮ್ಮೊಂದಿಗೆ ಕೆಳಗಿನ ಪ್ರಶ್ನಾವಳಿಯ ಮೂಲಕ ಹಂಚಿಕೊಳ್ಳಲು ಕೋರುತ್ತೇವೆ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ ಅಲ್ಲದೆ ಈ ಪ್ರಶ್ನಾವಳಿಗೆ ಉತ್ತರಿಸುವವರ ಹೆಸರು, ಇ-ಮೇಲ್, ವಿಳಾಸ, ಯಾವ ಮಾಹಿತಿಯನ್ನೂ ನಾವು ಸಂಗ್ರಹಿಸುವುದಿಲ್ಲ ಎಂದು ಸಂಘಟನೆ ಹೇಳಿದೆ.

ಪ್ರಶ್ನಾವಳಿಗಳು ಈ ಕೆಳಗಿನ ರೀತಿ ಇರಲಿದೆ..

ಈ ವಿಶೇಷ ಅಧಿವೇಶನದಲ್ಲಿ ಚರ್ಚಿಸಬೇಕೆಂದು ನೀವು ಭಾವಿಸುವ ಪ್ರಮುಖ 3 ವಿಷಯಗಳನ್ನು ಆಯ್ಕೆ ಮಾಡಿ  

ಮಣಿಪುರದಲ್ಲಿ 5 ತಿಂಗಳಿಗಿಂತಲೂ ಹೆಚ್ಚು ಕಾಲ ನಡೆಯುತ್ತಿರುವ ಹಿಂಸಾಚಾರ

ಭಾರತದ ವಿವಿಧ ಭಾಗಗಳಲ್ಲಿ ಪ್ರವಾಹ, ಬರ, ಹೀಟ್ ವೇವ್, ಇತರ ಹವಾಮಾನ ವೈಪರಿತ್ಯದಿಂದಾಗುತ್ತಿರುವ ಅಪಾಯಗಳು

ಮಹಿಳೆಯರ ವಿರುದ್ಧ ನಿರಂತರ ಅಪರಾಧಗಳು

ಹೆಚ್ಚುತ್ತಿರುವ ಅನೈತಿಕ ಪೊಲೀಸ್ ಗಿರಿ, ಗೂಂಡಾಗಿರಿ ಹಾಗೂ ಸರ್ಕಾರದಿಂದ ಜನರ ಮನೆ ಮೇಲೆ ಕಾನೂನು ಬಾಹಿರವಾಗಿ ಬುಲ್ಡೋಜರ್ ಬಳಕೆ

ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು

ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಹೆಚ್ಚುತ್ತಿರುವ ಬೆಲೆಗಳು

ನಿರುದ್ಯೋಗ ಮತ್ತು ಉದ್ಯೋಗ ಅಭದ್ರತೆಯ ಮುಂದುವರಿಯುತ್ತಿರುವ ಬಿಕ್ಕಟ್ಟು

ಅದಾನಿ ಕಂಪನಿಗಳ ಮೇಲಿನ ಭ್ರಷ್ಟಾಚಾರ, ಹಣಕಾಸಿನ ಅಕ್ರಮಗಳ ಆರೋಪಗಳು

ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು

ಈ ಪ್ರಶ್ನೆಗಳಿಗೆ ಉತ್ತರಿಸಿ

ನೀವು ಯಾವ ರಾಜ್ಯದಲ್ಲಿ ವಾಸಿಸುತ್ತೀರಿ?

ನಿಮ್ಮ ಸಂಸದೀಯ ಕ್ಷೇತ್ರ ಯಾವುದು?

ಇದನ್ನು ಓದಿ: ಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...